Homeಮುಖಪುಟಕರೂರು ಕಾಲ್ತುಳಿತ। ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ, ಆಯೋಗದ ವರದಿ ಆಧರಿಸಿ ಮುಂದಿನ ಕ್ರಮ: ಸಿಎಂ...

ಕರೂರು ಕಾಲ್ತುಳಿತ। ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ, ಆಯೋಗದ ವರದಿ ಆಧರಿಸಿ ಮುಂದಿನ ಕ್ರಮ: ಸಿಎಂ ಸ್ಟಾಲಿನ್

- Advertisement -
- Advertisement -

39 ಜೀವಗಳನ್ನು ಬಲಿ ಪಡೆದ ಕರೂರು ಕಾಲ್ತುಳಿತ ದುರಂತದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭಾನುವಾರ (ಸೆ.28) ಹೇಳಿದ್ದಾರೆ.

ನಿವೃತ್ತ ಹೈಕೋರ್ಟ್ ನ್ಯಾಯಾಧೀಶೆ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದ ತನಿಖಾ ಆಯೋಗದ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸ್ಟಾಲಿನ್, “ನಾನು ಯಾವುದೇ ರಾಜಕೀಯ ಹೇಳಿಕೆ ನೀಡಲು ಬಯಸುವುದಿಲ್ಲ. ಯಾವುದೇ ಕ್ರಮವು ತನಿಖಾ ಆಯೋಗದ ವರದಿ ಆಧರಿಸಿರುತ್ತದೆ” ಎಂದಿದ್ದಾರೆ.

ದುರಂತದ ಪ್ರಾಥಮಿಕ ವರದಿ, ನಟ-ರಾಜಕಾರಣಿ ವಿಜಯ್ ಅವರ ಬಂಧನದ ಬಗ್ಗೆ ಊಹಾಪೋಹಗಳು, ಕಾರ್ಯಕ್ರಮದ ಪೊಲೀಸ್ ಅನುಮತಿ ಮತ್ತು ಜನಸಂದಣಿ ನಿಯಂತ್ರಣದ ಕುರಿತು ಸಾಮಾಜಿಕ ಮಾಧ್ಯಮಗಳ ಟೀಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಅವರು ಮೇಲಿನಂತೆ ಉತ್ತರಿಸಿದ್ದಾರೆ.

ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸ್ಟಾಲಿನ್, ಗಾಯಾಳುಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ವೈದ್ಯರು 26 ಪುರುಷರು ಮತ್ತು 25 ಮಹಿಳೆಯರು ಸೇರಿ 51 ಜನರು ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಎಂಗೆ ಮಾಹಿತಿ ನೀಡಿದ್ದಾರೆ.

“ರಾಜಕೀಯ ಪಕ್ಷ ನಡೆಸಿದ ಕಾರ್ಯಕ್ರಮದಿಂದಾಗಿ ಜನರು ಪ್ರಾಣ ಕಳೆದುಕೊಂಡರು. ಇದು ಮತ್ತೆ ಎಲ್ಲಿಯೂ ಸಂಭವಿಸಬಾರದು” ಎಂದು ಸಿಎಂ ಸ್ಟಾಲಿನ್ ‘ತಮಿಳಗ ವೆಟ್ರಿ ಕಳಗಂ (ಟಿವಿಕೆ)’ ಪಕ್ಷದ ಹೆಸರನ್ನು ಉಲ್ಲೇಖಿಸದೆ ಹೇಳಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 1ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಶನಿವಾರ ರಾತ್ರಿ ಘೋಷಿಸಿದ್ದನ್ನು ಪುನರುಚ್ಚರಿಸಿದ್ದಾರೆ.

ಕಾಲ್ತುಳಿತ ದುರಂತದ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ಏಕಸದಸ್ಯ ತನಿಖಾ ಆಯೋಗದ ಮುಖ್ಯಸ್ಥರಾಗಿ ನಿವೃತ್ತ ನ್ಯಾಯಮೂರ್ತಿ ಅರುಣಾ ಜಗದೀಶನ್ ಅವರನ್ನು ನೇಮಿಸಲಾಗಿದೆ. ಅರುಣಾ ಜಗದೀಶನ್ ಅವರು ಈ ಹಿಂದೆ ಸಾತಂಕುಲಂ ಕಸ್ಟಡಿ ಸಾವಿನ ತನಿಖೆಯ ನೇತೃತ್ವ ವಹಿಸಿದ್ದರು.

ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; ತನಿಖೆಗೆ ಆಯೋಗ ರಚಿಸಿದ ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...