Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...