Homeಮುಖಪುಟಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕಳವಳ ವ್ಯಕ್ತಪಡಿಸಿರುವ ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

- Advertisement -
- Advertisement -

ಕೇರಳ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದ್ದ ವಿವಾದಾತ್ಮಕ ಪೊಲೀಸ್ ಕಾನೂನು ತಿದ್ದುಪಡಿಯನ್ನು ಹಿಂಪಡೆಯಲಾಗಿದ್ದು, ತಿದ್ದುಪಡಿಯನ್ನು ಜಾರಿಗೆ ತರುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ವಿವರವಾದ ಚರ್ಚೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತಿದ್ದುಪಡಿಯ ವಿರುದ್ಧ ಸಿಪಿಎಂ ಕೇಂದ್ರ ನಾಯಕತ್ವವು ವಿರೋಧ ವ್ಯಕ್ತಪಡಿಸಿದ ನಂತರ ಕೇರಳ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಕೇರಳ ಸರ್ಕಾರ ಮಾಡಿದ ತಿದ್ದುಪಡಿ ಸೆಕ್ಷನ್ 118 ಎ ಅನ್ನು ಮರುಪರಿಶೀಲಿಸುವಂತೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಒತ್ತಾಯಿಸಿದ್ದರು.

ಇದನ್ನೂ ಓದಿ: ಪೊಲೀಸ್ ಕಾಯ್ದೆ ತಿದ್ದುಪಡಿಗೆ ಸಿಪಿಎಂ ಕೇಂದ್ರ ಸಮಿತಿ ವಿರೋಧ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯ ಪೂರ್ಣ ಪಠ್ಯ

ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಘನತೆಯನ್ನು ಪ್ರಶ್ನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಅದರ ಹೊರಗೆ ವ್ಯಾಪಕವಾಗಿ ನಡೆಯುವ ಅಪಪ್ರಚಾರವನ್ನು ತಡೆಯುವ ಪ್ರಯತ್ನವಾಗಿ ಕೇರಳ ಸರ್ಕಾರ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಾನಹಾನಿಕರ, ಸುಳ್ಳು ಮತ್ತು ಅಶ್ಲೀಲ ಪ್ರಚಾರದ ವಿರುದ್ಧ ಸಮಾಜದ ವಿವಿಧ ವರ್ಗಗಳಿಂದ ಟೀಕೆಗಳು ಮತ್ತು ದೂರುಗಳಿವೆ. ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ದಾಳಿಗಳ ವಿರುದ್ದ ಸಮಾಜದಲ್ಲಿ ದೊಡ್ಡ ಪ್ರತಿಭಟನೆಗಳು ನಡೆಯುತ್ತಿವೆ. ಇದು ಕುಟುಂಬ ಸಂಬಂಧಗಳ ಮೇಲೆ ಪರಿಣಾಮ ಬೀರಿ, ಬಲಿಪಶುಗಳ ಆತ್ಮಹತ್ಯೆಗೆ ಕೂಡಾ ಕಾರಣವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮ ಮುಖ್ಯಸ್ಥರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿಯೇ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಯಿತು.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ಕೇರಳ

ತಿದ್ದುಪಡಿಯನ್ನು ಘೋಷಣೆ ಮಾಡುವುದರೊಂದಿಗೆ, ವಿವಿಧ ಭಾಗಗಳಿಂದ ವಿಭಿನ್ನ ಅಭಿಪ್ರಾಯಗಳು ಹುಟ್ಟಿಕೊಂಡಿದೆ. ಎಡಪಕ್ಷಗಳ ಬೆಂಬಲಿಗರು ಸೇರಿದಂತೆ ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕೂಡಾ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಾಮಾಜಿಕ ಜಾಲತಾಣದಲ್ಲಿ ಹಾಗೂ ಹೊರಗೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವೀಯ ಮೂಲ ತತ್ವದ ವಿರುದ್ದ ಅಪಪ್ರಚಾರದಲ್ಲಿ ತೊಡಗಿರುವವರು ಅದರಿಂದ ದೂರವಿರುವಂತೆ ಮತ್ತು ಸಮಾಜವು ಈ ವಿಷಯದ ಬಗ್ಗೆ ಜಾಗರೂಕರಾಗಿರಲು ನಾನು ವಿನಂತಿಸುತ್ತೇನೆ.

ಇದನ್ನೂ ಓದಿ: ಜೈಲು ಖೈದಿಗಳ ಮಕ್ಕಳ ಶಿಕ್ಷಣಕ್ಕೆ 20 ಲಕ್ಷ ಮೀಸಲಿಟ್ಟ ಕೇರಳ ಸರ್ಕಾರ!

ರಾಜ್ಯ ಸರ್ಕಾರ ಈ ಕಾನೂನಿನ ಮರೆಯಲ್ಲಿ ಮಾಧ್ಯಮ ಸ್ವಾತಂತ್ಯ್ರವನ್ನೇ ಕಿತ್ತುಕೊಳ್ಳಲು ಹೊರಟಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಷ್ಟೇ ಅಲ್ಲದೆ ತಿದ್ದುಪಡಿಯನ್ನು ವಕೀಲರುಗಳು ಕೂಡಾ ತೀವ್ರ ಟೀಕೆಗೆ ಗುರಿಪಡಿಸಿದ್ದರು. ಅಲ್ಲದೆ, ಈ ಕಾನೂನು ವ್ಯಕ್ತಿ ಸ್ವಾತಂತ್ಯ್ರಕ್ಕೆ ಹಾನಿ ಮಾಡುತ್ತದೆ ಎಂದು ಸುಪ್ರೀಂಕೋರ್ಟ್ ಈ ಹಿಂದೆ ದುರ್ಬಲಗೊಳಿಸಿದ ಕಾನೂನಾದ 118 ಡಿ ಮತ್ತು 66 ಎ ಸೆಕ್ಷನ್‌ಗಿಂತಲೂ ಇದು ಕೆಟ್ಟ ಪರಿಣಾಮ ಬೀರುತ್ತದೆ ಎಂದಿದ್ದ ಸಿಪಿಎಂ ಕೇಂದ್ರ ನಾಯಕತ್ವ ಮರುಪರಿಶೀಲಿಸುವಂತೆ ಒತ್ತಾಯಿಸಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ಸರ್ಕಾರ ನಿನ್ನೆ ಸುಗ್ರಿವಾಜ್ಞೆ ಹೊರಡಿಸಿದ್ದು, ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಹಿ ಮಾಡಿ ಅನುಮೋದನೆ ನೀಡಿದ್ದರು.

ಇದನ್ನೂ ಓದಿ:  ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...