Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...