Homeಕರೋನಾ ತಲ್ಲಣ'ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ - ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

"ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ"

- Advertisement -
- Advertisement -

ಈಗಾಗಲೇ ಎಲ್ಲ ಲಸಿಕಾ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ಯಾವುದೇ ಬಗೆಯ ಹಂದಿ ಮಾಂಸ(ಪೋರ್ಕ್) ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದೂ ಹೇಳಿವೆ.

ಈ ಹಿನ್ನೆಲೆಯಲ್ಲಿ, “ಮುಸ್ಲಿಮರು ಹಂದಿ ಮಾಂಸದ ಅಂಶವಿದ್ದರೂ ಕೂಡ ಲಸಿಕೆ ತೆಗೆದುಕೊಳ್ಳಲು ಯಾವುದೇ ರೀತಿ-ರಿವಾಜು ಅಡ್ಡಿ ಮಾಡುವುದಿಲ್ಲ” ಎಂದು ಜಮಾತ್-ಎ-ಇಸ್ಲಾಂ-ಹಿಂದ್ (ಜೆಐಎಚ್) ಮಂಡಳಿ ಹೇಳಿದ್ದು, ಮುಸ್ಲಿಮರಲ್ಲಿ ಮೂಡಿದ್ದ ಲಸಿಕೆಯ ಗೊಂದಲವನ್ನು ತೊಡೆದು ಹಾಕುವ ಪ್ರಯತ್ನ ಮಾಡಿದೆ. ಭಾರತದಲ್ಲಿ ಇಂತಹ ನಿರ್ಣಯ ಪ್ರಕಟಿಸಿದ ಮೊದಲ ಮುಸ್ಲಿಂ ಸಂಸ್ಥೆ ಇದಾಗಿದೆ.

’ಇಸ್ಲಾಂ ಮಾನವ ಜೀವಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತದೆ ಮತ್ತು ಜೀವ ರಕ್ಷಣೆಗೆ ಆದ್ಯತೆ ನೀಡುತ್ತದೆ’ ಎಂದು ಜಮಾತ್ -ಎ-ಇಸ್ಲಾಂ-ಹಿಂದ್ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

’ಅನುಮತಿಸಲಾಗದ ಯಾವುದೇ ವಸ್ತು- ಅದರ ಗುಣಲಕ್ಷಣಗಳಲ್ಲಿ ಸಂಪೂರ್ಣ ಮಾರ್ಪಾಟನ್ನು ಹೊಂದಿದ್ದರೆ ಅದು ಶುದ್ಧವಾದುದು ಮತ್ತು ಅದನ್ನು ದೇಹಕ್ಕೆ ಸೇರಿಸಬಹುದು. ಈ ಆಧಾರದ ಮೇಲೆ, ಹರಾಮ್ ಪ್ರಾಣಿಯ ದೇಹದ ಭಾಗದಿಂದ ಪಡೆದ ಜೆಲಾಟಿನ್ ಬಳಕೆಯನ್ನು ಇಸ್ಲಾಮಿಕ್ ನ್ಯಾಯಶಾಸ್ತ್ರಜ್ಞರು ಅನುಮತಿಸಿದ್ದಾರೆ ಎಂದೂ ಮಂಡಳಿ ವಿವರಿಸಿದೆ.

ಹಲವು ದಿನಗಳಿಂದ, ’ಲಸಿಕೆಯಲ್ಲಿ ಹಂದಿ ಮಾಂಸದ ಅಂಶವಿದ್ದು, ಮುಸ್ಲಿಮರು ಲಸಿಕೆ ಪಡೆಯಬಾರದು’ ಎಂಬ ಆಧಾರರಹಿತ ಸುದ್ದಿಯೊಂದು ಜಗತ್ತಿನಾದ್ಯಂತ ಪ್ರಚಲಿತದಲ್ಲಿದೆ.

’ಯಾವುದೇ ಬೇರೆ ಆಯ್ಕೆ ಇಲ್ಲದಿರುವಾಗ, ಪೋರ್ಕ್ ಹೊಂದಿದ ಲಸಿಕೆ ಪಡೆಯುವುದರಲ್ಲೂ ತಪ್ಪಿಲ್ಲ’ ಎಂದು ಜೆಐಎಚ್ ಉಪಾಧ್ಯಕ್ಷ ಸಲೀಂ ಇಂಜಿನಿಯರ್ ಹೇಳಿದ್ದಾರೆ. ’ಬೇರೆ ಆಯ್ಕೆಗಳಿದ್ದರೆ ಅದು ಒಳ್ಳೆಯದೇ. ಆದರೆ ಆಯ್ಕೆಯೇ ಇಲ್ಲದಿರುವಾಗ ಯಾವುದೇ ಪಾಪಪ್ರಜ್ಞೆ ಅನುಭವಿಸದೇ ಲಸಿಕೆ ಪಡೆದುಕೊಳ್ಳುವುದು ಸರಿಯಾದ ಮಾರ್ಗ. ಇದು ಜೀವನ್ಮರಣದ ಪ್ರಶ್ನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ…

ಪಿಝರ್, ಮಾಡೆರ್ನಾ ಮತ್ತು ಅಸ್ಟ್ರಾಜೆನಿಕಾ ವಕ್ತಾರರು, ಲಸಿಕೆಯಲ್ಲಿ ಯಾವುದೇ ಬಗೆಯ ಪೋರ್ಕ್ ಅಂಶವಿಲ್ಲ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ರಾಝಾ ಅಕಾಡೆಮಿ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು, ಲಸಿಕೆಗಳ ವಿವರಗಳು ಮತ್ತು ಅವು ಪೋರ್ಕ್ ಒಳಗೊಂಡಿವೆಯೇ ಎಂಬುದನ್ನು ತಿಳಿಸಬೇಕು ಎಂದು ಕೋರಿತ್ತು.

’ಯಾವ ಲಸಿಕೆ ಏನನ್ನು ಒಳಗೊಂಡಿದೆ ಎಂಬುದನ್ನು ನಾವು ತಿಳಿಯಲು ಬಯಸಿದ್ದೆವು. ಪೋರ್ಕ್ ಇಲ್ಲದ ಲಸಿಕೆಯಿದ್ದರೆ ಅದನ್ನೇ ಪಡೆದುಕೊಳ್ಳಲು ಸೂಚಿಸಲು ಈ ಕ್ರಮ ಕೈಗೊಂಡಿದ್ದೆವು. ಇದೇನೂ ಸಲಹೆಯಲ್ಲ, ಆದರೆ ಪಾರದರ್ಶಕತೆಗಾಗಿ ಒಂದು ಮನವಿ ಅಷ್ಟೇ’ ಎಂದು ರಾಝಾ ಅಕಾಡೆಮಿಯ ಜನರಲ್ ಸೆಕ್ರೆಟರಿ ಸಯೀದ್ ನೂರಿ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಭಾರತದ ಹಿಂದೂ ಮಹಾಸಭಾ ಸೇರಿ ಹಲವು ಗುಂಪುಗಳು ಕೂಡ ಇಂತಹ ಮನವಿ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ರಾಷ್ಟ್ರಪತಿಗೆ ಪತ್ರ ಬರೆದು, ಯಾವುದಾದರೂ ಲಸಿಕೆಯಲ್ಲಿ ಗೋವಿನ ರಕ್ತದ ಅಂಶವಿದೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಡಿಸೆಂಬರ್‌ನಲ್ಲಿ ಐಎಎಸ್ ಅಧಿಕಾರಿ ಸಂಜಯ್ ದಿಕ್ಷಿತ್ ಮಾತನಾಡಿ, ‘ಮುಸ್ಲಿಮರು ಲಸಿಕೆಯನ್ನು ಬಾಯ್ಕಾಟ್ ಮಾಡಬೇಕು’ ಎಂದು ಕರೆ ನೀಡಿದ್ದರು. ಈ ಕುರಿತಂತೆ ’ದಿ ಪ್ರಿಂಟ್’ ಹಲವಾರು ಮುಸ್ಲಿಂ ಧರ್ಮಗುರುಗಳು, ಚಿಂತಕರನ್ನು ಮಾತಾಡಿಸಿದಾಗ ಅವರು ಲಸಿಕೆ ತೆಗೆದುಕೊಳ್ಳುವುದರ ಪರವೇ ಮಾತನಾಡಿದ್ದಾರೆ.

ಶಿಯಾ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಕಲ್ಬೆ ಜಾವೇದ್, ’ಲಸಿಕೆ ಪಡೆಯುವುದಕ್ಕೆ ಅನುಮತಿಯಿದೆ. ಯಾರಾದರೂ ಬೇಡ ಎಂದರೆ ಅವರು ಮುಸ್ಲಿಮರ ವಿರೋಧಿಗಳೆಂದೇ ಅರ್ಥ’ ಎಂದಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

’ಲಸಿಕೆಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಒಂದೇ ಒಂದು ಲಸಿಕೆಯಿದ್ದು ಅದು ಪೋರ್ಕ್ ಅಂಶ ಹೊಂದಿದ್ದರೆ, ಆಗ ಆ ಲಸಿಕೆ ಪಡೆಯುವುದು ಅನಿವಾರ್ಯ’ ಎಂದು ಜಮೈತ್-ಉಲೈಮಾ-ಎ-ಹಿಂದ್‌ನ ಜನರಲ್ ಸೆಕ್ರೆಟರಿ ಮಹಮೂದ್ ಮದಾನಿ ಹೇಳಿದ್ದಾರೆ.

’ದ್ವೇಷ ಪ್ರಚಾರದ ಭಾಗ’

’ಮಾನವ ಜೀವವೇ ಇಸ್ಲಾಂನ ಆದ್ಯತೆ. ಇದರಲ್ಲಿ ಚರ್ಚೆಯ ಅಗತ್ಯವೇ ಇಲ್ಲ. ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಪ್ರೊ. ಅಖ್ತಾನಿ ವಾಸೆ ತಿಳಿಸಿದ್ದಾರೆ.

ಮುಸ್ಲಿಮರು ಲಸಿಕೆ ಪಡೆಯಬಾರದು ಎನ್ನುವುದು ದ್ವೇಷದ ಪ್ರಚಾರ (ಹೇಟ್‌ಫುಲ್ ಪ್ರೊಪಗಂಡಾ) ಎಂದು ಅವರು ಹೇಳಿದ್ದಾರೆ.

’ಕೆಲವರು ಮುಸ್ಲಿಮರನ್ನು ಅವಮಾನಿಸಿ ನಿರಾಶೆಗೊಳಿಸಲು ನೋಡುತ್ತಾರೆ. ಈ ಪ್ರೊಪಗಂಡಾವೇ ಪೊಲೀಯೋ ಲಸಿಕೆ ಕಾರ್ಯಕ್ರಮದ ಸಂದರ್ಭದಲ್ಲೂ ಚಾಲ್ತಿಗೆ ಬಂದಿತ್ತು. ಆಗ ಮುಸ್ಲಿಂ ವಿದ್ವಾಂಸರು ಮಧ್ಯ ಪ್ರವೇಶಿಸಿ ಲಸಿಕೆ ವಿಷಯದಲ್ಲಿ ಯಾವುದೇ ಪೂರ್ವಗ್ರಹ ಬೇಡ ಎಂದು ಹೇಳಿದ್ದರು. ಈಗಲೂ ಅವರು ಆ ಕೆಲಸವನ್ನು ಮಾಡಬೇಕಿದೆ’ ಎಂದು ವಾಸೆ ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...