Homeಮುಖಪುಟಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

ಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪೊಲೀಸ್ ಕಾನ್ಸ್‌ಟೇಬಲ್‌ಗಳು ಮತ್ತು ಮೇಲಧಿಕಾರಿಗಳ ನೇಮಕಾತಿ ಮಾಡದೇ ಇರುವ ಕಾರಣಕ್ಕೆ ಪೊಲೀಸರು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಪೊಲೀಸ್ ಇಲಾಖೆಯಲ್ಲಿ ಮಾನವ ಸಂಪನ್ಮೂಲ ಕೊರತೆಯ ಪರಿಣಾಮದ ಬಗ್ಗೆ ಜೆ & ಕೆ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸಿಂಗ್ ಪ್ರಕಾರ, 4,000ಕ್ಕೂ ಹೆಚ್ಚು ಪೊಲೀಸ್ ಕಾನ್ಸ್‌ಟೇಬಲ್‌ಗಳ ಪೋಸ್ಟ್‌ಗಳು ಖಾಲಿ ಇವೆ ಮತ್ತು ನೇಮಕಾತಿ ಪರೀಕ್ಷೆಗಳನ್ನು ನಡೆಸಲು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯು ವಿಫಲವಾಗಿದೆ.

”ನಮ್ಮಲ್ಲಿ 4,000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಈ ಕೊರತೆಯು ಪೊಲೀಸ್ ಇಲಾಖೆಯಾದ್ಯಂತ ಕಂಡುಬರುತ್ತಿದೆ” ಎಂದು ಸಿಂಗ್ ಹೇಳಿದರು.

ಪೊಲೀಸ್ ಸಿಬ್ಬಂದಿಯ ನೇಮಕಾತಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಆಡಳಿತದ ವೈಫಲ್ಯದ ಬಗ್ಗೆ ಇದೇ ಮೊದಲ ಬಾರಿಗೆ ಜೆ & ಕೆ ಪೊಲೀಸ್ ಮುಖ್ಯಸ್ಥರು ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ, ಆಡಳಿತಾತ್ಮಕ ಬದಲಾವಣೆಗಳ ಭಾಗವಾಗಿ, ಪೊಲೀಸ್ ಇಲಾಖೆಯಲ್ಲಿನ ನೇಮಕಾತಿಯನ್ನು ಸಹ ಪೊಲೀಸ್ ಇಲಾಖೆಯಿಂದ ತೆಗೆದು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಗೆ (JKSSB) ಹಸ್ತಾಂತರಿಸಲಾಯಿತು.

2022ರಲ್ಲಿ, ಮಂಡಳಿಯು 1,200 ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತು – ಇದು ಕೇಂದ್ರಾಡಳಿತ ಪ್ರದೇಶದ ಆಡಳಿತದ ಅಡಿಯಲ್ಲಿ ಮೊದಲ ಪ್ರಮುಖ ನೇಮಕಾತಿಯಾಗಿದೆ. ಆದರೆ, ಈ  ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಇದೆ. ಹಾಗಾಗಿಯೇ ಇದು ಜಮ್ಮು ಮತ್ತು ಕಾಶ್ಮೀರಿನಾದ್ಯಂತ ಉದ್ಯೋಗ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆಗಳು ನಡೆದವು. ಸಿಬಿಐ ತನಿಖೆಯ ಪ್ರಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಪರೀಕ್ಷೆಯ ಪತ್ರಿಕೆಗಳು ₹ 20 ರಿಂದ 30 ಲಕ್ಷಕ್ಕೆ ಮಾರಾಟವಾಗಿವೆ ಎಂದು ಹೇಳಲಾಗಿದೆ.

ಆನಂತರ ನೇಮಕಾತಿ ಪಟ್ಟಿಯನ್ನು ರದ್ದುಗೊಳಿಸಿದ ನಂತರ, J&K ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೊಸ ಪರೀಕ್ಷೆ ಘೋಷಿಸಿದರು. ಪಾರದರ್ಶಕ ಮತ್ತು ನ್ಯಾಯಯುತ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು. ಆದರೆ ಹೊಸ ಪರೀಕ್ಷೆಗಳನ್ನು ಘೋಷಿಸಿದ ಕೂಡಲೇ, ಪರೀಕ್ಷೆಗಳನ್ನು ನಡೆಸಲು ಕಳಂಕಿತ ಮತ್ತು ಕಪ್ಪುಪಟ್ಟಿಗೆ ಸೇರಿದ ಏಜೆನ್ಸಿಗೆ ಗುತ್ತಿಗೆ ನೀಡುವ ಸರ್ಕಾರದ ನಿರ್ಧಾರವು ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ನೇಮಕಾತಿ ಪ್ರಕ್ರಿಯೆಯ ನ್ಯಾಯಸಮ್ಮತತೆಗೆ ಮತ್ತೊಂದು ಹೊಡೆತವನ್ನು ನೀಡಿದೆ.

”ಮೊದಲು, ಪೊಲೀಸರು ತನ್ನದೇ ಆದ ಪ್ರಕ್ರಿಯೆಯ ಮೂಲಕ ನೇಮಕಾತಿಗಳನ್ನು ಮಾಡುತ್ತಿದ್ದರು. ಹೊಸ ಪ್ರಯೋಗವನ್ನು ಮಾಡಲಾಯಿತು ಮತ್ತು ಪ್ರಕ್ರಿಯೆಯನ್ನು ಬೇರೆ ಇಲಾಖೆಗೆ ಹಸ್ತಾಂತರಿಸಲಾಯಿತು. ಅಂದಿನಿಂದ,  ಯಾವುದೇ ನೇಮಕಾತಿ ನಡೆಯುತ್ತಿಲ್ಲ” ಎಂದು ಸಿಂಗ್ ಹೇಳಿದರು.

ಇಲ್ಲಿಯವರೆಗೆ, ಸರ್ಕಾರದ ನೇಮಕಾತಿ ಸಂಸ್ಥೆ ಬಿಡುಗಡೆ ಮಾಡಿದ ನಾಲ್ಕು ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸಲಾಗಿದೆ. ಇವರನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ರಮೇಶ್ ಬಿಧುರಿ ಚುನಾವಣಾ ಉಸ್ತುವಾರಿಯಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...