Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...