Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...