Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...