Homeಕರ್ನಾಟಕ'ರಾಜೀನಾಮೆ ಪ್ರಶ್ನೆಯೆ ಇಲ್ಲ' | ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಬೆಂಬಲ

‘ರಾಜೀನಾಮೆ ಪ್ರಶ್ನೆಯೆ ಇಲ್ಲ’ | ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಬೆಂಬಲ

- Advertisement -
- Advertisement -

ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಡಾ ಪ್ರಕರಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾದ ನಂತರ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಂಗಳವಾರ ಹೇಳಿದ್ದು, ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವೆಲ್ಲರೂ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ. ರಾಜೀನಾಮೆ ಪ್ರಶ್ನೆಯೆ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನನಗೆ ಜವಬ್ದಾರಿ ಇದೆ ಮತ್ತು ತೀರ್ಪಿನ ಬಗ್ಗೆ ನನಗೆ ತಿಳಿಯಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರು ನನ್ನ ವಿರುದ್ಧ ಕೂಡಾ ಕೇಸ್ ಹಾಕಿದ್ದಾರೆ ಮತ್ತು ದೇವರ ದಯೆಯಿಂದ ನಾನು ಅದರಿಂದ ಹೊರಬಂದಿದ್ದೇನೆ. ಆ ಪ್ರಕರಣದಲ್ಲಿ ನಾನು ಜೈಲಿಗೆ ಕೂಡಾ ಹೋಗಿದ್ದೇನೆ. ಆದರೆ ಈಗ ಅದನ್ನು ರದ್ದುಗೊಳಿಸಲಾಗಿದೆ. ಸಿಎಂ ವಿರುದ್ಧ ಕೂಡಾ ದೊಡ್ಡ ಷಡ್ಯಂತ್ರವಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೂಡಾ ಆಗಿರುವ ಶಿವಕುಮಾರ್ ಹೇಳಿದ್ದಾರೆ.

“ಸಿದ್ದರಾಮಯ್ಯ ಅವರ ಕಾರ್ಯಕ್ರಮಗಳನ್ನು ಸಹಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯನ್ನು ವಿರೋಧಿಸುವ ದೇಶದ ಎಲ್ಲಾ ರಾಜಕಾರಣಿಗಳ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ನಾವು ಅವರ (ಸಿದ್ದರಾಮಯ್ಯ) ಜೊತೆಯಲ್ಲಿ ನಿಲ್ಲುತ್ತೇವೆ. ಅವರು ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂಓದಿ: ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಆರೋಪ ಇನ್ನಷ್ಟೆ ಸಾಬೀತಾಗಬೇಕಿರುವುದರಿಂದ ಸಿಎಂ ಸಿದ್ದರಾಮಯ್ಯ ನಿರ್ದೋಷಿ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮುಂದಿನ ಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದು ಭಾವಿಸಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ತೀರ್ಪಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಹಿನ್ನಡೆ ಆಗಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠವು ಮಂಗಳವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಎತ್ತಿಹಿಡಿದಿದೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಮಧ್ಯಂತರ ಪರಿಹಾರ ಕೋರಿದ್ದಲ್ಲದೆ, ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.ರಾಜೀನಾಮೆ ಪ್ರಶ್ನೆಯೆ ಇಲ್ಲ

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...