Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...