Homeಮುಖಪುಟ'ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ' - ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ

- Advertisement -
- Advertisement -

ಕೊರೊನ ಸೋಂಕಿನಿಂದ ಮಕ್ಕಳನ್ನು ದೂರವಿಡಲು ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಹಲವು ತಿಂಗಳುಗಳಿಂದಲೂ ಎಲ್ಲಾ ಹಂತದ ಮಕ್ಕಳಿಗೂ ಆನ್‌ಲೈನ್‌ನಲ್ಲಿ ಪಾಠ ಪ್ರವಚನ ಮಾಡಲಾಗುತ್ತಿದೆ. ಇದು ಪರಿಣಾಮಕಾರಿಯಾಗಿ ಮಕ್ಕಳಿಗೆ ತಲುಪುತ್ತಿದೆಯೇ? ಆನ್‌ಲೈನ್‌ ಪಾಠವನ್ನು ಮಕ್ಕಳು ಗ್ರಹಿಸುತ್ತಿದ್ದಾರೆಯೇ ಎಂಬ ಗೊಂದಲಕ್ಕೆ ಸರ್ಕಾರ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ನೇರ ಕಲಿಕೆಯ ಮಕ್ಕಳಿಗೇ ಪಾಠ ಅರ್ಥವಾಗುವುದಿಲ್ಲ. ಇನ್ನು ಆನ್‌ಲೈನ್‌ ಶಿಕ್ಷಣ ಹೇಗೆ ಅರ್ಥವಾದೀತು! ಹಾಗಾಗಿಯೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಒ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಹಲವು ಮನವಿಗಳನ್ನು ಸಲ್ಲಿಸಿ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಆಗ್ರಹಿಸಿವೆ.

ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಭಾಗಿಯಾದರೂ ಅವರ ಗೊಂದಲಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಪಾಠ ಹೇಗೆ ಮಾಡಬೇಕೆಂಬ ಬಗ್ಗೆ ತರಬೇತಿ ಪಡೆದಿಲ್ಲ. ಹಾಗಾಗಿ ಮಕ್ಕಳಿಗೆ ವಿಷಯ ಅರ್ಥ ಮಾಡಿಸುವುದು ಕಷ್ಟವೇ ಆಗಿದೆ.  ಶಿಕ್ಷಕ ವರ್ಗವೂ ಇದನ್ನು ಅಲ್ಲಗೆಳೆಯುತ್ತಿಲ್ಲ. ವಿದ್ಯಾರ್ಥಿಗಳಿಂದ “ಪಾಠ ಅರ್ಥವಾಗುತ್ತಿಲ್ಲ, ನಮಗೆ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತಿಲ್ಲ, ಹೆಚ್ಚು ಹೊತ್ತು ಕೇಳಲು ಆಗುತ್ತಿಲ್ಲ” ಎನ್ನುವ ದೂರು ಸಾಮಾನ್ಯ.

ಇದನ್ನೂ ಓದಿ: ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಆನ್‌ಲೈನ್‌ ಶಿಕ್ಷಣ ನೀಡಬೇಕೇ ಅಥವಾ ಆಫ್‌ಲೈನ್ ಶಿಕ್ಷಣ ಕೊಡಬೇಕೇ ಎಂಬ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ. ಆ ಗೊಂದಲವನ್ನು ಮಕ್ಕಳ ಮೇಲೆ ಮತ್ತು ಶಿಕ್ಷಕ ವೃಂದದ ಮೇಲೆಯೂ ವರ್ಗಾಯಿಸಿದೆ. ಆದ್ದರಿಂದ ಗೊಂದಲದ ಸನ್ನಿವೇಶವೇ ಮುಂದುವರಿದಿದೆ. ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಿಬ್ಬರೂ ಕೂಡ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ದೊಡ್ಡದೊಡ್ಡ ಶಿಕ್ಷಣ ಸಂಸ್ಥೆಗಳ ಮಾಲಿಕರು ಮನೆಪಾಠವನ್ನು ಬೆಂಬಲಿಸುವ ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಕೇಳುತ್ತಿದ್ದು, ಬಹುತ್ವವನ್ನು ಪ್ರತಿಪಾದಿಸುವ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳನ್ನು ನಿರ್ಲಕ್ಷಿಸಿರುವುದೇ ಈ ಗೊಂದಲಕ್ಕೆ ಕಾರಣ ಎನ್ನಲಾಗುತ್ತಿದೆ.

ಗೊಂದಲ ಸನ್ನಿವೇಶವನ್ನೇ ಬಂಡವಾಳ ಮಾಡಿಕೊಂಡಿರುವ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮಕ್ಕಳಿಂದ ಮೊದಲ ಕಂತಿನ ಹಣವನ್ನು ಕಟ್ಟಿಸಿಕೊಂಡಿವೆ. ಈಗ ಎರಡನೇ ಕಂತಿನ ಹಣವನ್ನು ನೀಡುವಂತೆ ಮಕ್ಕಳ ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಎರಡನೇ ಕಂತಿನ ಹಣ ನೀಡಿಲ್ಲದ ಮಕ್ಕಳಿಗೆ (ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಂತದ) ಆನ್‌ಲೈನ್‌ ಪಾಠದ ವಿಡಿಯೋಗಳನ್ನು ಹಾಕುವುದನ್ನು ನಿಲ್ಲಿಸಿದೆ. “ಹಣ ಕಟ್ಟಿ, ಪಾಠದ ವಿಡಿಯೋಗಳನ್ನು ಹಾಕುತ್ತೇವೆ” ಎಂದು ಮುಖ್ಯಶಿಕ್ಷಕರು ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಮೆಸೇಜ್ ಹಾಕಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಶುಲ್ಕದ ಹಣಕ್ಕಾಗಿ ಒತ್ತಡ ಹೇರುತ್ತಿದ್ದರೆ, ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಶಿಕ್ಷಣವನ್ನೇ ನಿಲ್ಲಿಸಿಬಿಡುವಂತೆ ಬಿಇಒ ಮತ್ತು ಡಿಡಿಪಿಐಗಳನ್ನು ಆಗ್ರಹಿಸಿವೆ. ಆನ್‌ಲೈನ್‌ ಶಿಕ್ಷಣ ಮಕ್ಕಳಿಗೆ ಅರ್ಥವಾಗುವುದಿಲ್ಲ. ಹಾಗಾಗಿ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ. ಫಲಿತಾಂಶದಲ್ಲಿ ಕಡಿಮೆಯಾದರೆ ಯಾರು ಹೊಣೆ? ಕಡಿಮೆ ಫಲಿತಾಂಶ ಬಂದರೆ ಅಂತಹ ಶಾಲೆಗಳನ್ನು ಮುಚ್ಚುವ ಭೀತಿಯೂ ಇದೆ.

ಕೋವಿಡ್ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣ ಪಡೆಯುವ ಮಕ್ಕಳು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕಡಿಮೆ ಅಂಕಗಳನ್ನು ಪಡೆಯುವ ಸಾಧ್ಯತೆ ಇದೆ. ಪಿಯುಸಿ ನಂತರದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ಕೋರ್ಸ್‌ಗಳಿಗೆ ಹೋಗಲು ತಡೆದಂತೆ ಆಗುತ್ತದೆ. ಕಡಿಮೆ ಅಂಕ ಗಳಿಸಿದವರ ಮುಂದಿನ ಭವಿಷ್ಯ ಮಂಕಾಗಲಿದೆ. ವಿದ್ಯಾರ್ಥಿಗೆ ಮುಂದಿನ ಆಯ್ಕೆ ಇಲ್ಲದಂತಾಗಿ ಶಿಕ್ಷಣವನ್ನು ಮೊಟುಕುಗೊಳಿಸಬೇಕಾದಂತಹ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕೇವಲ ಪ್ರತಿಷ್ಠಗಾಗಿ ಆನ್‌ಲೈನ್‌ ಶಿಕ್ಷಣದ ಮೂಲಕ ಪಾಠ ಮಾಡಿದರೆ ಅದು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿದಂತೆಯೇ ಆಗುತ್ತದೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣ ಅಧಿಕಾರಿಗಳಿಗೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ ಹನುಮಂತರಾಯಪ್ಪ.

ಇದನ್ನೂ ಓದಿ: ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಮಾತು ದೂರವೇ ಉಳಿದಿದೆ. ನೆಟ್‌ವರ್ಕ್ ಮತ್ತು ಸಿಗ್ನಲ್ ಸಿಗದೇ ಇರುವ ಸಮಸ್ಯೆಯಿಂದ ಪಾಠ ಕೇಳಲು ಆಗುವುದಿಲ್ಲ. ನಗರ ಪ್ರದೇಶದ ಕೆಲವೇ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲವಾಗಬಹುದು. ಆದರೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವ ಮಂದಿ ಕಡಿಮೆ. ಗ್ರಾಮೀಣ ಬಡ ವಿದ್ಯಾರ್ಥಿಗಳು ನೇರ ತರಗತಿಗಳಿಗೆ ಬರಬೇಕೆಂದರೆ ಬಸ್ ವ್ಯವಸ್ಥೆಯೂ ಇಲ್ಲ. ಇದು ಆ ವಿದ್ಯಾರ್ಥಿಗಳು ಉಭಯ ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಆನ್‌ಲೈನ್‌ ವ್ಯವಸ್ಥೆ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಭ್ಯವಾದರೆ ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳು ಶಿಕ್ಷಣದಿಂದ ದೂರವೇ ಉಳಿಯುವಂತೆ ಮಾಡಿದೆ.

ಸರ್ಕಾರಿ ಶಾಲಾ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಬಹುತೇಕ ಮಕ್ಕಳು ಬಡ-ಮಧ್ಯಮ ವರ್ಗದ ಕುಟುಂಬದವರಾಗಿದ್ದು 4ಜಿ ಯಂತಹ ಮೊಬೈಲ್ ಖರೀದಿ ಮಾಡಲು ಶಕ್ತವಾಗಿಲ್ಲ. ಮೊಬೈಲ್ ಇದ್ದವರು ನೆಟ್‌ವೆರ್ಕ್ ಸಿಗದೆ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಒಂದು ಕಡೆಯಾದರೆ ಮಧ್ಯಮ ವರ್ಗದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಸಹಾಯಕತೆಯಿಂದ ಏನೂ ತೋಚದಂತಹ ಸ್ಥಿತಿಗೆ ತಲುಪಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಡುವೆ ಭಾರೀ ಕಂದಕ ನಿರ್ಮಾಣವಾಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಜ್ಞಾನಿಕ ಶಿಕ್ಷಣ ನೀಡುವತ್ತ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಿ…!!!
    ಈ ಆನ್ಲೈನ್ ತರಗತಿಯಿಂದಾಗಿ ಅನೇಕ ಮಕ್ಕಳು ದುರಭ್ಯಾಸ ಗಳಿಗೆ ಬಲಿಯಾಗುತ್ತಿದ್ದಾರೆ.! ಹಾಗೂ ಆನ್ಲೈನ್ ನಲ್ಲಿ ಪಾಠ ಕೇಳುವುದಕ್ಕಿಂತ ಅನ್ಯರ ಜೊತೆಗೆ ಚಾಟಿಂಗ್ ಮಾಡುವುದೇ ಹೆಚ್ಚು…!
    ಆನ್ಲೈನ್ ಶಿಕ್ಷಣ ವ್ಯವಸ್ಥೆ ಯಿಂದಾಗಿ ಮಕ್ಕಳು ಹಾಳಾಗುತ್ತಿದ್ದಾರೆ, ಆನ್ಲೈನ್ ಶಿಕ್ಷಣ ದಿಂದ ಯಾವುದೇ ಪ್ರಯೋಜನ ಇಲ್ಲ, ನಿಜವಾಗಿಯೂ ನಮ್ಮ ರಾಜ್ಯದ ಈಗಿನ ಶಿಕ್ಷಣ ನೀತಿಯೇ ಮಕ್ಕಳನ್ನು ಹಾಳು ಮಾಡುತ್ತಿದೆ…!!!
    (ಆನ್ಲೈನ್ ಶಿಕ್ಷಣ ಸರಿ ಅನಿಸುವುದೇ ಆದರೆ ನನ್ನ ನಂಬರ್ ಗೆ ಕರೆ ಮಾಡಿ 8496092478)
    :- ಅನಿಲ್ ಕುಮಾರ್,
    ಹಂಗಳ ಗ್ರಾಮ, ಗುಂಡ್ಲುಪೇಟೆ ತಾಲೂಕು

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...