Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...