HomeUncategorizedಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

- Advertisement -
- Advertisement -

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಮತ್ತು ವಿವಾಹ ಸಮಾನತೆಯ ಹಕ್ಕುಗಳನ್ನು ನೀಡಲು ಸುಪ್ರೀಂಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಮಂಗಳವಾರ ನಿರಾಕರಿಸಿದ್ದು, ಈ ಕುರಿತು ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು ಎಂದು ಹೇಳಿದೆ.

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠ, ನ್ಯಾಯಾಲಯವು ಕಾನೂನನ್ನು ರೂಪಿಸಲು ಸಾಧ್ಯವಿಲ್ಲ. ವಿಶೇಷ ವಿವಾಹ ಕಾಯ್ದೆಯನ್ನು ಬದಲಾಯಿಸುವ ಹಕ್ಕು ಸಂಸತ್ತಿಗೆ ಇರುವುದಾಗಿದೆ ಎಂದು ಹೇಳಿದ್ದಾರೆ.

ವಿಶೇಷ ವಿವಾಹ ಕಾಯಿದೆಯು ಸಲಿಂಗ ವಿವಾಹಗಳಿಗೆ ಮಾನ್ಯತೆ ನೀಡುವುದಿಲ್ಲ ಎಂಬ ಕಾರಣಕ್ಕೆ ಅದನ್ನು ಅಸಂವಿಧಾನಿಕ ಎಂದು ಘೋಷಿಸಲು ಆಗದು. ಸಾಮಾನ್ಯ ದಂಪತಿಗಳು ಮಾತ್ರ ಒಳ್ಳೆಯ ಹೆತ್ತವರಾಗಬಹುದು ಎಂಬ ಊಹೆ ತಪ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜೀವನದ ಅವಿಭಾಜ್ಯ ಅಂಗ. ಎಲ್‌ಜಿಬಿಟಿ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳು, ಅಗತ್ಯ ಸೇವೆಗಳನ್ನು ನಿರಾಕರಿಸಬಾರದು. ಪರೋಕ್ಷವಾಗಿ ಕೂಡ ಸಮುದಾಯದ ಸ್ವಾತಂತ್ರ್ಯ ಉಲ್ಲಂಘನೆ ಮಾಡಬಾರದು, ಅದನ್ನು ಗೌರವಿಸಬೇಕು ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನದ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ 11 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇವತ್ತು ನೀಡಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು ಇದ್ದರು.

ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವುದಾಗಿದೆ. ಕ್ವೀರ್((ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಅವರನ್ನು ಹೆಸರಿಸಲು ಬಳಸುವ ಪದ) ಎಂಬುವುದು ಯುಗಯುಗಾಂತರಗಳಿಂದ ತಿಳಿದಿರುವ ನೈಸರ್ಗಿಕ ವಿದ್ಯಮಾನವಾಗಿದೆ. ಸಲಿಂಗ ಆಸಕ್ತಿ ಎಂಬುವುದು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗಗಳಿಗೆ ಸೀಮಿತವಾಗಿಲ್ಲ ಎಂದು ಕೋರ್ಟ್‌ ಹೇಳಿದೆ.

ಸಲಿಂಗ ವಿವಾಹದ ಕುರಿತು ನ್ಯಾಯಾಲಯ ಕಾನೂನು ರೂಪಿಸಲು ಸಾಧ್ಯವಿಲ್ಲ. ಆದರೆ ರೂಪಿಸಿದ ಕಾನೂನನ್ನು ವ್ಯಾಖ್ಯಾನಿಸಬಹುದು. ವಿಶೇಷ ವಿವಾಹ ಕಾಯಿದೆಯಲ್ಲಿನ ಬದಲಾವಣೆಯನ್ನು ಸಂಸತ್ತು ನಿರ್ಧರಿಸಬೇಕು. ಈ ನ್ಯಾಯಾಲಯವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಪ್ರೀತಿ ಮತ್ತು ಸಂಪರ್ಕವು ನಮ್ಮನ್ನು ಮನುಷ್ಯರನ್ನಾಗಿ ಮಾಡುತ್ತದೆ. ನಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಅಗತ್ಯವು ನಮ್ಮನ್ನು ನಾವಾಗುವಂತೆ ಮಾಡುತ್ತದೆ. ಈ ಸಂಬಂಧಗಳು ಹಲವು ರೂಪಗಳನ್ನು ತೆಗೆದುಕೊಳ್ಳಬಹುದು, ರೊಮ್ಯಾಂಟಿಕ್‌, ರಿಲೇಷನ್‌ಶಿಪ್‌ಗಳು ಕೂಡ ಇರಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಆರ್ಟಿಕಲ್ 21ರ ಅಡಿಯಲ್ಲಿದೆ. ಸಲಿಂಗ ವಿವಾಹ ಕುರಿತು ಕಳವಳ ಪರಿಹರಿಸಲು ಕೇಂದ್ರವು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಬೇಕು. ಪಡಿತರ ಚೀಟಿಗಳು, ಪಿಂಚಣಿ, ಉತ್ತರಾಧಿಕಾರ ಸೇರಿದಂತೆ ಎಲ್ಲದಕ್ಕೂ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸಮುದಾಯದ ಕುರಿತಂತೆ ತಾರತಮ್ಯ ಮಾಡಬಾರದು. ಲಿಂಗದ ಗುರುತಿನ ಬಗ್ಗೆ ವಿಚಾರಿಸಲೆಂದು ಠಾಣೆಗೆ ಬರಲು ಹೇಳಿ ಎಲ್‌ಜಿಬಿಟಿ ಸಮುದಾಯಕ್ಕೆ ಯಾವುದೇ ಕಿರುಕುಳ ನೀಡಬಾರದು. ತಮ್ಮ ಹೆತ್ತವರ ಕುಟುಂಬಕ್ಕೆ ಮರಳುವಂತೆ ಕ್ವೀರ್ ಸಮುದಾಯದವರಿಗೆ ಪೊಲೀಸರು ಬಲವಂತಪಡಿಸುವಂತಿಲ್ಲ. ಸಾರ್ವಜನಿಕರಿಗೆ ಕ್ವೀರ್ ಸಮುದಾಯದವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಮುದಾಯಕಕೆ ಸುರಕ್ಷಿತ ತಾಣಗಳನ್ನು ನಿರ್ಮಿಸಬೇಕು. ತೃತೀಯ ಲಿಂಗಿ ಮಕ್ಕಳಿಗೆ ಶಸ್ತ್ರಕ್ರಿಯೆಗೆ ಬಲವಂತಪಡಿಸಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ವಿಶೇಷ ವಿವಾಹ ಕಾಯಿದೆ (SMA) ಅಡಿಯಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ದಂಪತಿ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ  ಸರಿಯಾದ ಕ್ರಮವಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಏಕೆಂದರೆ ನ್ಯಾಯಾಲಯವು ಅದರ ಪರಿಣಾಮಗಳನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು. ಸಲಿಂಗ ವಿವಾಹದ ವಿಷಯದ ಬಗ್ಗೆ ಏಳು ರಾಜ್ಯಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು. ರಾಜಸ್ಥಾನ, ಆಂಧ್ರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಅಂತಹ ವಿವಾಹಕ್ಕೆ ಕಾನೂನು ಅನುಮೋದನೆ ಕೋರಿದ್ದ ಅರ್ಜಿದಾರರ ವಾದವನ್ನು ವಿರೋಧಿಸಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...