Homeಮುಖಪುಟಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

ಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪೊಲೀಸ್ ಕಾನ್ಸ್‌ಟೇಬಲ್‌ಗಳು ಮತ್ತು ಮೇಲಧಿಕಾರಿಗಳ ನೇಮಕಾತಿ ಮಾಡದೇ ಇರುವ ಕಾರಣಕ್ಕೆ ಪೊಲೀಸರು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಪೊಲೀಸ್ ಇಲಾಖೆಯಲ್ಲಿ ಮಾನವ ಸಂಪನ್ಮೂಲ ಕೊರತೆಯ ಪರಿಣಾಮದ ಬಗ್ಗೆ ಜೆ & ಕೆ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸಿಂಗ್ ಪ್ರಕಾರ, 4,000ಕ್ಕೂ ಹೆಚ್ಚು ಪೊಲೀಸ್ ಕಾನ್ಸ್‌ಟೇಬಲ್‌ಗಳ ಪೋಸ್ಟ್‌ಗಳು ಖಾಲಿ ಇವೆ ಮತ್ತು ನೇಮಕಾತಿ ಪರೀಕ್ಷೆಗಳನ್ನು ನಡೆಸಲು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯು ವಿಫಲವಾಗಿದೆ.

”ನಮ್ಮಲ್ಲಿ 4,000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಈ ಕೊರತೆಯು ಪೊಲೀಸ್ ಇಲಾಖೆಯಾದ್ಯಂತ ಕಂಡುಬರುತ್ತಿದೆ” ಎಂದು ಸಿಂಗ್ ಹೇಳಿದರು.

ಪೊಲೀಸ್ ಸಿಬ್ಬಂದಿಯ ನೇಮಕಾತಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಆಡಳಿತದ ವೈಫಲ್ಯದ ಬಗ್ಗೆ ಇದೇ ಮೊದಲ ಬಾರಿಗೆ ಜೆ & ಕೆ ಪೊಲೀಸ್ ಮುಖ್ಯಸ್ಥರು ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ, ಆಡಳಿತಾತ್ಮಕ ಬದಲಾವಣೆಗಳ ಭಾಗವಾಗಿ, ಪೊಲೀಸ್ ಇಲಾಖೆಯಲ್ಲಿನ ನೇಮಕಾತಿಯನ್ನು ಸಹ ಪೊಲೀಸ್ ಇಲಾಖೆಯಿಂದ ತೆಗೆದು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಗೆ (JKSSB) ಹಸ್ತಾಂತರಿಸಲಾಯಿತು.

2022ರಲ್ಲಿ, ಮಂಡಳಿಯು 1,200 ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತು – ಇದು ಕೇಂದ್ರಾಡಳಿತ ಪ್ರದೇಶದ ಆಡಳಿತದ ಅಡಿಯಲ್ಲಿ ಮೊದಲ ಪ್ರಮುಖ ನೇಮಕಾತಿಯಾಗಿದೆ. ಆದರೆ, ಈ  ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಇದೆ. ಹಾಗಾಗಿಯೇ ಇದು ಜಮ್ಮು ಮತ್ತು ಕಾಶ್ಮೀರಿನಾದ್ಯಂತ ಉದ್ಯೋಗ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆಗಳು ನಡೆದವು. ಸಿಬಿಐ ತನಿಖೆಯ ಪ್ರಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಪರೀಕ್ಷೆಯ ಪತ್ರಿಕೆಗಳು ₹ 20 ರಿಂದ 30 ಲಕ್ಷಕ್ಕೆ ಮಾರಾಟವಾಗಿವೆ ಎಂದು ಹೇಳಲಾಗಿದೆ.

ಆನಂತರ ನೇಮಕಾತಿ ಪಟ್ಟಿಯನ್ನು ರದ್ದುಗೊಳಿಸಿದ ನಂತರ, J&K ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೊಸ ಪರೀಕ್ಷೆ ಘೋಷಿಸಿದರು. ಪಾರದರ್ಶಕ ಮತ್ತು ನ್ಯಾಯಯುತ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು. ಆದರೆ ಹೊಸ ಪರೀಕ್ಷೆಗಳನ್ನು ಘೋಷಿಸಿದ ಕೂಡಲೇ, ಪರೀಕ್ಷೆಗಳನ್ನು ನಡೆಸಲು ಕಳಂಕಿತ ಮತ್ತು ಕಪ್ಪುಪಟ್ಟಿಗೆ ಸೇರಿದ ಏಜೆನ್ಸಿಗೆ ಗುತ್ತಿಗೆ ನೀಡುವ ಸರ್ಕಾರದ ನಿರ್ಧಾರವು ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ನೇಮಕಾತಿ ಪ್ರಕ್ರಿಯೆಯ ನ್ಯಾಯಸಮ್ಮತತೆಗೆ ಮತ್ತೊಂದು ಹೊಡೆತವನ್ನು ನೀಡಿದೆ.

”ಮೊದಲು, ಪೊಲೀಸರು ತನ್ನದೇ ಆದ ಪ್ರಕ್ರಿಯೆಯ ಮೂಲಕ ನೇಮಕಾತಿಗಳನ್ನು ಮಾಡುತ್ತಿದ್ದರು. ಹೊಸ ಪ್ರಯೋಗವನ್ನು ಮಾಡಲಾಯಿತು ಮತ್ತು ಪ್ರಕ್ರಿಯೆಯನ್ನು ಬೇರೆ ಇಲಾಖೆಗೆ ಹಸ್ತಾಂತರಿಸಲಾಯಿತು. ಅಂದಿನಿಂದ,  ಯಾವುದೇ ನೇಮಕಾತಿ ನಡೆಯುತ್ತಿಲ್ಲ” ಎಂದು ಸಿಂಗ್ ಹೇಳಿದರು.

ಇಲ್ಲಿಯವರೆಗೆ, ಸರ್ಕಾರದ ನೇಮಕಾತಿ ಸಂಸ್ಥೆ ಬಿಡುಗಡೆ ಮಾಡಿದ ನಾಲ್ಕು ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸಲಾಗಿದೆ. ಇವರನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ರಮೇಶ್ ಬಿಧುರಿ ಚುನಾವಣಾ ಉಸ್ತುವಾರಿಯಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...