Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...