Homeಮುಖಪುಟಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

ಜಮ್ಮು-ಕಾಶ್ಮೀರದಲ್ಲಿ 4 ವರ್ಷದಿಂದ ಪೊಲೀಸರ ನೇಮಕಾತಿಯಾಗಿಲ್ಲ: ಆಡಳಿತದ ವಿರುದ್ಧ ಪೊಲೀಸ್ ಮಹಾನಿರ್ದೇಶಕ ಅಸಮಾಧಾನ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪೊಲೀಸ್ ಕಾನ್ಸ್‌ಟೇಬಲ್‌ಗಳು ಮತ್ತು ಮೇಲಧಿಕಾರಿಗಳ ನೇಮಕಾತಿ ಮಾಡದೇ ಇರುವ ಕಾರಣಕ್ಕೆ ಪೊಲೀಸರು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಪೊಲೀಸ್ ಇಲಾಖೆಯಲ್ಲಿ ಮಾನವ ಸಂಪನ್ಮೂಲ ಕೊರತೆಯ ಪರಿಣಾಮದ ಬಗ್ಗೆ ಜೆ & ಕೆ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸಿಂಗ್ ಪ್ರಕಾರ, 4,000ಕ್ಕೂ ಹೆಚ್ಚು ಪೊಲೀಸ್ ಕಾನ್ಸ್‌ಟೇಬಲ್‌ಗಳ ಪೋಸ್ಟ್‌ಗಳು ಖಾಲಿ ಇವೆ ಮತ್ತು ನೇಮಕಾತಿ ಪರೀಕ್ಷೆಗಳನ್ನು ನಡೆಸಲು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯು ವಿಫಲವಾಗಿದೆ.

”ನಮ್ಮಲ್ಲಿ 4,000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಈ ಕೊರತೆಯು ಪೊಲೀಸ್ ಇಲಾಖೆಯಾದ್ಯಂತ ಕಂಡುಬರುತ್ತಿದೆ” ಎಂದು ಸಿಂಗ್ ಹೇಳಿದರು.

ಪೊಲೀಸ್ ಸಿಬ್ಬಂದಿಯ ನೇಮಕಾತಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಆಡಳಿತದ ವೈಫಲ್ಯದ ಬಗ್ಗೆ ಇದೇ ಮೊದಲ ಬಾರಿಗೆ ಜೆ & ಕೆ ಪೊಲೀಸ್ ಮುಖ್ಯಸ್ಥರು ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ, ಆಡಳಿತಾತ್ಮಕ ಬದಲಾವಣೆಗಳ ಭಾಗವಾಗಿ, ಪೊಲೀಸ್ ಇಲಾಖೆಯಲ್ಲಿನ ನೇಮಕಾತಿಯನ್ನು ಸಹ ಪೊಲೀಸ್ ಇಲಾಖೆಯಿಂದ ತೆಗೆದು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಗೆ (JKSSB) ಹಸ್ತಾಂತರಿಸಲಾಯಿತು.

2022ರಲ್ಲಿ, ಮಂಡಳಿಯು 1,200 ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತು – ಇದು ಕೇಂದ್ರಾಡಳಿತ ಪ್ರದೇಶದ ಆಡಳಿತದ ಅಡಿಯಲ್ಲಿ ಮೊದಲ ಪ್ರಮುಖ ನೇಮಕಾತಿಯಾಗಿದೆ. ಆದರೆ, ಈ  ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಇದೆ. ಹಾಗಾಗಿಯೇ ಇದು ಜಮ್ಮು ಮತ್ತು ಕಾಶ್ಮೀರಿನಾದ್ಯಂತ ಉದ್ಯೋಗ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆಗಳು ನಡೆದವು. ಸಿಬಿಐ ತನಿಖೆಯ ಪ್ರಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಪರೀಕ್ಷೆಯ ಪತ್ರಿಕೆಗಳು ₹ 20 ರಿಂದ 30 ಲಕ್ಷಕ್ಕೆ ಮಾರಾಟವಾಗಿವೆ ಎಂದು ಹೇಳಲಾಗಿದೆ.

ಆನಂತರ ನೇಮಕಾತಿ ಪಟ್ಟಿಯನ್ನು ರದ್ದುಗೊಳಿಸಿದ ನಂತರ, J&K ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೊಸ ಪರೀಕ್ಷೆ ಘೋಷಿಸಿದರು. ಪಾರದರ್ಶಕ ಮತ್ತು ನ್ಯಾಯಯುತ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು. ಆದರೆ ಹೊಸ ಪರೀಕ್ಷೆಗಳನ್ನು ಘೋಷಿಸಿದ ಕೂಡಲೇ, ಪರೀಕ್ಷೆಗಳನ್ನು ನಡೆಸಲು ಕಳಂಕಿತ ಮತ್ತು ಕಪ್ಪುಪಟ್ಟಿಗೆ ಸೇರಿದ ಏಜೆನ್ಸಿಗೆ ಗುತ್ತಿಗೆ ನೀಡುವ ಸರ್ಕಾರದ ನಿರ್ಧಾರವು ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ನೇಮಕಾತಿ ಪ್ರಕ್ರಿಯೆಯ ನ್ಯಾಯಸಮ್ಮತತೆಗೆ ಮತ್ತೊಂದು ಹೊಡೆತವನ್ನು ನೀಡಿದೆ.

”ಮೊದಲು, ಪೊಲೀಸರು ತನ್ನದೇ ಆದ ಪ್ರಕ್ರಿಯೆಯ ಮೂಲಕ ನೇಮಕಾತಿಗಳನ್ನು ಮಾಡುತ್ತಿದ್ದರು. ಹೊಸ ಪ್ರಯೋಗವನ್ನು ಮಾಡಲಾಯಿತು ಮತ್ತು ಪ್ರಕ್ರಿಯೆಯನ್ನು ಬೇರೆ ಇಲಾಖೆಗೆ ಹಸ್ತಾಂತರಿಸಲಾಯಿತು. ಅಂದಿನಿಂದ,  ಯಾವುದೇ ನೇಮಕಾತಿ ನಡೆಯುತ್ತಿಲ್ಲ” ಎಂದು ಸಿಂಗ್ ಹೇಳಿದರು.

ಇಲ್ಲಿಯವರೆಗೆ, ಸರ್ಕಾರದ ನೇಮಕಾತಿ ಸಂಸ್ಥೆ ಬಿಡುಗಡೆ ಮಾಡಿದ ನಾಲ್ಕು ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸಲಾಗಿದೆ. ಇವರನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ರಮೇಶ್ ಬಿಧುರಿ ಚುನಾವಣಾ ಉಸ್ತುವಾರಿಯಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...