Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...