Homeಕರೋನಾ ತಲ್ಲಣ'ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ - ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

"ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ"

- Advertisement -
- Advertisement -

ಈಗಾಗಲೇ ಎಲ್ಲ ಲಸಿಕಾ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ಯಾವುದೇ ಬಗೆಯ ಹಂದಿ ಮಾಂಸ(ಪೋರ್ಕ್) ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದೂ ಹೇಳಿವೆ.

ಈ ಹಿನ್ನೆಲೆಯಲ್ಲಿ, “ಮುಸ್ಲಿಮರು ಹಂದಿ ಮಾಂಸದ ಅಂಶವಿದ್ದರೂ ಕೂಡ ಲಸಿಕೆ ತೆಗೆದುಕೊಳ್ಳಲು ಯಾವುದೇ ರೀತಿ-ರಿವಾಜು ಅಡ್ಡಿ ಮಾಡುವುದಿಲ್ಲ” ಎಂದು ಜಮಾತ್-ಎ-ಇಸ್ಲಾಂ-ಹಿಂದ್ (ಜೆಐಎಚ್) ಮಂಡಳಿ ಹೇಳಿದ್ದು, ಮುಸ್ಲಿಮರಲ್ಲಿ ಮೂಡಿದ್ದ ಲಸಿಕೆಯ ಗೊಂದಲವನ್ನು ತೊಡೆದು ಹಾಕುವ ಪ್ರಯತ್ನ ಮಾಡಿದೆ. ಭಾರತದಲ್ಲಿ ಇಂತಹ ನಿರ್ಣಯ ಪ್ರಕಟಿಸಿದ ಮೊದಲ ಮುಸ್ಲಿಂ ಸಂಸ್ಥೆ ಇದಾಗಿದೆ.

’ಇಸ್ಲಾಂ ಮಾನವ ಜೀವಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತದೆ ಮತ್ತು ಜೀವ ರಕ್ಷಣೆಗೆ ಆದ್ಯತೆ ನೀಡುತ್ತದೆ’ ಎಂದು ಜಮಾತ್ -ಎ-ಇಸ್ಲಾಂ-ಹಿಂದ್ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

’ಅನುಮತಿಸಲಾಗದ ಯಾವುದೇ ವಸ್ತು- ಅದರ ಗುಣಲಕ್ಷಣಗಳಲ್ಲಿ ಸಂಪೂರ್ಣ ಮಾರ್ಪಾಟನ್ನು ಹೊಂದಿದ್ದರೆ ಅದು ಶುದ್ಧವಾದುದು ಮತ್ತು ಅದನ್ನು ದೇಹಕ್ಕೆ ಸೇರಿಸಬಹುದು. ಈ ಆಧಾರದ ಮೇಲೆ, ಹರಾಮ್ ಪ್ರಾಣಿಯ ದೇಹದ ಭಾಗದಿಂದ ಪಡೆದ ಜೆಲಾಟಿನ್ ಬಳಕೆಯನ್ನು ಇಸ್ಲಾಮಿಕ್ ನ್ಯಾಯಶಾಸ್ತ್ರಜ್ಞರು ಅನುಮತಿಸಿದ್ದಾರೆ ಎಂದೂ ಮಂಡಳಿ ವಿವರಿಸಿದೆ.

ಹಲವು ದಿನಗಳಿಂದ, ’ಲಸಿಕೆಯಲ್ಲಿ ಹಂದಿ ಮಾಂಸದ ಅಂಶವಿದ್ದು, ಮುಸ್ಲಿಮರು ಲಸಿಕೆ ಪಡೆಯಬಾರದು’ ಎಂಬ ಆಧಾರರಹಿತ ಸುದ್ದಿಯೊಂದು ಜಗತ್ತಿನಾದ್ಯಂತ ಪ್ರಚಲಿತದಲ್ಲಿದೆ.

’ಯಾವುದೇ ಬೇರೆ ಆಯ್ಕೆ ಇಲ್ಲದಿರುವಾಗ, ಪೋರ್ಕ್ ಹೊಂದಿದ ಲಸಿಕೆ ಪಡೆಯುವುದರಲ್ಲೂ ತಪ್ಪಿಲ್ಲ’ ಎಂದು ಜೆಐಎಚ್ ಉಪಾಧ್ಯಕ್ಷ ಸಲೀಂ ಇಂಜಿನಿಯರ್ ಹೇಳಿದ್ದಾರೆ. ’ಬೇರೆ ಆಯ್ಕೆಗಳಿದ್ದರೆ ಅದು ಒಳ್ಳೆಯದೇ. ಆದರೆ ಆಯ್ಕೆಯೇ ಇಲ್ಲದಿರುವಾಗ ಯಾವುದೇ ಪಾಪಪ್ರಜ್ಞೆ ಅನುಭವಿಸದೇ ಲಸಿಕೆ ಪಡೆದುಕೊಳ್ಳುವುದು ಸರಿಯಾದ ಮಾರ್ಗ. ಇದು ಜೀವನ್ಮರಣದ ಪ್ರಶ್ನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ…

ಪಿಝರ್, ಮಾಡೆರ್ನಾ ಮತ್ತು ಅಸ್ಟ್ರಾಜೆನಿಕಾ ವಕ್ತಾರರು, ಲಸಿಕೆಯಲ್ಲಿ ಯಾವುದೇ ಬಗೆಯ ಪೋರ್ಕ್ ಅಂಶವಿಲ್ಲ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ರಾಝಾ ಅಕಾಡೆಮಿ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು, ಲಸಿಕೆಗಳ ವಿವರಗಳು ಮತ್ತು ಅವು ಪೋರ್ಕ್ ಒಳಗೊಂಡಿವೆಯೇ ಎಂಬುದನ್ನು ತಿಳಿಸಬೇಕು ಎಂದು ಕೋರಿತ್ತು.

’ಯಾವ ಲಸಿಕೆ ಏನನ್ನು ಒಳಗೊಂಡಿದೆ ಎಂಬುದನ್ನು ನಾವು ತಿಳಿಯಲು ಬಯಸಿದ್ದೆವು. ಪೋರ್ಕ್ ಇಲ್ಲದ ಲಸಿಕೆಯಿದ್ದರೆ ಅದನ್ನೇ ಪಡೆದುಕೊಳ್ಳಲು ಸೂಚಿಸಲು ಈ ಕ್ರಮ ಕೈಗೊಂಡಿದ್ದೆವು. ಇದೇನೂ ಸಲಹೆಯಲ್ಲ, ಆದರೆ ಪಾರದರ್ಶಕತೆಗಾಗಿ ಒಂದು ಮನವಿ ಅಷ್ಟೇ’ ಎಂದು ರಾಝಾ ಅಕಾಡೆಮಿಯ ಜನರಲ್ ಸೆಕ್ರೆಟರಿ ಸಯೀದ್ ನೂರಿ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಭಾರತದ ಹಿಂದೂ ಮಹಾಸಭಾ ಸೇರಿ ಹಲವು ಗುಂಪುಗಳು ಕೂಡ ಇಂತಹ ಮನವಿ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ರಾಷ್ಟ್ರಪತಿಗೆ ಪತ್ರ ಬರೆದು, ಯಾವುದಾದರೂ ಲಸಿಕೆಯಲ್ಲಿ ಗೋವಿನ ರಕ್ತದ ಅಂಶವಿದೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಡಿಸೆಂಬರ್‌ನಲ್ಲಿ ಐಎಎಸ್ ಅಧಿಕಾರಿ ಸಂಜಯ್ ದಿಕ್ಷಿತ್ ಮಾತನಾಡಿ, ‘ಮುಸ್ಲಿಮರು ಲಸಿಕೆಯನ್ನು ಬಾಯ್ಕಾಟ್ ಮಾಡಬೇಕು’ ಎಂದು ಕರೆ ನೀಡಿದ್ದರು. ಈ ಕುರಿತಂತೆ ’ದಿ ಪ್ರಿಂಟ್’ ಹಲವಾರು ಮುಸ್ಲಿಂ ಧರ್ಮಗುರುಗಳು, ಚಿಂತಕರನ್ನು ಮಾತಾಡಿಸಿದಾಗ ಅವರು ಲಸಿಕೆ ತೆಗೆದುಕೊಳ್ಳುವುದರ ಪರವೇ ಮಾತನಾಡಿದ್ದಾರೆ.

ಶಿಯಾ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಕಲ್ಬೆ ಜಾವೇದ್, ’ಲಸಿಕೆ ಪಡೆಯುವುದಕ್ಕೆ ಅನುಮತಿಯಿದೆ. ಯಾರಾದರೂ ಬೇಡ ಎಂದರೆ ಅವರು ಮುಸ್ಲಿಮರ ವಿರೋಧಿಗಳೆಂದೇ ಅರ್ಥ’ ಎಂದಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

’ಲಸಿಕೆಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಒಂದೇ ಒಂದು ಲಸಿಕೆಯಿದ್ದು ಅದು ಪೋರ್ಕ್ ಅಂಶ ಹೊಂದಿದ್ದರೆ, ಆಗ ಆ ಲಸಿಕೆ ಪಡೆಯುವುದು ಅನಿವಾರ್ಯ’ ಎಂದು ಜಮೈತ್-ಉಲೈಮಾ-ಎ-ಹಿಂದ್‌ನ ಜನರಲ್ ಸೆಕ್ರೆಟರಿ ಮಹಮೂದ್ ಮದಾನಿ ಹೇಳಿದ್ದಾರೆ.

’ದ್ವೇಷ ಪ್ರಚಾರದ ಭಾಗ’

’ಮಾನವ ಜೀವವೇ ಇಸ್ಲಾಂನ ಆದ್ಯತೆ. ಇದರಲ್ಲಿ ಚರ್ಚೆಯ ಅಗತ್ಯವೇ ಇಲ್ಲ. ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಪ್ರೊ. ಅಖ್ತಾನಿ ವಾಸೆ ತಿಳಿಸಿದ್ದಾರೆ.

ಮುಸ್ಲಿಮರು ಲಸಿಕೆ ಪಡೆಯಬಾರದು ಎನ್ನುವುದು ದ್ವೇಷದ ಪ್ರಚಾರ (ಹೇಟ್‌ಫುಲ್ ಪ್ರೊಪಗಂಡಾ) ಎಂದು ಅವರು ಹೇಳಿದ್ದಾರೆ.

’ಕೆಲವರು ಮುಸ್ಲಿಮರನ್ನು ಅವಮಾನಿಸಿ ನಿರಾಶೆಗೊಳಿಸಲು ನೋಡುತ್ತಾರೆ. ಈ ಪ್ರೊಪಗಂಡಾವೇ ಪೊಲೀಯೋ ಲಸಿಕೆ ಕಾರ್ಯಕ್ರಮದ ಸಂದರ್ಭದಲ್ಲೂ ಚಾಲ್ತಿಗೆ ಬಂದಿತ್ತು. ಆಗ ಮುಸ್ಲಿಂ ವಿದ್ವಾಂಸರು ಮಧ್ಯ ಪ್ರವೇಶಿಸಿ ಲಸಿಕೆ ವಿಷಯದಲ್ಲಿ ಯಾವುದೇ ಪೂರ್ವಗ್ರಹ ಬೇಡ ಎಂದು ಹೇಳಿದ್ದರು. ಈಗಲೂ ಅವರು ಆ ಕೆಲಸವನ್ನು ಮಾಡಬೇಕಿದೆ’ ಎಂದು ವಾಸೆ ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...