Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...