Homeಚಳವಳಿಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರವು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ನೀಡಬೇಕು ಎಂದು ಹೇಳಿಕೆ ತಿಳಿಸಿದೆ

- Advertisement -
- Advertisement -

ಆನ್‌ಲೈನ್ ಶಿಕ್ಷಣ ನಿಲ್ಲಿಸಬೇಕು, ತಾರತಮ್ಯ ತಡೆಗಟ್ಟಬೇಕು, ಪರೀಕ್ಷೆ ರದ್ದುಪಡಿಸಬೇಕು, ಉದ್ಯೋಗ ಸೃಷ್ಟಿಗೆ ಮುಂದಾಗಬೇಕು, ಬೆಲೆ ಇಳಿಕೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಜುಲೈ 08ರಂದು ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗೆ SFI ರಾಜ್ಯ ಸಮಿತಿ ಕರೆ ನೀಡಿದೆ.

ಈ ಕುರಿತು SFI ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ.ಕೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಕೋವಿಡ್-19 ರಭಸವಾಗಿ ಹರಡುತ್ತಿರುವ ಈ ಸಮಯದಲ್ಲಿ ವಿಶ್ವವಿದ್ಯಾಲಯ, ಹಾಸ್ಟೆಲ್‌ಗಳನ್ನು ಕೋವಿಡ್ ಆಸ್ಪತ್ರೆ, ಕ್ವಾರೆಂಟೈನ್ ಕೇಂದ್ರಗಳಾಗಿ ಬದಲಾಯಿಸಿರುವುದರಿಮದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ರಕ್ಷಣೆಯ ಹೊಣೆಗಾರಿಕೆ ಅರಿತು ಸರ್ಕಾರ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಎಸ್ಎಫ್ಐ ಆಗ್ರಹಿಸಿದೆ.

ಆರು ತಿಂಗಳ ಕಾಲ ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಸೆಮಿಸ್ಟರ್ ಶುಲ್ಕ, ಅಭಿವೃದ್ಧಿ ಶುಲ್ಕ, ಪರೀಕ್ಷಾ ಶುಲ್ಕ, ಹಾಸ್ಟೆಲ್ ಶುಲ್ಕಗಳನ್ನು ಲಾಕ್‌ಡೌನ್ ಸಮಯದಲ್ಲಿ ಯಾವುದೇ ಶೈಕ್ಷಣಿಕ ಶುಲ್ಕಗಳನ್ನು ವಿದ್ಯಾರ್ಥಿಗಳಿಗೆ ವಿಧಿಸಬಾರದು. ಅಭಿವೃದ್ಧಿ ಶುಲ್ಕ, ಪ್ರವೇಶ ಶುಲ್ಕ ಇತ್ಯಾದಿಗಳ ಹೆಸರಿನಲ್ಲಿ ಯಾವುದೇ ಶೋಷಣೆ ಇರಬಾರದು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಮಕ್ಕಳು ಹಸಿವಿನಿಂದ ನರಳುವುದನ್ನು ನಿಲ್ಲಿಸಬೇಕು. ಹನ್ನೆರಡನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರವು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ನೀಡಬೇಕು ಎಂದು ಹೇಳಿಕೆ ತಿಳಿಸಿದೆ.

ಆನ್ ಲೈನ್ ಶಿಕ್ಷಣವನ್ನು ಕಡ್ಡಾಯಗೊಳಿಸುವುದು ಸರಿಯಲ್ಲ. ಇದರಿಂದ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ವ್ಯಾಪಾರೀಕರಣ ಆಗುತ್ತದೆ. ಇದರ ಪರಿಣಾಮವಾಗಿ ಸಾರ್ವಜನಿಕ ಶಿಕ್ಷಣ, ಮುಖಾಮುಖಿ ಬೋಧನಾ ವಿಧಾನ, ಕ್ಯಾಂಪಸ್‌ಗಳಲ್ಲಿ ಸಿಗುವ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಶಿಕ್ಷಣದ ಹಕ್ಕುಗಳನ್ನು ದುರ್ಬಲಗೊಳಿಸುವ ಹುನ್ನಾರ ಅಡಗಿದೆ.
ಕೋವಿಡ್ -19 ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ಅಡೆತಡೆಗಳ ಅವಧಿಯಲ್ಲಿ, ಶೈಕ್ಷಣಿಕ ವರ್ಷವನ್ನು ಅಡ್ಡಿಪಡಿಸದಂತೆ ಆನ್ ಲೈನ್ ವಿಧಾನಗಳನ್ನು ಬಳಸಿಕೊಳ್ಳಬಹುದು. ಆದರೆ ಇದು ಶಾಶ್ವತ ಪರ್ಯಾಯವಾಗಲು ಸಾಧ್ಯವಿಲ್ಲ. ಸಂಬಂಧಪಟ್ಟ ಪ್ರದೇಶದ ಎಲ್ಲ ವಿದ್ಯಾರ್ಥಿಗಳಿಂದ ಡಿಜಿಟಲ್ ಸಾಧನಗಳಿಗೆ ಸಾರ್ವತ್ರಿಕ ಪ್ರವೇಶವಿದ್ದಲ್ಲಿ ಮಾತ್ರ ಇದನ್ನು ಬಳಸಿಕೊಳ್ಳಬೇಕು. ಶಿಕ್ಷಣದಲ್ಲಿ ಯಾವುದೇ ಡಿಜಿಟಲ್ ತಾರತಮ್ಯವನ್ನು ಎಸ್‌ಎಫ್‌ಐ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಳಸಮುದಾಯದ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಫೆಲೋಶಿಪ್ ವಿತರಿಸಬೇಕು. ಶಿಕ್ಷಣ ಸಂಸ್ಥೆಗಳು/ವಿದ್ಯಾಲಯಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು, ಉಪನ್ಯಾಸಕರು ಎಲ್ಲಾ ಕಾರ್ಮಿಕರ ಬಾಕಿ ಇರುವ ವೇತನಗಳನ್ನು ಶೀಘ್ರವಾಗಿ ಪಾವತಿಸಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಕೋವಿಡ್-19 ಪರೀಕ್ಷೆಗಳನ್ನು ಉಚಿತವಾಗಿ ಮಾಡಬೇಕು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿಲ್ಲಿಸಬೇಕು, ಉದ್ಯೋಗ ಸೃಷ್ಟಿಸಲು, ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ ಎಂದು ವಾಸುದೇವರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...