Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...