Homeಮುಖಪುಟವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

ವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

‘ಮೆಸೇಜ್‌ ಕಳಿಸುವವರು ಮತ್ತು ಓದುವವರ ನಡುವೆ ಗೌಪ್ಯತೆ ಕಾಪಾಡುತ್ತಿದ್ದೇವೆ. ಸ್ವತಃ ಕಂಪನಿಗೂ ಮಾಹಿತಿ ಸಿಗದಂತೆ ಎನ್‌ಕ್ರಿಪ್ಷನ್‌ ವ್ಯವಸ್ಥೆ ಇದೆ’ ಎಂದು ವಾಟ್ಸ್ಆ್ಯಪ್ ಹೇಳುತ್ತಾ ಬಂದಿದೆ. ಆದರೆ ಸೆ.7ರಂದು ಪ್ರೊಪಬ್ಲಿಕಾ ವರದಿ ಬಿಚ್ಚಿಡುವ ಸತ್ಯ ಬೆಚ್ಚಿಬೀಳಿಸುತ್ತದೆ. ವಾಟ್ಸ್ಆ್ಯಪ್ ತನ್ನ ಬಳಕೆದಾರರ ಸಂದೇಶಗಳನ್ನು ಓದುವುದಕ್ಕೆ ಜನರನ್ನು ಗಂಟೆಗೆ 16 ಡಾಲರ್‌ ಕೊಟ್ಟು ನೇಮಕ ಮಾಡಿಕೊಂಡಿದೆಯಂತೆ! ಆ ವರದಿಯ ಯಥಾರೂಪದ ಮೊದಲ ಭಾಗ ಇಲ್ಲಿದೆ. ಕೃಪೆ: ಟೆಕ್ ಕನ್ನಡ

- Advertisement -
- Advertisement -
ಮಾರ್ಚ್ 2019ರಲ್ಲಿ ಮಾರ್ಕ್‌ ಝುಕರ್‌ಬರ್ಗ್‌ ಫೇಸ್‌ಬುಕ್‌ನ ಖಾಸಗಿತನದ ಹೊಸ ನೋಟವನ್ನು ಅನಾವರಣ ಮಾಡಿದಾಗ, ಆತ ಕಂಪನಿಯ ಜಾಗತಿಕ ಮಟ್ಟದ ಮಸೇಜಿಂಗ್‌ ಸೇವೆಯಾಗಿರುವ ವಾಟ್ಸ್ಆ್ಯಪ್ ಹೊಸ ಪ್ರಯತ್ನಕ್ಕೆ ಮಾದರಿ ಎಂದು ಉದಾಹರಿಸಿದ್ದ. ಜೊತೆಗೆ ಪ್ರಸ್ತುತ ನಮಗೆ ಖಾಸಗಿತನ ಭದ್ರತೆ ಸೇವೆಗಳನ್ನು ನಿರ್ಮಿಸುವ ಉತ್ತಮ ವರ್ಚಸ್ಸು ಇಲ್ಲ ಎಂದೂ ಹೇಳಿದ್ದ. ಇದಾಗಿ ಕೆಲ ದಿನಗಳಲ್ಲಿ ತಮ್ಮ ಬ್ಲಾಗ್‌ನಲ್ಲಿ, ” ಭವಿಷ್ಯದ ಸಂವಹನವೂ ಹೆಚ್ಚು ಖಾಸಗಿಯಾಗುವತ್ತ ಹೊರಳುತ್ತದೆ ಮತ್ತು ಅದು ಎನ್‌ಕ್ರಿಪ್ಟೆಡ್‌ ಸೇವೆಯಾಗಿರುತ್ತದೆ. ಜನ ಪರಸ್ಪರ ಏನು ಹೇಳಿಕೊಳ್ಳುತ್ತಾರೊ ಅದನ್ನು ಅತ್ಯಂತ ವಿಶ್ವಾಸದೊಂದಿಗೆ ಹೇಳಬಹುದು. ಅವರ ಮೆಸೇಜ್‌ಗಳಾಗಲಿ, ಇತರೆ ವಿನಿಮಯದ ಅಂಶಗಳಾಗಲಿ ಎಲ್ಲೂ ಉಳಿಯುವುದಿಲ್ಲ. ಈ ಭವಿಷ್ಯವನ್ನು ತರುವ ಭರವಸೆಯೊಂದಿಗೆ ನೆರವಾಗುತ್ತಿದ್ದೇವೆ. ವಾಟ್ಸ್ಆ್ಯಪ್‌ನಂತೆಯೇ ನಾವು ಈ ಸೇವೆಯನ್ನು ಅಭಿವೃದ್ಧಿ ಪಡಿಸುತ್ತೇವೆ”.
ಝುಕರ್‌ಬರ್ಗ್‌ ಅವರ ನೋಟವು ವಾಟ್ಸ್ಆ್ಯಪ್‌ನ ಮೂಲ ಫೀಚರ್‌- ಇದನ್ನೇ ಅವರು ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್‌ ಮೆಸೇಂಜರ್‌ನಲ್ಲಿ ಅಳವಡಿಸುವ ಯೋಚನೆ ಮಾಡಿದ್ದರು – ಅದೇ ಎರಡು ತುದಿಗಳ ನಡುವಿನ ಎನ್‌ಕ್ರಿಪ್ಷನ್‌. ಇದು ಎಲ್ಲ ಮೆಸೇಜ್‌ಗಳನ್ನು ಓದಲು ಆಗದ ಒಂದು ರೂಪಕ್ಕೆ ಬದಲಾಯಿಸಿ, ಉದ್ದೇಶಿತ ವ್ಯಕ್ತಿಗೆ ತಲುಪಿದಾಗ ಓದಲು ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ. ವಾಟ್ಸ್ಆ್ಯಪ್ ಮೆಸೇಜ್‌ಗಳು ಅತಿ ಸುರಕ್ಷಿತ ಎಂದು ಅವರು ಹೇಳಿದ್ದರು. ಯಾರೂ- ತಮ್ಮ ಕಂಪನಿಯೂ ಓದಲು ಆಗುವುದಿಲ್ಲ, ಒಂದೇ ಒಂದು ಪದವನ್ನೂ ಓದಲಾಗದು’ ಎಂದು ಹೇಳಿದ್ದರು. 2018ರಲ್ಲಿ ಅಮೆರಿಕದ ಸೆನೇಟ್‌ ಎದುರು ಹಾಜರಾದಾಗ ಕೂಡ ಝುಕರ್‌ಬರ್ಗ್‌, ”ವಾಟ್ಸ್ಆ್ಯಪ್ ನಲ್ಲಿ ವಿನಿಮಯವಾಗುವ ಯಾವುದೇ ರೀತಿಯ ಸಂದೇಶಗಳನ್ನು ನಾವು ನೋಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.
ವಾಟ್ಸ್ಆ್ಯಪ್ ಕೂಡ ಈ ಅಂಶವನ್ನು ಎಷ್ಟು ಒತ್ತಿ ಹೇಳುತ್ತದೆ ಎಂದರೆ, ಬಳಕೆದಾರರು ಸಂದೇಶ ಕಳಿಸುವುದಕ್ಕೆ ಮೊದಲೇ ಸ್ವಯಂ ಆಗಿ, ‘ ಈ ಚಾಟ್‌ನ ಹೊರಗೆ ಯಾರೂ ಇದನ್ನು ಓದಲು ಆಗವುದಿಲ್ಲ. ವಾಟ್ಸ್ಆ್ಯಪ್ ಕೂಡ ಇದನ್ನು ಓದುವುದಿಲ್ಲ ಅಥವಾ ಕೇಳುವುದಿಲ್ಲ. ”
ಭರವಸೆಗಳು ನಿಜವಲ್ಲ.
ವಾಟ್ಸ್ಆ್ಯಪ್, 1000ಕ್ಕೂ ಗುತ್ತಿಗೆ ನೌಕರರನ್ನು ಹೊಂದಿದ್ದು, ಇವರ ಕೆಲಸ ಬಳಕೆದಾರರಿಂದ ರಿಪೋರ್ಟ್ ಆದ ಮೆಸೇಜ್‌ಗಳನ್ನು ಓದಿ ರಿವ್ಯೂ ಮಾಡುವುದು. ಆಸ್ಟಿನ್‌, ಡಬ್ಲಿನ್‌, ಟೆಕ್ಸಾಸ್‌, ಸಿಂಗಪುರ್‌ಗಳಲ್ಲಿ ಲಕ್ಷಾಂತರ ಬಳಕೆದಾರರ ಮೆಸೇಜ್‌ಗಳನ್ನು ಈ ಗುತ್ತಿಗೆ ನೌಕರರು ಪರಿಶೀಲಿಸುತ್ತಾರೆ. ಗಂಟೆಯ ಲೆಕ್ಕದಲ್ಲಿ ದುಡಿಯುವ ಈ ಜನ ಇವರಿಗೆ ಮಾಡಿರುವ ಕಂಪ್ಯೂಟರ್‌ ಹಿಡಿದು ಪಾಡ್‌ಗಳಲ್ಲಿ ಕೂತು ಫೇಸ್‌ಬುಕ್‌ ಅಭಿವೃದ್ಧಿಪಡಿಸಿರುವ ಸಾಫ್ಟ್‌ವೇರ್‌ ಬಳಸಿ, ಖಾಸಗಿ ಸಂದೇಶಗಳನ್ನು, ವಿಡಿಯೋಗಳನ್ನು, ಫೋಟೋಗಳನ್ನು ಅದರ ಮೂಲಕ ಪರಿಶೀಲಿಸುತ್ತಾರೆ. ಜೊತೆಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ವ್ಯವಸ್ಥೆಯನ್ನು ಬಳಸಿ ಮೆಸೇಜ್‌ಗಳ ಉದ್ದೇಶವನ್ನು ಪರಿಶೀಲಿಸಿ, ತೀರ್ಪು ನೀಡುತ್ತಾರೆ. ಅಂದರೆ ಅದು ವಂಚನೆಯ ಮೆಸೇಜೊ, ಮಕ್ಕಳ ಲೈಂಗಿಕತೆಗೆ ಸಂಬಂಧಿಸಿದ್ದು, ಉಗ್ರಗಾಮಿಗಳ ಸಂವಹನವೋ ಎಂಬುದನ್ನು ಒಂದು ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ ನಿರ್ಧರಿಸುತ್ತಾರೆ. ಇದೇ ಇವರ ಕೆಲಸ.

ಖಾಸಗಿತನವೇ ಪವಿತ್ರ ಎಂದು ಪ್ರತಿಪಾದಿಸಿ, ತನ್ನ ಖಾಸಗಿ ನೀತಿಯ ಬಗ್ಗೆ ಕೊಚ್ಚಿಕೊಂಡ ವಾಟ್ಸ್ಆ್ಯಪ್ ವಿಲಕ್ಷಣವಾದ ಯೋಜನೆಯೊಂದು ನಡೆಸುತ್ತಿದೆ. ಪ್ರೊಪಬ್ಲಿಕಾ ಸಂಗ್ರಹಿಸಿದ ಡಿಸೆಂಬರ್‌ ತಿಂಗಳಲ್ಲಿ ಬಳಸಿದ ಕಂಪನಿಯ ಪ್ರಸೆಂಟೇಷನ್‌ವೊಂದರ ಸ್ಲೈಡ್‌ನಲ್ಲಿ, ವಾಟ್ಸ್ಆ್ಯಪ್‌ ಖಾಸಗಿತನದ ಕಥನವನ್ನು ಉಗ್ರವಾಗಿ ಪ್ರಚಾರ ಮಾಡುವುದಕ್ಕೆ ಒತ್ತು ನೀಡಿರುವುದು ಕಂಡು ಬರುತ್ತದೆ. ತನ್ನ ಬ್ರ್ಯಾಂಡ್‌ ಕ್ಯಾರೆಕ್ಟರ್‌ ಅನ್ನು ಒಬ್ಬ ವಲಸಿಗ ತಾಯಿಗೆ ಹೋಲಿಸುತ್ತದೆ ಮತ್ತು ತಾಲಿಬಾನ್‌ ಉಗ್ರ ಗುಂಡೇಟಿನಿಂದ ಬದುಕುಳಿದ ನೊಬೆಲ್‌ ಶಾಂತಿ ಪುರಸ್ಕೃತ ಮಲಾಲ ಯೂಸುಫ್‌ಜಾಯ್‌ಗೆ ಹೋಲಿಸುತ್ತದೆ. ಈ ಸ್ಲೈಡ್‌ನ ಶೀರ್ಷಿಕೆ, ‘ ಬ್ರ್ಯಾಂಡ್‌ ಟೋನ್‌ ಪ್ಯಾರಾಮೀಟರ್ಸ್’. ಇಲ್ಲೂ ಕಂಪನಿಯ ಕಂಟೆಂಟ್‌ ಮಾಡರೇಷನ್‌ ಅಂದರೆ ಬಳಕೆದಾರರ ವಿನಿಮಯ ಮಾಡಿಕೊಳ್ಳುವ ಮಾಹಿತಿಯ ಗುಣಮಟ್ಟವನ್ನು ಪರಿಶೀಲಿಸುವ ವ್ಯವಸ್ಥೆಯ ಕುರಿತು ಯಾವ ಪ್ರಸ್ತಾಪವನ್ನೂ ಮಾಡುವುದಿಲ್ಲ.

ವಾಟ್ಸ್ಆ್ಯಪ್‌ನ ಸಂವಹನ ನಿರ್ದೇಶಕ, ಕಾರ್ಲ್‌ ವೂಗ್‌, ಆಸ್ಟಿನ್‌ ಮತ್ತು ಇತರೆಡೆ ಇರುವ ಗುತ್ತಿಗೆ ಕೆಲಸಗಾರರ ತಂಡವು ವಾಟ್ಸ್ಆ್ಯಪ್ ಅನ್ನು ಅತಿಯಾಗಿ ದುರ್ಬಳಕೆ ಮಾಡುವವರನ್ನು ಗುರುತಿಸುವುದು ಮತ್ತು ವಾಟ್ಸ್ಆ್ಯಪ್‌ನಿಂದ ಅವರನ್ನು ಕಿತ್ತೊಸೆಯುವ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ. ಪ್ರೊಬ್ಲಿಕಾಗೆ ಮಾತನಾಡಿರುವ ವೂಗ್‌ ಅವರು, ಈ ಕೆಲಸವನ್ನು ಕಂಟೆಂಟ್‌ ಮಾಡರೇಷನ್‌ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ”ನಾವು ಈ ಪರಿಭಾಷೆಯನ್ನೇ ವಾಟ್ಸ್ಆ್ಯಪ್‌ನಲ್ಲಿ ಬಳಸುವುದಿಲ್ಲ” ಕಂಪನಿ ಈ ಕೆಲಸಗಾರರನ್ನು ಈ ಲೇಖನಕ್ಕಾಗಿ ಸಂದರ್ಶಿಸುವುದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ. ” ವಾಟ್ಸ್ಆ್ಯಪ್‌ ಜಗತ್ತಿನ ಕೋಟ್ಯಂತರ ಜನರ ಲೈಫ್‌ಲೈನ್‌ ಆಗಿದೆ’ ಎಂದು ಕಂಪನಿ ಹೇಳಿತು. ನಾವು ಆ್ಯಪ್‌ಅನ್ನು ಹೇಗೆ ಅಭಿವೃದ್ಧಿಪಡಿಸಲು ನಿರ್ಧರಿಸುತ್ತೇವೆಂದರೆ, ಬಳಕೆದಾರರ ಖಾಸಗಿತನಕ್ಕೆ ಹೆಚ್ಚು ಗಮನ ಕೊಡುತ್ತೇವೆ. ಉನ್ನತ ಮಟ್ಟದ ವಿಶ್ವಾಸಾರ್ಹತೆ ಮತ್ತು ದುರ್ಬಳಕೆಯ ನಿವಾರಣೆಯನ್ನು ಕಾಯ್ದುಕೊಳ್ಳುತ್ತೇವೆ.” ಎಂದು ವಿವರಿಸಿದೆ.

ಬಳಕೆದಾರರ ಮಾಹಿತಿಯ ಮೇಲೆ ನಿಗಾ ಇಡುವ ಕ್ರಮದ ಬಗ್ಗೆ ವಾಟ್ಸ್ಆ್ಯಪ್ ಏನು ಹೇಳುತ್ತಿದೆಯೊ, ಅದಕ್ಕೆ ವ್ಯತಿರಿಕ್ತವಾಗಿ, ಫೇಸ್‌ಬುಕ್‌ ಸಂಸ್ಥೆ ಹೇಳುತ್ತದೆ. ಫೇಸ್‌ಬುಕ್‌ ಪ್ರಕಾರ 15,000 ಮಂದಿ ಮಾಡರೇಟರ್‌ಗಳು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ನ ಎಲ್ಲ ಪೋಸ್ಟ್‌ಗಳನ್ನು ಪರಿಶೀಲಿಸುತ್ತಾರೆ. ಇಲ್ಲಿ ಯಾವುದೇ ಪೋಸ್ಟ್‌ಗಳು ಎನ್‌ಕ್ರಿಪ್ಟ್‌ ಅಂದರೆ ಗೌಪ್ಯವಾಗಿ ಉಳಿದಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಟ್ರಾನ್ಸಪರೇನ್ಸಿ ರಿಪೋರ್ಟ್‌ ಬಿಡುಗಡೆ ಮಾಡುವ ಈ ಕಂಪನಿಯು, ಎಷ್ಟು ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್‌ ಖಾತೆಗಳ ವಿರುದ್ಧಕ್ರಮಕೈಗೊಳ್ಳಲಾಗಿದೆ ಎಂದು ವಿವರಗಳನ್ನು ನೀಡುತ್ತದೆ. ವಾಟ್ಸ್ಆ್ಯಪ್‌ನಲ್ಲಿ ಈ ವರದಿಯೂ ಇಲ್ಲ.

ಬಳಕೆದಾರರ ಪೋಸ್ಟ್‌ಗಳನ್ನು ಪರಿಶೀಲಿಸಲೆಂದು ಒಂದು ಸೇನೆಯನ್ನು ನಿಯೋಜಿಸಿರುವುದೇ  ವಾಟ್ಸ್ಆ್ಯಪ್ ಬಳಕೆದಾರರ ಖಾಸಗಿತನದ ವಿಷಯದಲ್ಲಿ ಫೇಸ್‌ಬುಕ್‌ ಒಂದು ರೀತಿಯ ಹೊಂದಾಣಿಕೆ ಮಾಡಿಕೊಂಡಿರುವುದನ್ನು ಸೂಚಿಸುತ್ತದೆ. ಈ ರೀತಿಯಾಗಿ ಕಂಪನಿಯ ಕ್ರಮಗಳಿಂದಾಗಿ ವಾಟ್ಸ್ಆ್ಯಪ್ – 200 ಕೋಟಿ ಬಳಕೆದಾರರಿರುವ ಜಗತ್ತಿನ ಅತಿ ದೊಡ್ಡ ಮೆಸೇಜಿಂಗ್‌ ಆ್ಯಪ್ – ಬಳಕೆದಾರರು ನಂಬಿರುವುದಕ್ಕಿಂತ ಅಥವಾ ನಿರೀಕ್ಷಿಸಿರುವುದಕ್ಕಿಂತ ಅತ್ಯಲ್ಪ ಖಾಸಗಿತನವನ್ನು ಹೊಂದಿದೆ. ಪ್ರೊಪಬ್ಲಿಕಾದ ತನಿಖೆ, ಡಾಟಾ, ದಾಖಲೆಗಳು, ಹಾಲಿ ಹಾಗೂ ಮಾಜಿ ಉದ್ಯೋಗಿಗಳು, ಗುತ್ತಿಗೆನೌಕರರೊಂದಿಗೆ ನಡೆಸಿದ ಹತ್ತಾರು ಸಂದರ್ಶನಗಳು, 2014ರಲ್ಲಿ ಫೇಸ್‌ಬುಕ್‌ ವಾಟ್ಸ್ಆ್ಯಪ್ ಅನ್ನು ಖರೀದಿಸಿದಾಗಿನಿಂದ ಸುರಕ್ಷತೆಯ ವಿಷಯಗಳನ್ನು ಉಪೇಕ್ಷೆ ಮಾಡುತ್ತಲೇ ಬಂದಿವೆ ಎಂಬುದನ್ನು ಬಯಲು ಮಾಡುತ್ತವೆ.

ಕಳೆದ ವರ್ಷ ಅಮೆರಿಕದ ಭದ್ರತೆ ಮತ್ತು ವಿನಿಮಯ ಆಯೋಗಕ್ಕೆ ಗೌಪ್ಯ ವಿಷಲ್‌ಬ್ಲೋವರ್‌ ಅವರಿಂದ ಬಂದ ದೂರು, ಈ ಕಂಟೆಂಟ್‌ ಮಾಡರೇಟರ್‌ಗಳು ವಾಟ್ಸ್ಆ್ಯಪ್‌ಗೆ ಕೆಲಸ ಮಾಡುತ್ತಿರುವ ಸಂಗತಿಯನ್ನು ಖಚಿತಪಡಿಸಿತು. ಪ್ರೊಪಬ್ಲಿಕಾಗೆ ದೊರೆತಿರುವ ಈ ದೂರಿನ ಪ್ರತಿ, ಬಳಕೆದಾರರ ಮೆಸೇಜ್‌ಗಳು, ಫೋಟೋ ಮತ್ತು ವಿಡಿಯೋಗಳನ್ನು, ಖಾತೆದಾರರ ಮಾಹಿತಿಯನ್ನು ಪರಿಶೀಲಿಸಲು ಹೊರಗುತ್ತಿಗೆದಾರರು, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತೀವ್ರವಾಗಿ ಬಳಸುತ್ತಿರುವ ವಿವರಗಳನ್ನು ನೀಡುತ್ತದೆ. ಬಳಕೆದಾರರ ಖಾಸಗಿತನವನ್ನು ಕಾಯುವ ವಾಟ್ಸ್ಆ್ಯಪ್‌ ಎಂದು ಹೇಳುತ್ತದೆ, ಆದರೆ ಇದು ಸುಳ್ಳು ಎಂದು ದೂರತ್ತದೆ. ಆದರೆ ಈ ಬಗ್ಗೆ ಕಂಪನಿಯ ವಕ್ತಾರರು ಹೇಳುವುದು, ನಾವು ಅಂತಹ ಯಾವುದೇ ದೂರಿನ ಬಗ್ಗೆ ಕೇಳಿಲ್ಲ”. ಭದ್ರತೆ ಮತ್ತು ವಿನಿಮಯ ಆಯೋಗ ಕೂಡ ಯಾವುದೇ ಸಾರ್ವಜನಿಕ ಕ್ರಮವನ್ನು ಕೈಗೊಂಡಿಲ್ಲ ಹಾಗೂ ಆಯೋಗವೂ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

ಇದನ್ನೂ ಓದಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ಫೇಸ್‌ಬುಕ್‌ ಕಂಪನಿಯು ವಾಟ್ಸ್ಆ್ಯಪ್‌ ಬಳಕೆದಾರರಿಂದ ಯಾವ ಪ್ರಮಾಣದ ಮಾಹಿತಿಯನ್ನು ಸಂಗ್ರಹಿಸುತ್ತದೆ, ಸಂಗ್ರಹಿಸಿದ ಮಾಹಿತಿಯನ್ನು ಏನು ಮಾಡುತ್ತದೆ ಮತ್ತು ಕಾನೂನು ಜಾರಿಗೊಳಿಸುವ ಅಧಿಕಾರಸ್ಥ ಸಂಸ್ಥೆಗಳೊಂದಿಗೆ ಎಷ್ಟು ಪ್ರಮಾಣದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಎಂಬ ಮಾಹಿತಿಯನ್ನು ಮುಚ್ಚಿಟ್ಟಿದೆ. ಉದಾಹರಣೆಗೆ ವಾಟ್ಸ್‌ಆಪ್‌ ಮೆಟಾಡೇಟಾ, ಎನ್‌ಕ್ರಿಪ್ಟ್‌ ಆಗಿರುವ ದಾಖಲೆಗಳನ್ನು ಹಂಚಿಕೊಳ್ಳುತ್ತದೆ. ಈ ಮಾಹಿತಿ ಬಳಕೆದಾರರ ಚಟುವಟಿಕೆಯ ಬಗ್ಗೆ ಕಾನೂನು ಕ್ರಮಕೈಗೊಳ್ಳುವ ಅಧಿಕಾರ ಸಂಸ್ಥೆಗಳಿಗೆ -ನ್ಯಾಯ ಇಲಾಖೆ- ಸಾಕಷ್ಟು ಮಾಹಿತಿಯನ್ನು ಒದಗಿಸುತ್ತದೆ. ಸಿಗ್ನಲ್‌ನಂತಹ ಪ್ರತಿಸ್ಪರ್ಧಿ ಸಂಸ್ಥೆ, ಉದ್ದೇಶಪೂರ್ವಕವಾಗಿ ಬಳಕೆದಾರರ ಮೆಟಾಡೇಟಾವನ್ನು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಸಂಗ್ರಹಿಸುತ್ತದೆ. ಹೀಗೆ ಮಾಡುವ ಮೂಲಕ ಬಳಕೆದಾರರ ಖಾಸಗಿತನದಲ್ಲಿ ಅತಿಕ್ರಮಣ ಮಾಡುವುದನ್ನು ಆದಷ್ಟು ತಗ್ಗಿಸುತ್ತದೆ. ಹಾಗಾಗಿ ಯಾವುದೇ ಕಾನೂನು ಕ್ರಮಕೈಗೊಳ್ಳುವ ಸಂಸ್ಥೆಗಳಿಗೆ ಕಡಿಮೆ ಮಾಹಿತಿಯನ್ನು ಒದಗಿಸುತ್ತದೆ ( ಈ ವಿಷಯವಾಗಿ ವಾಟ್ಸ್‌ಆಪ್‌ ಯಾವುದೇ ಕಾನೂನಾತ್ಮಕ ಮನವಿಗಳಿಗೆ ಸ್ಪಂದಿಸುತ್ತದೆ ಎಂದು ಅದರ ವಕ್ತಾರರು ಹೇಳಿದ್ದು, ‘ ನಿರ್ದಿಷ್ಟ ವ್ಯಕ್ತಿ ಮಸೇಜ್‌ ಮಾಡುವ ಕುರಿತು ರಿಯಲ್‌ ಟೈಮ್‌ -ಅಂದರೆ ಘಟನೆ ನಡೆಯುತ್ತಿರುವ ಸಮಯದಲ್ಲೇ ಇನ್ನೊಂದೆಡೆ ಇರುವ ವ್ಯಕ್ತಿಗೆ ಅದೇ ಸಮಯದಲ್ಲಿ ಸಿಗುವಂತೆ – . ಮಾಹಿತಿ ನೀಡಲಾಗುವುದು”).

ಈ ರೀತಿಯ ವಾಟ್ಸ್‌ಆಪ್‌ ಬಳಕೆದಾರರ ಮಾಹಿತಿ ಸಂಗ್ರಹಿಸುವ ಮೂಲಕ, ಖಜಾನೆ ಇಲಾಖೆಯ ಉದ್ಯೋಗಿಯೊಬ್ಬರ ಬಲವಾದ ಪ್ರಕರಣವನ್ನು ಕಟ್ಟುವುದಕ್ಕೆ ನೆರವಾಗಿದೆ ಎಂಬುದು ಪ್ರೊ ಪಬ್ಲಿಕಾಕ್ಕೆ ತಿಳಿದು ಬಂದಿದೆ. ಬಝ್‌ಫೀಡ್‌ ನ್ಯೂಸ್‌ ಎಂಬ ಸುದ್ದಿ ಸಂಸ್ಥೆಗೆ ಗೌಪ್ಯ ದಾಖಲೆಗಳನ್ನು ನೀಡುವ ಮೂಲಕ ಅಮೆರಿಕ ಬ್ಯಾಂಕ್‌ಗಳಿಗೆ ಹರಿದು ಬರುತ್ತಿರುವ ಅಕ್ರಮ ಹಣಕ್ಕೆ ಸಂಬಂಧಿಸಿದ ಹಗರಣ ಬಯಲು ಮಾಡುವುದಕ್ಕೆ ಆ ಉದ್ಯೋಗಿ ನೆರವಾಗಿದ್ದರು. ಈ ಸಂಬಂಧ ದಾಖಲಾದ ಪ್ರಕರಣಕ್ಕೆ ವಾಟ್ಸ್‌ಆಪ್‌ ನೀಡಿದ ಮಾಹಿತಿ ಉದ್ಯೋಗಿಯನ್ನು ತಪ್ಪಿತಸ್ಥನನ್ನಾಗಿ ಮಾಡುವುದಕ್ಕೆ ಪೂರಕವಾದ ಸಾಕ್ಷ್ಯ ಒದಗಿಸಿತು ಎಂಬ ಬಗ್ಗೆ ಪ್ರೊಪಬ್ಲಿಕಾಕ್ಕೆ ವಿವರಗಳು ಸಿಕ್ಕಿವೆ.

ಉಳಿದ ಸೋಷಿಯಲ್‌ ಮೀಡಿಯಾ ಮತ್ತು ಸಂವಹನ ವೇದಿಕೆಗಳಂತೆ, ವಾಟ್ಸ್‌ಆಪ್‌ ಖಾಸಗಿತನ ಬಯಸುವ ಬಳಕೆದಾರರು ಮತ್ತು ಕಾನೂನು ಸಂಸ್ಥೆಗಳ ನಡುವೆ ಸಿಲುಕಿದೆ- ಯಾಕೆಂದರೆ ಕಾನೂನು ಸಂಸ್ಥೆಗಳು ಅಪರಾಧ ಮತ್ತು ಆನ್‌ಲೈನ್‌ ಶೋಷಣೆಯನ್ನು ತಡೆಯುವುದಕ್ಕೆ ವಾಟ್ಸ್‌ಆಪ್‌ನತ್ತ ಮಾಹಿತಿಗಾಗಿ ನೋಡುತ್ತವೆ. ವಾಟ್ಸ್‌ಆಪ್‌ ಈ ಬಗ್ಗೆ ಯಾವುದೇ ಗೊಂದಲ ಸ್ಥಿತಿಯನ್ನು ಗೊಂದಲವೆಂದು ಭಾವಿಸುವುದೇ ಇಲ್ಲ. ‘ ವಾಟ್ಸ್‌ಆಪ್‌ನ ಮುಖ್ಯಸ್ಥ ಎಂಬ ಹುದ್ದೆಯಲ್ಲಿರುವ ವಿಲ್‌ ಕ್ಯಾತ್‌ಕಾರ್ಟ್‌, ಯೂಟ್ಯೂಬ್‌ ಸಂದರ್ಶನವೊಂದರಲ್ಲಿ, ಎಂಡ್‌ ಟು ಎಂಡ್‌ ಎನ್‌ಕ್ರಿಪ್ಷನ್‌ ಮೂಲಕ ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಪರಾಧಗಳನ್ನು ತಡೆಯುವಲ್ಲಿ ಕಾನೂನು ಸಂಸ್ಥೆಗಳ ಜೊತೆಗೆ ಕೆಲಸ ಮಾಡುವುದು, ಎರಡೂ ಸಾಧ್ಯವೆಂದು ನನಗೆ ಅನ್ನಿಸುತ್ತದೆ” ಎಂದು ಹೇಳಿದ್ದಾರೆ.

ಖಾಸಗಿತನ ಮತ್ತು ಕಾನೂನು ಸಂಸ್ಥೆಗಳಿಗೆ ಮಾಹಿತಿ ಹಂಚಿಕೊಳ್ಳುವ ಉದ್ವಿಗ್ನತೆಗೆ ಎರಡನೆಯ ಒತ್ತಡವೂ ಇದೆ. ಅದು ಫೇಸ್‌ಬುಕ್‌ ವಾಟ್ಸ್‌ಆಪ್‌ನಿಂದ ಹಣ ಮಾಡಬೇಕು ಎಂಬುದು. 2014ರಲ್ಲಿ 22 ಬಿಲಿಯನ್‌ ಡಾಲರ್‌ ಕೊಟ್ಟು ವಾಟ್ಸ್‌ಆಪ್‌ ಖರೀದಿ ಮಾಡಿದಾಗಿನಿಂದಲೂ, ಬಳಕೆದಾರರಿಗೆ ಒಂದೇ ಒಂದು ಪೈಸೆಯಷ್ಟು ಶುಲ್ಕ ಹಾಕದ ಈ ಸೇವೆಯಿಂದ ಹೇಗೆ ಲಾಭ ಮಾಡುವುದು ಎಂದು ಯೋಚಿಸುತ್ತಲೇ ಇದೆ.

ಈ ಜಟಿಲ ಸಮಸ್ಯೆ ಕಾಲಾನುಕ್ರಮದಲ್ಲಿ ಬಳಕೆದಾರು, ಕಾನೂನು ರೂಪಿಸುವವರು ಮತ್ತು ಇಬ್ಬರ ಕೋಪಕ್ಕೂ ಕಾರಣವಾಗಿದೆ.  ವಾಟ್ಸ್‌ಆಪ್‌ನಿಂದ ಹಣ ಮಾಡಬೇಕು ಎಂಬುದು 2016ರಲ್ಲಿ ಫೇಸ್‌ಬುಕ್‌ ನಿರ್ಧಾರಗಳಲ್ಲಿ ಒಂದು. ಆಗಿನಿಂದಲೇ ಫೇಸ್‌ಬುಕ್‌ಗೆ ವಾಟ್ಸ್‌ಆಪ್‌ ಬಳಕೆದಾರರ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಯುರೋಪಿಯನ್‌ ಒಕ್ಕೂಟದ ಮುಂದೆ ತನ್ನ ಹೇಳಿಕೆ ನೀಡುವಾಗ ತಾಂತ್ರಿಕವಾಗಿ ಇದು ಅಸಾಧ್ಯವಾದದ್ದು ಫೇಸ್‌ಬುಕ್‌ ಹೇಳಿತ್ತು. ಇದೇ ರೀತಿಯ ವಿವಾದಾತ್ಮಕ ಯೋಜನೆಯೊಂದಕ್ಕೆ ಕಾರಣವಾಗಿತ್ತು. ಅದು ವಾಟ್ಸ್‌ಆಪ್‌ನಲ್ಲಿ ಜಾಹೀರಾತಿಗೆ ಅವಕಾಶ ಮಾಡಿಕೊಡುವ ಯೋಜನೆ. 2019ರಲ್ಲಿ ಇದನ್ನು ಫೇಸ್‌ಬುಕ್‌ ಕೈಬಿಟ್ಟಿತು. ಲಾಭ ಮಾಡಬೇಕೆನ್ನುವ ಉದ್ದೇಶ ಕಳೆದ ಜನವರಿಯಲ್ಲಿ ಚಾಲನೆ ಪಡೆದು ಇನ್ನೊಂದು ಯೋಜನೆಯಲ್ಲೂ ಇತ್ತು. ವಾಟ್ಸ್‌ಆಪ್‌ನಲ್ಲಿ ಉದ್ಯಮಗಳ ವಿನಿಮಯಕ್ಕೆಂದು ಹೊಸ ಖಾಸಗಿ ನೀತಿಯನ್ನು ಪರಿಚಯಿಸಲಾಯಿತು. ಇದು ಉದ್ಯಮಗಳು ಬಳಕೆದಾರರ ಮಾಹಿತಿಯನ್ನು ಹೊಸ ರೀತಿಯಲ್ಲಿ ಬಳಸಿಕೊಳ್ಳುವುದಕ್ಕೆ ಅವಕಾಶ ಮಾಡಿಕೊಟ್ಟಿತು. ಈ ಘೋಷಣೆಯಿಂದಾಗಿ ಬಳಕೆದಾರರು ದೊಡ್ಡ ಸಂಖ್ಯೆಯಲ್ಲಿ ವಾಟ್ಸ್‌ಆಪ್‌ ತೊರೆದು ಪ್ರತಿಸ್ಪರ್ಧಿ ಆಪ್‌ಗಳತ್ತ ಗುಳೆ ಹೋದರು.

ಇದನ್ನೂ ಓದಿ: ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ವಾಟ್ಸ್‌ಆಪ್‌ ಉಗ್ರವಾದ ಉದ್ಯಮ ಯೋಜನೆಯಾಗಿ ಕಂಪನಿಗಳಿಗೆ ಶುಲ್ಕ ಪಾವತಿಸುವ ಸೇವೆಗಳನ್ನು ನೀಡುತ್ತಿದೆ – ವಾಟ್ಸ್‌ಆಪ್‌ ಮೂಲಕ ಹಣ ಪಾವತಿಸುವ ಸೇವೆಯನ್ನು ಬಳಕೆದಾರರಿಗೆ ನೀಡುವುದು ಮತ್ತು ಗ್ರಾಹಕ ಸೇವೆಯ ಚಾಟ್‌ಗಳನ್ನು ನಿರ್ವಹಿಸುವುದು ಇತ್ಯಾದಿ. – ಈ ಸೇವೆಗಳು ಅನುಕೂಲಕರ, ಆದರೆ ಖಾಸಗಿತನ ಇಲ್ಲಿ ರಕ್ಷಣೆ ಅತ್ಯಲ್ಪ. ಇದರ ಪರಿಣಾಮ ಗೊಂದಲಕರವಾಗಿದ್ದು, ಎರಡು ಹಂತದ ಖಾಸಗಿತನ ವ್ಯವಸ್ಥೆಯೊಳಗೆ, ಯಾವ ಬಳಕೆದಾರರು ಉದ್ಯಮಗಳೊಂದಿಗೆ ಸಂವಹನ ನಡೆಸಲು ಅರಂಭಿಸುತ್ತಾರೊ, ಆಗ  ಎಂಡ್‌ ಟು ಎಂಟ್‌ ಎನ್‌ಕ್ರಿಪ್ಷನ್‌ ಎಂಬ ರಕ್ಷಣಾ ವ್ಯವಸ್ಥೆ ಸಂಪೂರ್ಣವಾಗಿ ಉಲ್ಲಂಘನೆಯಾಗುವುದು ಸ್ಪಷ್ಟವಾಯಿತು.

ಆದರೆ ಡಿಸೆಂಬರ್‌ನಲ್ಲಿ ಸಿದ್ಧಪಡಿಸಿದ್ದ ಮಾರ್ಕೆಟಿಂಗ್‌ ಪ್ರೆಸೆಂಟೇಷನ್‌ನಲ್ಲಿ ವಾಟ್ಸ್‌ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಂಡಿದ್ದನ್ನು ಕಾಣಬಹುದು. ಅದರಂತೆ, ‘ ಖಾಸಗಿತನ ಬಹುಮುಖ್ಯವಾಗಿ ವಿಷಯವಾಗಿ ಉಳಿಯಲಿದೆ” ಎನ್ನುತ್ತದೆ. ಆದರೆ ಇದೇ ವೇಳೆ ಅತ್ಯಂತ ತುರ್ತು ಸಂಗತಿಯೊಂದನ್ನೂ ಅದು ತಿಳಿಸುತ್ತದೆ. ಅದೇನೆಂದರೆ, ನಮ್ಮ ಭವಿಷ್ಯದ ಉದ್ಯಮದ ಉದ್ದೇಶಗಳನ್ನು ಒಳಗೊಳ್ಳುವ ಬೆಳಕಿಂಡಿಯೊಂದನ್ನು ತೆರೆಯುವ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.

(ಮೂಲ ವರದಿ: ಪ್ರೊಪಬ್ಲಿಕಾ.ಆರ್ಗ್‌ನದ್ದು, ಕನ್ನಡಕ್ಕೆ: ಟೆಕ್‌ ಕನ್ನಡ )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...