Homeಕರ್ನಾಟಕಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

- Advertisement -
- Advertisement -

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅವರು ಮಾತನಾಡಿದರು.  

ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ‘ಇದು ಬಹಳ ಸೂಕ್ಷ್ಮವಾದ ವಿಷಯ, ಮತ್ತು ಸಾರ್ವಜನಿಕ ಚರ್ಚೆಗಳಲ್ಲಿ ಬಹಳಷ್ಟು ಕಾಲದಿಂದ, ದಶಕಗಳಿಂದ ನಡೆದುಕೊಂಡು ಬಂದಿರುವ ಹೋರಾಟ ಈ ಹೋರಾಟದ ಬಗ್ಗೆ ನಮಗೆ ಗೌರವವಿದೆ ಎಂದರು.   

‘ಇಂದು ನಮ್ಮ ಸರ್ಕಾರ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಬಹಳ ಸ್ಪಷ್ಟವಾಗಿ ನಾವು ಒಳಮೀಸಲಾತಿ ಆಗಬೇಕು, ಅದನ್ನು ಜಾರಿ ಮಾಡುವ ಬದ್ಧತೆ ಇದೆ ಅನ್ನುವ ಸ್ಪಷ್ಟತೆಯನ್ನು ನೀಡಿದೆ’ ಎಂದರು. 

ಒಳಮೀಸಲಾತಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಇದನ್ನು ನಾವು ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಹಲವು ಸಭೆಗಳಲ್ಲೂ ಹೇಳಿದ್ದೇವೆ. ಮತ್ತು ಸಚಿವ ಸಂಪುಟ ಸಭೆಯಲ್ಲಿ ನಾವು ಒಳಮೀಸಲಾತಿ ಜಾರಿ ಮಾಡುವ ಕ್ರಮದ ಬಗ್ಗೆಯೂ ತಿಳಿಸಿದ್ದೇವೆ. ಮೀಸಲಾತಿಯನ್ನು ಹೆಚ್ಚು ಮಾಡಿ, ಎಸ್-ಸಿ ಗೆ 17%, ಎಸ್-ಟಿಗೆ 7% ಹೆಚ್ಚು ಮಾಡಿ ಇತ್ಯರ್ಥ ಮಾಡುವ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ಸಾಮಾಜಿಕ-ಶೈಕ್ಷಣಿಕ-ಆರ್ಥಿಕ ಸಮೀಕ್ಷೆಯನ್ನ ಮಾಡಿಸಿದ್ದೇವೆ. ಎರಡು ಬಾರಿ ಸಮೀಕ್ಷೆ ಮಾಡಿಸಿದ್ದು ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಸರ್ಕಾರವೇ ಎಂದು ಹೇಳಿದರು. 

ಯಾವುದೇ ಸಮಸ್ಯೆ ಮತ್ತೆ ಬರಬಾರದು ಎನ್ನುವ ಕಾರಣಕ್ಕೆ ಎರಡನೇ ಬಾರಿಗೆ ಸಮೀಕ್ಷೆಯನ್ನು ಮಾಡಿ, ಸಮೀಕ್ಷೆಯ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ. ಅನುಮೋದನೆಯೂ ಆಗಿದೆ. ಆದರೆ ನ್ಯಾಯಾಲಯದಲ್ಲಿ ನಿಂತಿದೆ. ಅದು ನ್ಯಾಯಾಲಯದಲ್ಲಿರುವುದರಿಂದ ನಾವು ಸದ್ಯದ ನಿರ್ಧಾರ ತೆಗೆದುಕೊಳ್ಳುವಂತಿರಲಿಲ್ಲ ಎಂದರು.  

ಅಲ್ಲದೇ ಶೆಡ್ಯೂಲ್ 9 ರಲ್ಲಿ ಸೇರಿಸಿದರೆ ಯಾವ ತಕರಾರು ಇರುವುದಿಲ್ಲ, ಅದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಬಗ್ಗೆ ಈಗ ಮಾತನಾಡುವುದಿಲ್ಲ ಎಂದ ದಿನೇಶ್ ಗುಂಡೂರಾವ್ ಅವರು, ಒಳಮೀಸಲಾತಿಯ ಪರವಾಗಿರುವ ತೀರ್ಮಾನ ಈಗಾಗಲೇ ಆಗಿದೆ. ಈಗ ಮುಖ್ಯಮಂತ್ರಿಯವರು ಇದನ್ನ ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು, ಯಾರಿಗೂ ಅನ್ಯಾಯ ಆಗದೆ ಹಂಚಿಕೆ ಮಾಡುವ ಕಾರಣಕ್ಕೆ 27ಕ್ಕೆ ಸಚಿವ ಸಂಪುಟ ಸಭೆಯನ್ನ ಕರೆದಿದ್ದಾರೆ. ಆ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳುತ್ತೇನೆ. ಮುಖ್ಯಮಂತ್ರಿಗಳು ಈ ವಿಚಾರಕ್ಕೆ ಯಾವ ಮಟ್ಟದ ಪ್ರಾಧ್ಯಾನ್ಯತೆ ನೀಡಿದ್ದಾರೆ ಅನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದರು. 

27ನೇ ತಾರೀಖಿನ ಸಚಿವ ಸಂಪುಟ ಸಭೆಯ ತೀರ್ಮಾನಕ್ಕೆ ನೀವೆಲ್ಲರೂ ಕಾಯಬೇಕು ಎಂದು ಹೇಳಿದರು. 

ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ‘ಸರ್ಕಾರ 56 ಸಾವಿರ ನೇಮಕಾತಿಯನ್ನು ಒಳಮೀಸಲಾತಿ ಜಾರಿಯಾಗದೇ ಮಾಡುವುದಿಲ್ಲ ಎನ್ನುವ ಮಾತು ನೀಡಿದೆ. ರಾಜ್ಯದ ಮುಖ್ಯಮಂತ್ರಿಗಳ ಮಾತನ್ನು ನಾವು ನಂಬಬೇಕು, ಗೌರವಿಸಬೇಕು, ಕಾಯ್ದು ನೋಡೋಣ, ತಾಳ್ಮೆಯಿಂದ ಇರಿ’ ಎಂದು ಸಮುದಾಯಕ್ಕೆ ಕರೆ ಕೊಟ್ಟರು. 

ಮಾಜಿ ಸಚಿವ ಎಚ್. ಆಂಜನೇಯ ಅವರು ಮಾತನಾಡಿ, ‘ಹೋರಾಟಗಾರರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಚರ್ಚೆ ಮಾಡಿದ್ದಾರೆ. 27ಕ್ಕೆ ನಡೆಯುವ ಸಚಿವ ಸಂಪುಟದಲ್ಲಿ ನಮ್ಮ ಪಾಲು ಏನಿದೆಯೋ ಅದನ್ನು ನೀಡಲಾಗುತ್ತದೆ. ಒಳಮೀಸಲಾತಿ ಜಾರಿಯಾಗದೇ 56ಸಾವಿರ ಹುದ್ದೆಗಳನ್ನ ತುಂಬಲಾಗುವುದಿಲ್ಲ, 27ಕ್ಕೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪಾಲು ನಮಗೆ ನೀಡಬೇಕು. ಇಲ್ಲವಾದರೆ ಸರ್ಕಾರಕ್ಕೆ ಮಾದಿಗರ ಸಾವನ್ನ ಎದುರಿಸಿ ಅನ್ನುವ ಸವಾಲಿನೊಂದಿಗೆ ನಾವು ಬೀದಿಗಿಳಿಯುತ್ತೇವೆ’ ಅಂದರು. 

ಈ ವೇಳೆ ನಿಮ್ಮೆಲ್ಲರ ಹೋರಾಟದ ಫಲದಿಂದ 27ನೇ ತಾರೀಖು ಮಾದಿಗರಿಗೆ ಸ್ವಾತಂತ್ರ್ಯ ಸಿಗುತ್ತದೆ ಎಂದು ಘೋಷಣೆ ಮಾಡಿದರು. 

ಸರ್ಕಾರದ ಪರವಾಗಿ ಬಂದಿದ್ದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ನಮ್ಮ ಸರ್ಕಾರ ಚಿತ್ರದುರ್ಗ ಸಮಾವೇಶದಲ್ಲಿ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳಿದೆ, ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿ ಮಾಡಲು ನಿರ್ಧಾರ ಕೈಗೊಂಡಿದ್ದೇವೆ. ಕೆಲವು ಸಮಸ್ಯೆಗಳನ್ನು ಬಗೆ ಹರಿಸಲು ಉಭಯ ಸದನದಲ್ಲಿ ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ 17%, ಪರಿಶಿಷ್ಟ ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಬೇಕೆಂದು ಕೇಳಿದ್ದೇವೆ. ಈಗ ಚೆಂಡು ಕೇಂದ್ರದ ಅಂಗಳದಲ್ಲಿದೆ. ರೋಸ್ಟರ್ ಬಿಂದು ಸಮಸ್ಯೆ ಎದುರಾಗಿದೆ. ತಾವೇ ಹೇಳಿದಂತೆ ರೋಸ್ಟರ್ ನಲ್ಲಿ ಸಮಸ್ಯೆ ಇದೆ. ಆ ಕಾರಣಕ್ಕೆ ಯಾರಿಗೂ ಅನ್ಯಾಯ ಆಗದಂತೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಾರಿ ಮಾಡಬೇಕು ಅನ್ನುವುದು ಸರ್ಕಾರದ ನಿರ್ಧಾರ. ಸಚಿವ ಸಂಪುಟ ಸಭೆಯಲ್ಲಿಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಯಾವ ಸಚಿವರೂ ಇದಕ್ಕೆ ಚಕಾರವೆತ್ತಿಲ್ಲ ಎಂದರು. 

ಮುಖ್ಯಮಂತ್ರಿಗಳು ಇಂದು ಮತ್ತೆ 27ಕ್ಕೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಇಲ್ಲಿ ಬಂದಿದ್ದೇವೆ. ನಾವೆಲ್ಲಾ ನಿಮ್ಮ ಪರವಾಗೇ ಇದ್ದೇವೆ. ಇನ್ನು 15 ದಿನಗಳ ಒಳಗಾಗಿ ಒಳಮೀಸಲಾತಿ ಸಮಸ್ಯೆ ಶಾಶ್ವತವಾಗಿ ಬಗೆಹರಿಯುತ್ತೆ ಎನ್ನುವ ಭರವಸೆ ನೀಡಿದರು. 

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, 15ರಲ್ಲಿ ಒಳಮೀಸಲಾತಿ ಜಾರಿ ಮಾಡುವುದರಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಕೂಡಾ ನಾವು ಚರ್ಚೆ ಮಾಡಿದ್ದೇವೆ. ನಿಮ್ಮ ಬೇಡಿಕೆಯಂತೆ 56 ಸಾವಿರ ಹುದ್ದೆ ನೇಮಕಾತಿಯನ್ನ ನಿಮ್ಮ ಬೇಡಿಕೆಯನ್ನು ಸರಿ ಮಾಡಿಯೇ ಹುದ್ದೆಗಳನ್ನ ಭರ್ತಿ ಮಾಡುತ್ತೇವೆ. ಮುನಿಯಪ್ಪನವರು ನಿಮ್ಮ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. 27ಕ್ಕೆ ವಿಶೇಷ ಸಭೆ ಆಗುತ್ತಿದೆ. ನಿಮ್ಮ ಪರವಾಗಿ ಸಿದ್ದರಾಮಯ್ಯ ಸರ್ಕಾರ ಇದೆ. 15ದಿನಗಳು ಕಾಯ್ದರೆ ನಿಮಗೆ ಒಳ್ಳೆ ದಿನಗಳು ಬರುತ್ತವೆ ಎಂದು ಹೇಳಿದರು.  

ಈ ವೇಳೆ ಸಚಿವರಾದ ಕೆ.ಎಚ್. ಮುನಿಯಪ್ಪ, ಈಶ್ವರ ಖಂಡ್ರೆ, ದಿನೇಶ್‌ ಗುಂಡೂರಾವ್, ಸತೀಶ್‌ ಜಾರಕಿಹೊಳಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರು ಸರ್ಕಾರದ ನಿರ್ಧಾರವನ್ನು ಪುನರುಚ್ಛರಿಸಿದರು.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮೂರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮೂರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮೂರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ,  ವೇಣುಗೋಪಾಲ್ ಮೌರ್ಯ,  ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು, ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...