Homeಚಳವಳಿ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು,“ಈ ಪ್ರಕರಣದಲ್ಲಿ ಅದೂ ಕೂಡಾ ಒಬ್ಬ ಮಹಿಳೆಗೆ ಜಾಮೀನು ನೀಡಲಾಗದಂತಹ ಯಾವುದೇ ಅಪರಾಧವಿಲ್ಲ” ಎಂದು ಹೇಳಿದೆ. ತೀಸ್ತಾ ಅವರು ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ವಿರುದ್ಧ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಅವಲೋಕನಗಳ ಹೊರತಾಗಿ ಹೆಚ್ಚಿನದನ್ನು ಹೇಳಲಾಗಿಲ್ಲ ಎಂದು ಪೀಠ ಹೇಳಿದೆ. ಆಗಸ್ಟ್ 3 ರಂದು ತೀಸ್ತಾ ಅವರ ಜಾಮೀನು ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡುವಾಗ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ದೀರ್ಘ ಮುಂದೂಡಿಕೆ ಮಾಡಿತ್ತು.

ಇದನ್ನೂ ಓದಿ: ತೀಸ್ತಾ, ಶ್ರೀಕುಮಾರ್ ಮತ್ತು ಜುಬೇರ್ ಬಂಧನ; ಭಾರತ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮದತ್ತ ಸಾಗುತ್ತಿದೆಯೇ?

ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ತೀಸ್ತಾ ಅವರ ಕಸ್ಟಡಿ ಬಂಧನಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಎತ್ತಿದೆ.

“ಅವರು ಮಹಿಳೆಯಾಗಿದ್ದು, ಆರು ವಾರಗಳ ನಂತರ ಉತ್ತರಿಸುವಂತೆ ಹೈಕೋರ್ಟ್‌ ಹೇಗೆ ನೋಟಿಸ್ ನೀಡಿತು? ಗುಜರಾತ್ ಹೈಕೋರ್ಟ್‌ನಲ್ಲಿ ಅದು ಪ್ರಮಾಣಿತ ಅಭ್ಯಾಸವೇ? ಅಂತಹ ಪ್ರಕರಣದಲ್ಲಿ ಮಹಿಳೆಯೊಬ್ಬರು ಭಾಗಿಯಾಗಿದ್ದು, ಈ ಹಿಂದೆ ಹೈಕೋರ್ಟ್ ಈ ರೀತಿ ಮಾಡಿದ ಉದಾಹರಣೆಗಳು ಇದ್ದರೆ ನಮಗೆ ನೀಡಿ” ಎಂದು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್‌ ಹೇಳಿದ್ದಾರೆ.

2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 25 ರಿಂದ ತೀಸ್ತಾ ಸೆಟಲ್ವಾಡ್ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

“ಈ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯಿದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಂತಹ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಇವು ಸಾಮಾನ್ಯ ಅಪರಾಧಗಳಾಗಿದ್ದು, ಮಹಿಳೆಯು ಅನುಕೂಲಕರವಾದ ನಡೆಗೆ ಅರ್ಹಳು” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿನ್ನೆಯ ವಿಚಾರಣೆಯನ್ನು ಮುಂದೂಡುವಂತೆ ಕೋರಿದರು. “ಈ ಎಲ್ಲಾ ವಾದಗಳನ್ನು ಹೈಕೋರ್ಟ್‌ನಲ್ಲಿ ಮಾಡಬೇಕೇ ಹೊರತು ಸುಪ್ರೀಂ ಕೋರ್ಟ್‌ನಲ್ಲಿ ಅಲ್ಲ. ಅದು ನನ್ನ ಪ್ರಾಥಮಿಕ ಆಕ್ಷೇಪಣೆ” ಎಂದು ಅವರು ಹೇಳಿದ್ದಾರೆ.

ತೀಸ್ತಾ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್, “ನಾನು ಎಫ್‌ಐಆರ್ ಅನ್ನೇ ಸವಾಲು ಮಾಡುತ್ತಿದ್ದೇನೆ. ಇಲ್ಲಿ ಎಫ್‌ಐಆರ್ ಇರುವಂತಿಲ್ಲ. ನಾನು ಯಾವ ನಕಲಿ ದಾಖಲೆ ಮಾಡಿದ್ದೇನೆ ಎಂಬುದನ್ನು ಎಫ್‌ಐಆರ್ ಬಹಿರಂಗಪಡಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ 

ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಗುಜರಾತ್ ಗಲಭೆಯ ಸಮಯದಲ್ಲಿ ದೊಡ್ಡ ಪಿತೂರಿಯಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ವಿಶೇಷ ತನಿಖಾ ತಂಡವನ್ನು ಪ್ರಶ್ನಿಸಿ ತನ್ನ ಕಕ್ಷಿದಾರೆ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ, ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತು.

ತೀಸ್ತಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...