Homeಕರೋನಾ ತಲ್ಲಣ'ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ - ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

"ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ"

- Advertisement -
- Advertisement -

ಈಗಾಗಲೇ ಎಲ್ಲ ಲಸಿಕಾ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ಯಾವುದೇ ಬಗೆಯ ಹಂದಿ ಮಾಂಸ(ಪೋರ್ಕ್) ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದೂ ಹೇಳಿವೆ.

ಈ ಹಿನ್ನೆಲೆಯಲ್ಲಿ, “ಮುಸ್ಲಿಮರು ಹಂದಿ ಮಾಂಸದ ಅಂಶವಿದ್ದರೂ ಕೂಡ ಲಸಿಕೆ ತೆಗೆದುಕೊಳ್ಳಲು ಯಾವುದೇ ರೀತಿ-ರಿವಾಜು ಅಡ್ಡಿ ಮಾಡುವುದಿಲ್ಲ” ಎಂದು ಜಮಾತ್-ಎ-ಇಸ್ಲಾಂ-ಹಿಂದ್ (ಜೆಐಎಚ್) ಮಂಡಳಿ ಹೇಳಿದ್ದು, ಮುಸ್ಲಿಮರಲ್ಲಿ ಮೂಡಿದ್ದ ಲಸಿಕೆಯ ಗೊಂದಲವನ್ನು ತೊಡೆದು ಹಾಕುವ ಪ್ರಯತ್ನ ಮಾಡಿದೆ. ಭಾರತದಲ್ಲಿ ಇಂತಹ ನಿರ್ಣಯ ಪ್ರಕಟಿಸಿದ ಮೊದಲ ಮುಸ್ಲಿಂ ಸಂಸ್ಥೆ ಇದಾಗಿದೆ.

’ಇಸ್ಲಾಂ ಮಾನವ ಜೀವಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತದೆ ಮತ್ತು ಜೀವ ರಕ್ಷಣೆಗೆ ಆದ್ಯತೆ ನೀಡುತ್ತದೆ’ ಎಂದು ಜಮಾತ್ -ಎ-ಇಸ್ಲಾಂ-ಹಿಂದ್ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

’ಅನುಮತಿಸಲಾಗದ ಯಾವುದೇ ವಸ್ತು- ಅದರ ಗುಣಲಕ್ಷಣಗಳಲ್ಲಿ ಸಂಪೂರ್ಣ ಮಾರ್ಪಾಟನ್ನು ಹೊಂದಿದ್ದರೆ ಅದು ಶುದ್ಧವಾದುದು ಮತ್ತು ಅದನ್ನು ದೇಹಕ್ಕೆ ಸೇರಿಸಬಹುದು. ಈ ಆಧಾರದ ಮೇಲೆ, ಹರಾಮ್ ಪ್ರಾಣಿಯ ದೇಹದ ಭಾಗದಿಂದ ಪಡೆದ ಜೆಲಾಟಿನ್ ಬಳಕೆಯನ್ನು ಇಸ್ಲಾಮಿಕ್ ನ್ಯಾಯಶಾಸ್ತ್ರಜ್ಞರು ಅನುಮತಿಸಿದ್ದಾರೆ ಎಂದೂ ಮಂಡಳಿ ವಿವರಿಸಿದೆ.

ಹಲವು ದಿನಗಳಿಂದ, ’ಲಸಿಕೆಯಲ್ಲಿ ಹಂದಿ ಮಾಂಸದ ಅಂಶವಿದ್ದು, ಮುಸ್ಲಿಮರು ಲಸಿಕೆ ಪಡೆಯಬಾರದು’ ಎಂಬ ಆಧಾರರಹಿತ ಸುದ್ದಿಯೊಂದು ಜಗತ್ತಿನಾದ್ಯಂತ ಪ್ರಚಲಿತದಲ್ಲಿದೆ.

’ಯಾವುದೇ ಬೇರೆ ಆಯ್ಕೆ ಇಲ್ಲದಿರುವಾಗ, ಪೋರ್ಕ್ ಹೊಂದಿದ ಲಸಿಕೆ ಪಡೆಯುವುದರಲ್ಲೂ ತಪ್ಪಿಲ್ಲ’ ಎಂದು ಜೆಐಎಚ್ ಉಪಾಧ್ಯಕ್ಷ ಸಲೀಂ ಇಂಜಿನಿಯರ್ ಹೇಳಿದ್ದಾರೆ. ’ಬೇರೆ ಆಯ್ಕೆಗಳಿದ್ದರೆ ಅದು ಒಳ್ಳೆಯದೇ. ಆದರೆ ಆಯ್ಕೆಯೇ ಇಲ್ಲದಿರುವಾಗ ಯಾವುದೇ ಪಾಪಪ್ರಜ್ಞೆ ಅನುಭವಿಸದೇ ಲಸಿಕೆ ಪಡೆದುಕೊಳ್ಳುವುದು ಸರಿಯಾದ ಮಾರ್ಗ. ಇದು ಜೀವನ್ಮರಣದ ಪ್ರಶ್ನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ…

ಪಿಝರ್, ಮಾಡೆರ್ನಾ ಮತ್ತು ಅಸ್ಟ್ರಾಜೆನಿಕಾ ವಕ್ತಾರರು, ಲಸಿಕೆಯಲ್ಲಿ ಯಾವುದೇ ಬಗೆಯ ಪೋರ್ಕ್ ಅಂಶವಿಲ್ಲ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ರಾಝಾ ಅಕಾಡೆಮಿ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು, ಲಸಿಕೆಗಳ ವಿವರಗಳು ಮತ್ತು ಅವು ಪೋರ್ಕ್ ಒಳಗೊಂಡಿವೆಯೇ ಎಂಬುದನ್ನು ತಿಳಿಸಬೇಕು ಎಂದು ಕೋರಿತ್ತು.

’ಯಾವ ಲಸಿಕೆ ಏನನ್ನು ಒಳಗೊಂಡಿದೆ ಎಂಬುದನ್ನು ನಾವು ತಿಳಿಯಲು ಬಯಸಿದ್ದೆವು. ಪೋರ್ಕ್ ಇಲ್ಲದ ಲಸಿಕೆಯಿದ್ದರೆ ಅದನ್ನೇ ಪಡೆದುಕೊಳ್ಳಲು ಸೂಚಿಸಲು ಈ ಕ್ರಮ ಕೈಗೊಂಡಿದ್ದೆವು. ಇದೇನೂ ಸಲಹೆಯಲ್ಲ, ಆದರೆ ಪಾರದರ್ಶಕತೆಗಾಗಿ ಒಂದು ಮನವಿ ಅಷ್ಟೇ’ ಎಂದು ರಾಝಾ ಅಕಾಡೆಮಿಯ ಜನರಲ್ ಸೆಕ್ರೆಟರಿ ಸಯೀದ್ ನೂರಿ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಭಾರತದ ಹಿಂದೂ ಮಹಾಸಭಾ ಸೇರಿ ಹಲವು ಗುಂಪುಗಳು ಕೂಡ ಇಂತಹ ಮನವಿ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ರಾಷ್ಟ್ರಪತಿಗೆ ಪತ್ರ ಬರೆದು, ಯಾವುದಾದರೂ ಲಸಿಕೆಯಲ್ಲಿ ಗೋವಿನ ರಕ್ತದ ಅಂಶವಿದೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಡಿಸೆಂಬರ್‌ನಲ್ಲಿ ಐಎಎಸ್ ಅಧಿಕಾರಿ ಸಂಜಯ್ ದಿಕ್ಷಿತ್ ಮಾತನಾಡಿ, ‘ಮುಸ್ಲಿಮರು ಲಸಿಕೆಯನ್ನು ಬಾಯ್ಕಾಟ್ ಮಾಡಬೇಕು’ ಎಂದು ಕರೆ ನೀಡಿದ್ದರು. ಈ ಕುರಿತಂತೆ ’ದಿ ಪ್ರಿಂಟ್’ ಹಲವಾರು ಮುಸ್ಲಿಂ ಧರ್ಮಗುರುಗಳು, ಚಿಂತಕರನ್ನು ಮಾತಾಡಿಸಿದಾಗ ಅವರು ಲಸಿಕೆ ತೆಗೆದುಕೊಳ್ಳುವುದರ ಪರವೇ ಮಾತನಾಡಿದ್ದಾರೆ.

ಶಿಯಾ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಕಲ್ಬೆ ಜಾವೇದ್, ’ಲಸಿಕೆ ಪಡೆಯುವುದಕ್ಕೆ ಅನುಮತಿಯಿದೆ. ಯಾರಾದರೂ ಬೇಡ ಎಂದರೆ ಅವರು ಮುಸ್ಲಿಮರ ವಿರೋಧಿಗಳೆಂದೇ ಅರ್ಥ’ ಎಂದಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

’ಲಸಿಕೆಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಒಂದೇ ಒಂದು ಲಸಿಕೆಯಿದ್ದು ಅದು ಪೋರ್ಕ್ ಅಂಶ ಹೊಂದಿದ್ದರೆ, ಆಗ ಆ ಲಸಿಕೆ ಪಡೆಯುವುದು ಅನಿವಾರ್ಯ’ ಎಂದು ಜಮೈತ್-ಉಲೈಮಾ-ಎ-ಹಿಂದ್‌ನ ಜನರಲ್ ಸೆಕ್ರೆಟರಿ ಮಹಮೂದ್ ಮದಾನಿ ಹೇಳಿದ್ದಾರೆ.

’ದ್ವೇಷ ಪ್ರಚಾರದ ಭಾಗ’

’ಮಾನವ ಜೀವವೇ ಇಸ್ಲಾಂನ ಆದ್ಯತೆ. ಇದರಲ್ಲಿ ಚರ್ಚೆಯ ಅಗತ್ಯವೇ ಇಲ್ಲ. ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಪ್ರೊ. ಅಖ್ತಾನಿ ವಾಸೆ ತಿಳಿಸಿದ್ದಾರೆ.

ಮುಸ್ಲಿಮರು ಲಸಿಕೆ ಪಡೆಯಬಾರದು ಎನ್ನುವುದು ದ್ವೇಷದ ಪ್ರಚಾರ (ಹೇಟ್‌ಫುಲ್ ಪ್ರೊಪಗಂಡಾ) ಎಂದು ಅವರು ಹೇಳಿದ್ದಾರೆ.

’ಕೆಲವರು ಮುಸ್ಲಿಮರನ್ನು ಅವಮಾನಿಸಿ ನಿರಾಶೆಗೊಳಿಸಲು ನೋಡುತ್ತಾರೆ. ಈ ಪ್ರೊಪಗಂಡಾವೇ ಪೊಲೀಯೋ ಲಸಿಕೆ ಕಾರ್ಯಕ್ರಮದ ಸಂದರ್ಭದಲ್ಲೂ ಚಾಲ್ತಿಗೆ ಬಂದಿತ್ತು. ಆಗ ಮುಸ್ಲಿಂ ವಿದ್ವಾಂಸರು ಮಧ್ಯ ಪ್ರವೇಶಿಸಿ ಲಸಿಕೆ ವಿಷಯದಲ್ಲಿ ಯಾವುದೇ ಪೂರ್ವಗ್ರಹ ಬೇಡ ಎಂದು ಹೇಳಿದ್ದರು. ಈಗಲೂ ಅವರು ಆ ಕೆಲಸವನ್ನು ಮಾಡಬೇಕಿದೆ’ ಎಂದು ವಾಸೆ ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...