Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...