Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...