Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...