Homeಚಳವಳಿ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು,“ಈ ಪ್ರಕರಣದಲ್ಲಿ ಅದೂ ಕೂಡಾ ಒಬ್ಬ ಮಹಿಳೆಗೆ ಜಾಮೀನು ನೀಡಲಾಗದಂತಹ ಯಾವುದೇ ಅಪರಾಧವಿಲ್ಲ” ಎಂದು ಹೇಳಿದೆ. ತೀಸ್ತಾ ಅವರು ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ವಿರುದ್ಧ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಅವಲೋಕನಗಳ ಹೊರತಾಗಿ ಹೆಚ್ಚಿನದನ್ನು ಹೇಳಲಾಗಿಲ್ಲ ಎಂದು ಪೀಠ ಹೇಳಿದೆ. ಆಗಸ್ಟ್ 3 ರಂದು ತೀಸ್ತಾ ಅವರ ಜಾಮೀನು ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡುವಾಗ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ದೀರ್ಘ ಮುಂದೂಡಿಕೆ ಮಾಡಿತ್ತು.

ಇದನ್ನೂ ಓದಿ: ತೀಸ್ತಾ, ಶ್ರೀಕುಮಾರ್ ಮತ್ತು ಜುಬೇರ್ ಬಂಧನ; ಭಾರತ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮದತ್ತ ಸಾಗುತ್ತಿದೆಯೇ?

ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ತೀಸ್ತಾ ಅವರ ಕಸ್ಟಡಿ ಬಂಧನಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಎತ್ತಿದೆ.

“ಅವರು ಮಹಿಳೆಯಾಗಿದ್ದು, ಆರು ವಾರಗಳ ನಂತರ ಉತ್ತರಿಸುವಂತೆ ಹೈಕೋರ್ಟ್‌ ಹೇಗೆ ನೋಟಿಸ್ ನೀಡಿತು? ಗುಜರಾತ್ ಹೈಕೋರ್ಟ್‌ನಲ್ಲಿ ಅದು ಪ್ರಮಾಣಿತ ಅಭ್ಯಾಸವೇ? ಅಂತಹ ಪ್ರಕರಣದಲ್ಲಿ ಮಹಿಳೆಯೊಬ್ಬರು ಭಾಗಿಯಾಗಿದ್ದು, ಈ ಹಿಂದೆ ಹೈಕೋರ್ಟ್ ಈ ರೀತಿ ಮಾಡಿದ ಉದಾಹರಣೆಗಳು ಇದ್ದರೆ ನಮಗೆ ನೀಡಿ” ಎಂದು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್‌ ಹೇಳಿದ್ದಾರೆ.

2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 25 ರಿಂದ ತೀಸ್ತಾ ಸೆಟಲ್ವಾಡ್ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

“ಈ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯಿದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಂತಹ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಇವು ಸಾಮಾನ್ಯ ಅಪರಾಧಗಳಾಗಿದ್ದು, ಮಹಿಳೆಯು ಅನುಕೂಲಕರವಾದ ನಡೆಗೆ ಅರ್ಹಳು” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿನ್ನೆಯ ವಿಚಾರಣೆಯನ್ನು ಮುಂದೂಡುವಂತೆ ಕೋರಿದರು. “ಈ ಎಲ್ಲಾ ವಾದಗಳನ್ನು ಹೈಕೋರ್ಟ್‌ನಲ್ಲಿ ಮಾಡಬೇಕೇ ಹೊರತು ಸುಪ್ರೀಂ ಕೋರ್ಟ್‌ನಲ್ಲಿ ಅಲ್ಲ. ಅದು ನನ್ನ ಪ್ರಾಥಮಿಕ ಆಕ್ಷೇಪಣೆ” ಎಂದು ಅವರು ಹೇಳಿದ್ದಾರೆ.

ತೀಸ್ತಾ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್, “ನಾನು ಎಫ್‌ಐಆರ್ ಅನ್ನೇ ಸವಾಲು ಮಾಡುತ್ತಿದ್ದೇನೆ. ಇಲ್ಲಿ ಎಫ್‌ಐಆರ್ ಇರುವಂತಿಲ್ಲ. ನಾನು ಯಾವ ನಕಲಿ ದಾಖಲೆ ಮಾಡಿದ್ದೇನೆ ಎಂಬುದನ್ನು ಎಫ್‌ಐಆರ್ ಬಹಿರಂಗಪಡಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ 

ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಗುಜರಾತ್ ಗಲಭೆಯ ಸಮಯದಲ್ಲಿ ದೊಡ್ಡ ಪಿತೂರಿಯಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ವಿಶೇಷ ತನಿಖಾ ತಂಡವನ್ನು ಪ್ರಶ್ನಿಸಿ ತನ್ನ ಕಕ್ಷಿದಾರೆ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ, ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತು.

ತೀಸ್ತಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....