Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...