Homeಕರೋನಾ ತಲ್ಲಣ'ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ - ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

"ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ"

- Advertisement -
- Advertisement -

ಈಗಾಗಲೇ ಎಲ್ಲ ಲಸಿಕಾ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ಯಾವುದೇ ಬಗೆಯ ಹಂದಿ ಮಾಂಸ(ಪೋರ್ಕ್) ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದೂ ಹೇಳಿವೆ.

ಈ ಹಿನ್ನೆಲೆಯಲ್ಲಿ, “ಮುಸ್ಲಿಮರು ಹಂದಿ ಮಾಂಸದ ಅಂಶವಿದ್ದರೂ ಕೂಡ ಲಸಿಕೆ ತೆಗೆದುಕೊಳ್ಳಲು ಯಾವುದೇ ರೀತಿ-ರಿವಾಜು ಅಡ್ಡಿ ಮಾಡುವುದಿಲ್ಲ” ಎಂದು ಜಮಾತ್-ಎ-ಇಸ್ಲಾಂ-ಹಿಂದ್ (ಜೆಐಎಚ್) ಮಂಡಳಿ ಹೇಳಿದ್ದು, ಮುಸ್ಲಿಮರಲ್ಲಿ ಮೂಡಿದ್ದ ಲಸಿಕೆಯ ಗೊಂದಲವನ್ನು ತೊಡೆದು ಹಾಕುವ ಪ್ರಯತ್ನ ಮಾಡಿದೆ. ಭಾರತದಲ್ಲಿ ಇಂತಹ ನಿರ್ಣಯ ಪ್ರಕಟಿಸಿದ ಮೊದಲ ಮುಸ್ಲಿಂ ಸಂಸ್ಥೆ ಇದಾಗಿದೆ.

’ಇಸ್ಲಾಂ ಮಾನವ ಜೀವಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತದೆ ಮತ್ತು ಜೀವ ರಕ್ಷಣೆಗೆ ಆದ್ಯತೆ ನೀಡುತ್ತದೆ’ ಎಂದು ಜಮಾತ್ -ಎ-ಇಸ್ಲಾಂ-ಹಿಂದ್ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

’ಅನುಮತಿಸಲಾಗದ ಯಾವುದೇ ವಸ್ತು- ಅದರ ಗುಣಲಕ್ಷಣಗಳಲ್ಲಿ ಸಂಪೂರ್ಣ ಮಾರ್ಪಾಟನ್ನು ಹೊಂದಿದ್ದರೆ ಅದು ಶುದ್ಧವಾದುದು ಮತ್ತು ಅದನ್ನು ದೇಹಕ್ಕೆ ಸೇರಿಸಬಹುದು. ಈ ಆಧಾರದ ಮೇಲೆ, ಹರಾಮ್ ಪ್ರಾಣಿಯ ದೇಹದ ಭಾಗದಿಂದ ಪಡೆದ ಜೆಲಾಟಿನ್ ಬಳಕೆಯನ್ನು ಇಸ್ಲಾಮಿಕ್ ನ್ಯಾಯಶಾಸ್ತ್ರಜ್ಞರು ಅನುಮತಿಸಿದ್ದಾರೆ ಎಂದೂ ಮಂಡಳಿ ವಿವರಿಸಿದೆ.

ಹಲವು ದಿನಗಳಿಂದ, ’ಲಸಿಕೆಯಲ್ಲಿ ಹಂದಿ ಮಾಂಸದ ಅಂಶವಿದ್ದು, ಮುಸ್ಲಿಮರು ಲಸಿಕೆ ಪಡೆಯಬಾರದು’ ಎಂಬ ಆಧಾರರಹಿತ ಸುದ್ದಿಯೊಂದು ಜಗತ್ತಿನಾದ್ಯಂತ ಪ್ರಚಲಿತದಲ್ಲಿದೆ.

’ಯಾವುದೇ ಬೇರೆ ಆಯ್ಕೆ ಇಲ್ಲದಿರುವಾಗ, ಪೋರ್ಕ್ ಹೊಂದಿದ ಲಸಿಕೆ ಪಡೆಯುವುದರಲ್ಲೂ ತಪ್ಪಿಲ್ಲ’ ಎಂದು ಜೆಐಎಚ್ ಉಪಾಧ್ಯಕ್ಷ ಸಲೀಂ ಇಂಜಿನಿಯರ್ ಹೇಳಿದ್ದಾರೆ. ’ಬೇರೆ ಆಯ್ಕೆಗಳಿದ್ದರೆ ಅದು ಒಳ್ಳೆಯದೇ. ಆದರೆ ಆಯ್ಕೆಯೇ ಇಲ್ಲದಿರುವಾಗ ಯಾವುದೇ ಪಾಪಪ್ರಜ್ಞೆ ಅನುಭವಿಸದೇ ಲಸಿಕೆ ಪಡೆದುಕೊಳ್ಳುವುದು ಸರಿಯಾದ ಮಾರ್ಗ. ಇದು ಜೀವನ್ಮರಣದ ಪ್ರಶ್ನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ…

ಪಿಝರ್, ಮಾಡೆರ್ನಾ ಮತ್ತು ಅಸ್ಟ್ರಾಜೆನಿಕಾ ವಕ್ತಾರರು, ಲಸಿಕೆಯಲ್ಲಿ ಯಾವುದೇ ಬಗೆಯ ಪೋರ್ಕ್ ಅಂಶವಿಲ್ಲ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ರಾಝಾ ಅಕಾಡೆಮಿ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು, ಲಸಿಕೆಗಳ ವಿವರಗಳು ಮತ್ತು ಅವು ಪೋರ್ಕ್ ಒಳಗೊಂಡಿವೆಯೇ ಎಂಬುದನ್ನು ತಿಳಿಸಬೇಕು ಎಂದು ಕೋರಿತ್ತು.

’ಯಾವ ಲಸಿಕೆ ಏನನ್ನು ಒಳಗೊಂಡಿದೆ ಎಂಬುದನ್ನು ನಾವು ತಿಳಿಯಲು ಬಯಸಿದ್ದೆವು. ಪೋರ್ಕ್ ಇಲ್ಲದ ಲಸಿಕೆಯಿದ್ದರೆ ಅದನ್ನೇ ಪಡೆದುಕೊಳ್ಳಲು ಸೂಚಿಸಲು ಈ ಕ್ರಮ ಕೈಗೊಂಡಿದ್ದೆವು. ಇದೇನೂ ಸಲಹೆಯಲ್ಲ, ಆದರೆ ಪಾರದರ್ಶಕತೆಗಾಗಿ ಒಂದು ಮನವಿ ಅಷ್ಟೇ’ ಎಂದು ರಾಝಾ ಅಕಾಡೆಮಿಯ ಜನರಲ್ ಸೆಕ್ರೆಟರಿ ಸಯೀದ್ ನೂರಿ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಭಾರತದ ಹಿಂದೂ ಮಹಾಸಭಾ ಸೇರಿ ಹಲವು ಗುಂಪುಗಳು ಕೂಡ ಇಂತಹ ಮನವಿ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ರಾಷ್ಟ್ರಪತಿಗೆ ಪತ್ರ ಬರೆದು, ಯಾವುದಾದರೂ ಲಸಿಕೆಯಲ್ಲಿ ಗೋವಿನ ರಕ್ತದ ಅಂಶವಿದೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಡಿಸೆಂಬರ್‌ನಲ್ಲಿ ಐಎಎಸ್ ಅಧಿಕಾರಿ ಸಂಜಯ್ ದಿಕ್ಷಿತ್ ಮಾತನಾಡಿ, ‘ಮುಸ್ಲಿಮರು ಲಸಿಕೆಯನ್ನು ಬಾಯ್ಕಾಟ್ ಮಾಡಬೇಕು’ ಎಂದು ಕರೆ ನೀಡಿದ್ದರು. ಈ ಕುರಿತಂತೆ ’ದಿ ಪ್ರಿಂಟ್’ ಹಲವಾರು ಮುಸ್ಲಿಂ ಧರ್ಮಗುರುಗಳು, ಚಿಂತಕರನ್ನು ಮಾತಾಡಿಸಿದಾಗ ಅವರು ಲಸಿಕೆ ತೆಗೆದುಕೊಳ್ಳುವುದರ ಪರವೇ ಮಾತನಾಡಿದ್ದಾರೆ.

ಶಿಯಾ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಕಲ್ಬೆ ಜಾವೇದ್, ’ಲಸಿಕೆ ಪಡೆಯುವುದಕ್ಕೆ ಅನುಮತಿಯಿದೆ. ಯಾರಾದರೂ ಬೇಡ ಎಂದರೆ ಅವರು ಮುಸ್ಲಿಮರ ವಿರೋಧಿಗಳೆಂದೇ ಅರ್ಥ’ ಎಂದಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

’ಲಸಿಕೆಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಒಂದೇ ಒಂದು ಲಸಿಕೆಯಿದ್ದು ಅದು ಪೋರ್ಕ್ ಅಂಶ ಹೊಂದಿದ್ದರೆ, ಆಗ ಆ ಲಸಿಕೆ ಪಡೆಯುವುದು ಅನಿವಾರ್ಯ’ ಎಂದು ಜಮೈತ್-ಉಲೈಮಾ-ಎ-ಹಿಂದ್‌ನ ಜನರಲ್ ಸೆಕ್ರೆಟರಿ ಮಹಮೂದ್ ಮದಾನಿ ಹೇಳಿದ್ದಾರೆ.

’ದ್ವೇಷ ಪ್ರಚಾರದ ಭಾಗ’

’ಮಾನವ ಜೀವವೇ ಇಸ್ಲಾಂನ ಆದ್ಯತೆ. ಇದರಲ್ಲಿ ಚರ್ಚೆಯ ಅಗತ್ಯವೇ ಇಲ್ಲ. ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಪ್ರೊ. ಅಖ್ತಾನಿ ವಾಸೆ ತಿಳಿಸಿದ್ದಾರೆ.

ಮುಸ್ಲಿಮರು ಲಸಿಕೆ ಪಡೆಯಬಾರದು ಎನ್ನುವುದು ದ್ವೇಷದ ಪ್ರಚಾರ (ಹೇಟ್‌ಫುಲ್ ಪ್ರೊಪಗಂಡಾ) ಎಂದು ಅವರು ಹೇಳಿದ್ದಾರೆ.

’ಕೆಲವರು ಮುಸ್ಲಿಮರನ್ನು ಅವಮಾನಿಸಿ ನಿರಾಶೆಗೊಳಿಸಲು ನೋಡುತ್ತಾರೆ. ಈ ಪ್ರೊಪಗಂಡಾವೇ ಪೊಲೀಯೋ ಲಸಿಕೆ ಕಾರ್ಯಕ್ರಮದ ಸಂದರ್ಭದಲ್ಲೂ ಚಾಲ್ತಿಗೆ ಬಂದಿತ್ತು. ಆಗ ಮುಸ್ಲಿಂ ವಿದ್ವಾಂಸರು ಮಧ್ಯ ಪ್ರವೇಶಿಸಿ ಲಸಿಕೆ ವಿಷಯದಲ್ಲಿ ಯಾವುದೇ ಪೂರ್ವಗ್ರಹ ಬೇಡ ಎಂದು ಹೇಳಿದ್ದರು. ಈಗಲೂ ಅವರು ಆ ಕೆಲಸವನ್ನು ಮಾಡಬೇಕಿದೆ’ ಎಂದು ವಾಸೆ ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...