Homeಚಳವಳಿಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರವು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ನೀಡಬೇಕು ಎಂದು ಹೇಳಿಕೆ ತಿಳಿಸಿದೆ

- Advertisement -
- Advertisement -

ಆನ್‌ಲೈನ್ ಶಿಕ್ಷಣ ನಿಲ್ಲಿಸಬೇಕು, ತಾರತಮ್ಯ ತಡೆಗಟ್ಟಬೇಕು, ಪರೀಕ್ಷೆ ರದ್ದುಪಡಿಸಬೇಕು, ಉದ್ಯೋಗ ಸೃಷ್ಟಿಗೆ ಮುಂದಾಗಬೇಕು, ಬೆಲೆ ಇಳಿಕೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಜುಲೈ 08ರಂದು ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗೆ SFI ರಾಜ್ಯ ಸಮಿತಿ ಕರೆ ನೀಡಿದೆ.

ಈ ಕುರಿತು SFI ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ.ಕೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಕೋವಿಡ್-19 ರಭಸವಾಗಿ ಹರಡುತ್ತಿರುವ ಈ ಸಮಯದಲ್ಲಿ ವಿಶ್ವವಿದ್ಯಾಲಯ, ಹಾಸ್ಟೆಲ್‌ಗಳನ್ನು ಕೋವಿಡ್ ಆಸ್ಪತ್ರೆ, ಕ್ವಾರೆಂಟೈನ್ ಕೇಂದ್ರಗಳಾಗಿ ಬದಲಾಯಿಸಿರುವುದರಿಮದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ರಕ್ಷಣೆಯ ಹೊಣೆಗಾರಿಕೆ ಅರಿತು ಸರ್ಕಾರ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಎಸ್ಎಫ್ಐ ಆಗ್ರಹಿಸಿದೆ.

ಆರು ತಿಂಗಳ ಕಾಲ ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಸೆಮಿಸ್ಟರ್ ಶುಲ್ಕ, ಅಭಿವೃದ್ಧಿ ಶುಲ್ಕ, ಪರೀಕ್ಷಾ ಶುಲ್ಕ, ಹಾಸ್ಟೆಲ್ ಶುಲ್ಕಗಳನ್ನು ಲಾಕ್‌ಡೌನ್ ಸಮಯದಲ್ಲಿ ಯಾವುದೇ ಶೈಕ್ಷಣಿಕ ಶುಲ್ಕಗಳನ್ನು ವಿದ್ಯಾರ್ಥಿಗಳಿಗೆ ವಿಧಿಸಬಾರದು. ಅಭಿವೃದ್ಧಿ ಶುಲ್ಕ, ಪ್ರವೇಶ ಶುಲ್ಕ ಇತ್ಯಾದಿಗಳ ಹೆಸರಿನಲ್ಲಿ ಯಾವುದೇ ಶೋಷಣೆ ಇರಬಾರದು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಮಕ್ಕಳು ಹಸಿವಿನಿಂದ ನರಳುವುದನ್ನು ನಿಲ್ಲಿಸಬೇಕು. ಹನ್ನೆರಡನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರವು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ನೀಡಬೇಕು ಎಂದು ಹೇಳಿಕೆ ತಿಳಿಸಿದೆ.

ಆನ್ ಲೈನ್ ಶಿಕ್ಷಣವನ್ನು ಕಡ್ಡಾಯಗೊಳಿಸುವುದು ಸರಿಯಲ್ಲ. ಇದರಿಂದ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ವ್ಯಾಪಾರೀಕರಣ ಆಗುತ್ತದೆ. ಇದರ ಪರಿಣಾಮವಾಗಿ ಸಾರ್ವಜನಿಕ ಶಿಕ್ಷಣ, ಮುಖಾಮುಖಿ ಬೋಧನಾ ವಿಧಾನ, ಕ್ಯಾಂಪಸ್‌ಗಳಲ್ಲಿ ಸಿಗುವ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಶಿಕ್ಷಣದ ಹಕ್ಕುಗಳನ್ನು ದುರ್ಬಲಗೊಳಿಸುವ ಹುನ್ನಾರ ಅಡಗಿದೆ.
ಕೋವಿಡ್ -19 ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ಅಡೆತಡೆಗಳ ಅವಧಿಯಲ್ಲಿ, ಶೈಕ್ಷಣಿಕ ವರ್ಷವನ್ನು ಅಡ್ಡಿಪಡಿಸದಂತೆ ಆನ್ ಲೈನ್ ವಿಧಾನಗಳನ್ನು ಬಳಸಿಕೊಳ್ಳಬಹುದು. ಆದರೆ ಇದು ಶಾಶ್ವತ ಪರ್ಯಾಯವಾಗಲು ಸಾಧ್ಯವಿಲ್ಲ. ಸಂಬಂಧಪಟ್ಟ ಪ್ರದೇಶದ ಎಲ್ಲ ವಿದ್ಯಾರ್ಥಿಗಳಿಂದ ಡಿಜಿಟಲ್ ಸಾಧನಗಳಿಗೆ ಸಾರ್ವತ್ರಿಕ ಪ್ರವೇಶವಿದ್ದಲ್ಲಿ ಮಾತ್ರ ಇದನ್ನು ಬಳಸಿಕೊಳ್ಳಬೇಕು. ಶಿಕ್ಷಣದಲ್ಲಿ ಯಾವುದೇ ಡಿಜಿಟಲ್ ತಾರತಮ್ಯವನ್ನು ಎಸ್‌ಎಫ್‌ಐ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಳಸಮುದಾಯದ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಫೆಲೋಶಿಪ್ ವಿತರಿಸಬೇಕು. ಶಿಕ್ಷಣ ಸಂಸ್ಥೆಗಳು/ವಿದ್ಯಾಲಯಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು, ಉಪನ್ಯಾಸಕರು ಎಲ್ಲಾ ಕಾರ್ಮಿಕರ ಬಾಕಿ ಇರುವ ವೇತನಗಳನ್ನು ಶೀಘ್ರವಾಗಿ ಪಾವತಿಸಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಕೋವಿಡ್-19 ಪರೀಕ್ಷೆಗಳನ್ನು ಉಚಿತವಾಗಿ ಮಾಡಬೇಕು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿಲ್ಲಿಸಬೇಕು, ಉದ್ಯೋಗ ಸೃಷ್ಟಿಸಲು, ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ ಎಂದು ವಾಸುದೇವರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...