Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...