Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....