Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...