Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...