Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...