Homeಮುಖಪುಟಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕಳವಳ ವ್ಯಕ್ತಪಡಿಸಿರುವ ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

- Advertisement -
- Advertisement -

ಕೇರಳ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದ್ದ ವಿವಾದಾತ್ಮಕ ಪೊಲೀಸ್ ಕಾನೂನು ತಿದ್ದುಪಡಿಯನ್ನು ಹಿಂಪಡೆಯಲಾಗಿದ್ದು, ತಿದ್ದುಪಡಿಯನ್ನು ಜಾರಿಗೆ ತರುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ವಿವರವಾದ ಚರ್ಚೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತಿದ್ದುಪಡಿಯ ವಿರುದ್ಧ ಸಿಪಿಎಂ ಕೇಂದ್ರ ನಾಯಕತ್ವವು ವಿರೋಧ ವ್ಯಕ್ತಪಡಿಸಿದ ನಂತರ ಕೇರಳ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಕೇರಳ ಸರ್ಕಾರ ಮಾಡಿದ ತಿದ್ದುಪಡಿ ಸೆಕ್ಷನ್ 118 ಎ ಅನ್ನು ಮರುಪರಿಶೀಲಿಸುವಂತೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಒತ್ತಾಯಿಸಿದ್ದರು.

ಇದನ್ನೂ ಓದಿ: ಪೊಲೀಸ್ ಕಾಯ್ದೆ ತಿದ್ದುಪಡಿಗೆ ಸಿಪಿಎಂ ಕೇಂದ್ರ ಸಮಿತಿ ವಿರೋಧ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯ ಪೂರ್ಣ ಪಠ್ಯ

ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಘನತೆಯನ್ನು ಪ್ರಶ್ನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಅದರ ಹೊರಗೆ ವ್ಯಾಪಕವಾಗಿ ನಡೆಯುವ ಅಪಪ್ರಚಾರವನ್ನು ತಡೆಯುವ ಪ್ರಯತ್ನವಾಗಿ ಕೇರಳ ಸರ್ಕಾರ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಾನಹಾನಿಕರ, ಸುಳ್ಳು ಮತ್ತು ಅಶ್ಲೀಲ ಪ್ರಚಾರದ ವಿರುದ್ಧ ಸಮಾಜದ ವಿವಿಧ ವರ್ಗಗಳಿಂದ ಟೀಕೆಗಳು ಮತ್ತು ದೂರುಗಳಿವೆ. ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ದಾಳಿಗಳ ವಿರುದ್ದ ಸಮಾಜದಲ್ಲಿ ದೊಡ್ಡ ಪ್ರತಿಭಟನೆಗಳು ನಡೆಯುತ್ತಿವೆ. ಇದು ಕುಟುಂಬ ಸಂಬಂಧಗಳ ಮೇಲೆ ಪರಿಣಾಮ ಬೀರಿ, ಬಲಿಪಶುಗಳ ಆತ್ಮಹತ್ಯೆಗೆ ಕೂಡಾ ಕಾರಣವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮ ಮುಖ್ಯಸ್ಥರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿಯೇ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಯಿತು.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ಕೇರಳ

ತಿದ್ದುಪಡಿಯನ್ನು ಘೋಷಣೆ ಮಾಡುವುದರೊಂದಿಗೆ, ವಿವಿಧ ಭಾಗಗಳಿಂದ ವಿಭಿನ್ನ ಅಭಿಪ್ರಾಯಗಳು ಹುಟ್ಟಿಕೊಂಡಿದೆ. ಎಡಪಕ್ಷಗಳ ಬೆಂಬಲಿಗರು ಸೇರಿದಂತೆ ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕೂಡಾ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಾಮಾಜಿಕ ಜಾಲತಾಣದಲ್ಲಿ ಹಾಗೂ ಹೊರಗೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವೀಯ ಮೂಲ ತತ್ವದ ವಿರುದ್ದ ಅಪಪ್ರಚಾರದಲ್ಲಿ ತೊಡಗಿರುವವರು ಅದರಿಂದ ದೂರವಿರುವಂತೆ ಮತ್ತು ಸಮಾಜವು ಈ ವಿಷಯದ ಬಗ್ಗೆ ಜಾಗರೂಕರಾಗಿರಲು ನಾನು ವಿನಂತಿಸುತ್ತೇನೆ.

ಇದನ್ನೂ ಓದಿ: ಜೈಲು ಖೈದಿಗಳ ಮಕ್ಕಳ ಶಿಕ್ಷಣಕ್ಕೆ 20 ಲಕ್ಷ ಮೀಸಲಿಟ್ಟ ಕೇರಳ ಸರ್ಕಾರ!

ರಾಜ್ಯ ಸರ್ಕಾರ ಈ ಕಾನೂನಿನ ಮರೆಯಲ್ಲಿ ಮಾಧ್ಯಮ ಸ್ವಾತಂತ್ಯ್ರವನ್ನೇ ಕಿತ್ತುಕೊಳ್ಳಲು ಹೊರಟಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಷ್ಟೇ ಅಲ್ಲದೆ ತಿದ್ದುಪಡಿಯನ್ನು ವಕೀಲರುಗಳು ಕೂಡಾ ತೀವ್ರ ಟೀಕೆಗೆ ಗುರಿಪಡಿಸಿದ್ದರು. ಅಲ್ಲದೆ, ಈ ಕಾನೂನು ವ್ಯಕ್ತಿ ಸ್ವಾತಂತ್ಯ್ರಕ್ಕೆ ಹಾನಿ ಮಾಡುತ್ತದೆ ಎಂದು ಸುಪ್ರೀಂಕೋರ್ಟ್ ಈ ಹಿಂದೆ ದುರ್ಬಲಗೊಳಿಸಿದ ಕಾನೂನಾದ 118 ಡಿ ಮತ್ತು 66 ಎ ಸೆಕ್ಷನ್‌ಗಿಂತಲೂ ಇದು ಕೆಟ್ಟ ಪರಿಣಾಮ ಬೀರುತ್ತದೆ ಎಂದಿದ್ದ ಸಿಪಿಎಂ ಕೇಂದ್ರ ನಾಯಕತ್ವ ಮರುಪರಿಶೀಲಿಸುವಂತೆ ಒತ್ತಾಯಿಸಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ಸರ್ಕಾರ ನಿನ್ನೆ ಸುಗ್ರಿವಾಜ್ಞೆ ಹೊರಡಿಸಿದ್ದು, ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಹಿ ಮಾಡಿ ಅನುಮೋದನೆ ನೀಡಿದ್ದರು.

ಇದನ್ನೂ ಓದಿ:  ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...