Homeಮುಖಪುಟಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕಳವಳ ವ್ಯಕ್ತಪಡಿಸಿರುವ ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

- Advertisement -
- Advertisement -

ಕೇರಳ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದ್ದ ವಿವಾದಾತ್ಮಕ ಪೊಲೀಸ್ ಕಾನೂನು ತಿದ್ದುಪಡಿಯನ್ನು ಹಿಂಪಡೆಯಲಾಗಿದ್ದು, ತಿದ್ದುಪಡಿಯನ್ನು ಜಾರಿಗೆ ತರುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ವಿವರವಾದ ಚರ್ಚೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತಿದ್ದುಪಡಿಯ ವಿರುದ್ಧ ಸಿಪಿಎಂ ಕೇಂದ್ರ ನಾಯಕತ್ವವು ವಿರೋಧ ವ್ಯಕ್ತಪಡಿಸಿದ ನಂತರ ಕೇರಳ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಕೇರಳ ಸರ್ಕಾರ ಮಾಡಿದ ತಿದ್ದುಪಡಿ ಸೆಕ್ಷನ್ 118 ಎ ಅನ್ನು ಮರುಪರಿಶೀಲಿಸುವಂತೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಒತ್ತಾಯಿಸಿದ್ದರು.

ಇದನ್ನೂ ಓದಿ: ಪೊಲೀಸ್ ಕಾಯ್ದೆ ತಿದ್ದುಪಡಿಗೆ ಸಿಪಿಎಂ ಕೇಂದ್ರ ಸಮಿತಿ ವಿರೋಧ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯ ಪೂರ್ಣ ಪಠ್ಯ

ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಘನತೆಯನ್ನು ಪ್ರಶ್ನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಅದರ ಹೊರಗೆ ವ್ಯಾಪಕವಾಗಿ ನಡೆಯುವ ಅಪಪ್ರಚಾರವನ್ನು ತಡೆಯುವ ಪ್ರಯತ್ನವಾಗಿ ಕೇರಳ ಸರ್ಕಾರ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಾನಹಾನಿಕರ, ಸುಳ್ಳು ಮತ್ತು ಅಶ್ಲೀಲ ಪ್ರಚಾರದ ವಿರುದ್ಧ ಸಮಾಜದ ವಿವಿಧ ವರ್ಗಗಳಿಂದ ಟೀಕೆಗಳು ಮತ್ತು ದೂರುಗಳಿವೆ. ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ದಾಳಿಗಳ ವಿರುದ್ದ ಸಮಾಜದಲ್ಲಿ ದೊಡ್ಡ ಪ್ರತಿಭಟನೆಗಳು ನಡೆಯುತ್ತಿವೆ. ಇದು ಕುಟುಂಬ ಸಂಬಂಧಗಳ ಮೇಲೆ ಪರಿಣಾಮ ಬೀರಿ, ಬಲಿಪಶುಗಳ ಆತ್ಮಹತ್ಯೆಗೆ ಕೂಡಾ ಕಾರಣವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮ ಮುಖ್ಯಸ್ಥರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿಯೇ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಯಿತು.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ಕೇರಳ

ತಿದ್ದುಪಡಿಯನ್ನು ಘೋಷಣೆ ಮಾಡುವುದರೊಂದಿಗೆ, ವಿವಿಧ ಭಾಗಗಳಿಂದ ವಿಭಿನ್ನ ಅಭಿಪ್ರಾಯಗಳು ಹುಟ್ಟಿಕೊಂಡಿದೆ. ಎಡಪಕ್ಷಗಳ ಬೆಂಬಲಿಗರು ಸೇರಿದಂತೆ ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕೂಡಾ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಾಮಾಜಿಕ ಜಾಲತಾಣದಲ್ಲಿ ಹಾಗೂ ಹೊರಗೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವೀಯ ಮೂಲ ತತ್ವದ ವಿರುದ್ದ ಅಪಪ್ರಚಾರದಲ್ಲಿ ತೊಡಗಿರುವವರು ಅದರಿಂದ ದೂರವಿರುವಂತೆ ಮತ್ತು ಸಮಾಜವು ಈ ವಿಷಯದ ಬಗ್ಗೆ ಜಾಗರೂಕರಾಗಿರಲು ನಾನು ವಿನಂತಿಸುತ್ತೇನೆ.

ಇದನ್ನೂ ಓದಿ: ಜೈಲು ಖೈದಿಗಳ ಮಕ್ಕಳ ಶಿಕ್ಷಣಕ್ಕೆ 20 ಲಕ್ಷ ಮೀಸಲಿಟ್ಟ ಕೇರಳ ಸರ್ಕಾರ!

ರಾಜ್ಯ ಸರ್ಕಾರ ಈ ಕಾನೂನಿನ ಮರೆಯಲ್ಲಿ ಮಾಧ್ಯಮ ಸ್ವಾತಂತ್ಯ್ರವನ್ನೇ ಕಿತ್ತುಕೊಳ್ಳಲು ಹೊರಟಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಷ್ಟೇ ಅಲ್ಲದೆ ತಿದ್ದುಪಡಿಯನ್ನು ವಕೀಲರುಗಳು ಕೂಡಾ ತೀವ್ರ ಟೀಕೆಗೆ ಗುರಿಪಡಿಸಿದ್ದರು. ಅಲ್ಲದೆ, ಈ ಕಾನೂನು ವ್ಯಕ್ತಿ ಸ್ವಾತಂತ್ಯ್ರಕ್ಕೆ ಹಾನಿ ಮಾಡುತ್ತದೆ ಎಂದು ಸುಪ್ರೀಂಕೋರ್ಟ್ ಈ ಹಿಂದೆ ದುರ್ಬಲಗೊಳಿಸಿದ ಕಾನೂನಾದ 118 ಡಿ ಮತ್ತು 66 ಎ ಸೆಕ್ಷನ್‌ಗಿಂತಲೂ ಇದು ಕೆಟ್ಟ ಪರಿಣಾಮ ಬೀರುತ್ತದೆ ಎಂದಿದ್ದ ಸಿಪಿಎಂ ಕೇಂದ್ರ ನಾಯಕತ್ವ ಮರುಪರಿಶೀಲಿಸುವಂತೆ ಒತ್ತಾಯಿಸಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಬೆದರಿಕೆ, ಮಾನಹಾನಿಕರ, ವಿವಾದಿತ ಪೋಸ್ಟ್ ಹಾಕುವುದರ ವಿರುದ್ಧ ಕೇರಳ ಸರ್ಕಾರ ನಿನ್ನೆ ಸುಗ್ರಿವಾಜ್ಞೆ ಹೊರಡಿಸಿದ್ದು, ಕಾನೂನಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಹಿ ಮಾಡಿ ಅನುಮೋದನೆ ನೀಡಿದ್ದರು.

ಇದನ್ನೂ ಓದಿ:  ಕೇರಳ: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗೆ 5 ವರ್ಷ ಜೈಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...