Homeಕರ್ನಾಟಕಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

- Advertisement -
- Advertisement -

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅವರು ಮಾತನಾಡಿದರು.  

ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ‘ಇದು ಬಹಳ ಸೂಕ್ಷ್ಮವಾದ ವಿಷಯ, ಮತ್ತು ಸಾರ್ವಜನಿಕ ಚರ್ಚೆಗಳಲ್ಲಿ ಬಹಳಷ್ಟು ಕಾಲದಿಂದ, ದಶಕಗಳಿಂದ ನಡೆದುಕೊಂಡು ಬಂದಿರುವ ಹೋರಾಟ ಈ ಹೋರಾಟದ ಬಗ್ಗೆ ನಮಗೆ ಗೌರವವಿದೆ ಎಂದರು.   

‘ಇಂದು ನಮ್ಮ ಸರ್ಕಾರ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಬಹಳ ಸ್ಪಷ್ಟವಾಗಿ ನಾವು ಒಳಮೀಸಲಾತಿ ಆಗಬೇಕು, ಅದನ್ನು ಜಾರಿ ಮಾಡುವ ಬದ್ಧತೆ ಇದೆ ಅನ್ನುವ ಸ್ಪಷ್ಟತೆಯನ್ನು ನೀಡಿದೆ’ ಎಂದರು. 

ಒಳಮೀಸಲಾತಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಇದನ್ನು ನಾವು ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಹಲವು ಸಭೆಗಳಲ್ಲೂ ಹೇಳಿದ್ದೇವೆ. ಮತ್ತು ಸಚಿವ ಸಂಪುಟ ಸಭೆಯಲ್ಲಿ ನಾವು ಒಳಮೀಸಲಾತಿ ಜಾರಿ ಮಾಡುವ ಕ್ರಮದ ಬಗ್ಗೆಯೂ ತಿಳಿಸಿದ್ದೇವೆ. ಮೀಸಲಾತಿಯನ್ನು ಹೆಚ್ಚು ಮಾಡಿ, ಎಸ್-ಸಿ ಗೆ 17%, ಎಸ್-ಟಿಗೆ 7% ಹೆಚ್ಚು ಮಾಡಿ ಇತ್ಯರ್ಥ ಮಾಡುವ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ಸಾಮಾಜಿಕ-ಶೈಕ್ಷಣಿಕ-ಆರ್ಥಿಕ ಸಮೀಕ್ಷೆಯನ್ನ ಮಾಡಿಸಿದ್ದೇವೆ. ಎರಡು ಬಾರಿ ಸಮೀಕ್ಷೆ ಮಾಡಿಸಿದ್ದು ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಸರ್ಕಾರವೇ ಎಂದು ಹೇಳಿದರು. 

ಯಾವುದೇ ಸಮಸ್ಯೆ ಮತ್ತೆ ಬರಬಾರದು ಎನ್ನುವ ಕಾರಣಕ್ಕೆ ಎರಡನೇ ಬಾರಿಗೆ ಸಮೀಕ್ಷೆಯನ್ನು ಮಾಡಿ, ಸಮೀಕ್ಷೆಯ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ. ಅನುಮೋದನೆಯೂ ಆಗಿದೆ. ಆದರೆ ನ್ಯಾಯಾಲಯದಲ್ಲಿ ನಿಂತಿದೆ. ಅದು ನ್ಯಾಯಾಲಯದಲ್ಲಿರುವುದರಿಂದ ನಾವು ಸದ್ಯದ ನಿರ್ಧಾರ ತೆಗೆದುಕೊಳ್ಳುವಂತಿರಲಿಲ್ಲ ಎಂದರು.  

ಅಲ್ಲದೇ ಶೆಡ್ಯೂಲ್ 9 ರಲ್ಲಿ ಸೇರಿಸಿದರೆ ಯಾವ ತಕರಾರು ಇರುವುದಿಲ್ಲ, ಅದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಬಗ್ಗೆ ಈಗ ಮಾತನಾಡುವುದಿಲ್ಲ ಎಂದ ದಿನೇಶ್ ಗುಂಡೂರಾವ್ ಅವರು, ಒಳಮೀಸಲಾತಿಯ ಪರವಾಗಿರುವ ತೀರ್ಮಾನ ಈಗಾಗಲೇ ಆಗಿದೆ. ಈಗ ಮುಖ್ಯಮಂತ್ರಿಯವರು ಇದನ್ನ ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು, ಯಾರಿಗೂ ಅನ್ಯಾಯ ಆಗದೆ ಹಂಚಿಕೆ ಮಾಡುವ ಕಾರಣಕ್ಕೆ 27ಕ್ಕೆ ಸಚಿವ ಸಂಪುಟ ಸಭೆಯನ್ನ ಕರೆದಿದ್ದಾರೆ. ಆ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳುತ್ತೇನೆ. ಮುಖ್ಯಮಂತ್ರಿಗಳು ಈ ವಿಚಾರಕ್ಕೆ ಯಾವ ಮಟ್ಟದ ಪ್ರಾಧ್ಯಾನ್ಯತೆ ನೀಡಿದ್ದಾರೆ ಅನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದರು. 

27ನೇ ತಾರೀಖಿನ ಸಚಿವ ಸಂಪುಟ ಸಭೆಯ ತೀರ್ಮಾನಕ್ಕೆ ನೀವೆಲ್ಲರೂ ಕಾಯಬೇಕು ಎಂದು ಹೇಳಿದರು. 

ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ‘ಸರ್ಕಾರ 56 ಸಾವಿರ ನೇಮಕಾತಿಯನ್ನು ಒಳಮೀಸಲಾತಿ ಜಾರಿಯಾಗದೇ ಮಾಡುವುದಿಲ್ಲ ಎನ್ನುವ ಮಾತು ನೀಡಿದೆ. ರಾಜ್ಯದ ಮುಖ್ಯಮಂತ್ರಿಗಳ ಮಾತನ್ನು ನಾವು ನಂಬಬೇಕು, ಗೌರವಿಸಬೇಕು, ಕಾಯ್ದು ನೋಡೋಣ, ತಾಳ್ಮೆಯಿಂದ ಇರಿ’ ಎಂದು ಸಮುದಾಯಕ್ಕೆ ಕರೆ ಕೊಟ್ಟರು. 

ಮಾಜಿ ಸಚಿವ ಎಚ್. ಆಂಜನೇಯ ಅವರು ಮಾತನಾಡಿ, ‘ಹೋರಾಟಗಾರರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಚರ್ಚೆ ಮಾಡಿದ್ದಾರೆ. 27ಕ್ಕೆ ನಡೆಯುವ ಸಚಿವ ಸಂಪುಟದಲ್ಲಿ ನಮ್ಮ ಪಾಲು ಏನಿದೆಯೋ ಅದನ್ನು ನೀಡಲಾಗುತ್ತದೆ. ಒಳಮೀಸಲಾತಿ ಜಾರಿಯಾಗದೇ 56ಸಾವಿರ ಹುದ್ದೆಗಳನ್ನ ತುಂಬಲಾಗುವುದಿಲ್ಲ, 27ಕ್ಕೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪಾಲು ನಮಗೆ ನೀಡಬೇಕು. ಇಲ್ಲವಾದರೆ ಸರ್ಕಾರಕ್ಕೆ ಮಾದಿಗರ ಸಾವನ್ನ ಎದುರಿಸಿ ಅನ್ನುವ ಸವಾಲಿನೊಂದಿಗೆ ನಾವು ಬೀದಿಗಿಳಿಯುತ್ತೇವೆ’ ಅಂದರು. 

ಈ ವೇಳೆ ನಿಮ್ಮೆಲ್ಲರ ಹೋರಾಟದ ಫಲದಿಂದ 27ನೇ ತಾರೀಖು ಮಾದಿಗರಿಗೆ ಸ್ವಾತಂತ್ರ್ಯ ಸಿಗುತ್ತದೆ ಎಂದು ಘೋಷಣೆ ಮಾಡಿದರು. 

ಸರ್ಕಾರದ ಪರವಾಗಿ ಬಂದಿದ್ದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ನಮ್ಮ ಸರ್ಕಾರ ಚಿತ್ರದುರ್ಗ ಸಮಾವೇಶದಲ್ಲಿ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳಿದೆ, ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿ ಮಾಡಲು ನಿರ್ಧಾರ ಕೈಗೊಂಡಿದ್ದೇವೆ. ಕೆಲವು ಸಮಸ್ಯೆಗಳನ್ನು ಬಗೆ ಹರಿಸಲು ಉಭಯ ಸದನದಲ್ಲಿ ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ 17%, ಪರಿಶಿಷ್ಟ ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಬೇಕೆಂದು ಕೇಳಿದ್ದೇವೆ. ಈಗ ಚೆಂಡು ಕೇಂದ್ರದ ಅಂಗಳದಲ್ಲಿದೆ. ರೋಸ್ಟರ್ ಬಿಂದು ಸಮಸ್ಯೆ ಎದುರಾಗಿದೆ. ತಾವೇ ಹೇಳಿದಂತೆ ರೋಸ್ಟರ್ ನಲ್ಲಿ ಸಮಸ್ಯೆ ಇದೆ. ಆ ಕಾರಣಕ್ಕೆ ಯಾರಿಗೂ ಅನ್ಯಾಯ ಆಗದಂತೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಾರಿ ಮಾಡಬೇಕು ಅನ್ನುವುದು ಸರ್ಕಾರದ ನಿರ್ಧಾರ. ಸಚಿವ ಸಂಪುಟ ಸಭೆಯಲ್ಲಿಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಯಾವ ಸಚಿವರೂ ಇದಕ್ಕೆ ಚಕಾರವೆತ್ತಿಲ್ಲ ಎಂದರು. 

ಮುಖ್ಯಮಂತ್ರಿಗಳು ಇಂದು ಮತ್ತೆ 27ಕ್ಕೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಇಲ್ಲಿ ಬಂದಿದ್ದೇವೆ. ನಾವೆಲ್ಲಾ ನಿಮ್ಮ ಪರವಾಗೇ ಇದ್ದೇವೆ. ಇನ್ನು 15 ದಿನಗಳ ಒಳಗಾಗಿ ಒಳಮೀಸಲಾತಿ ಸಮಸ್ಯೆ ಶಾಶ್ವತವಾಗಿ ಬಗೆಹರಿಯುತ್ತೆ ಎನ್ನುವ ಭರವಸೆ ನೀಡಿದರು. 

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, 15ರಲ್ಲಿ ಒಳಮೀಸಲಾತಿ ಜಾರಿ ಮಾಡುವುದರಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಕೂಡಾ ನಾವು ಚರ್ಚೆ ಮಾಡಿದ್ದೇವೆ. ನಿಮ್ಮ ಬೇಡಿಕೆಯಂತೆ 56 ಸಾವಿರ ಹುದ್ದೆ ನೇಮಕಾತಿಯನ್ನ ನಿಮ್ಮ ಬೇಡಿಕೆಯನ್ನು ಸರಿ ಮಾಡಿಯೇ ಹುದ್ದೆಗಳನ್ನ ಭರ್ತಿ ಮಾಡುತ್ತೇವೆ. ಮುನಿಯಪ್ಪನವರು ನಿಮ್ಮ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. 27ಕ್ಕೆ ವಿಶೇಷ ಸಭೆ ಆಗುತ್ತಿದೆ. ನಿಮ್ಮ ಪರವಾಗಿ ಸಿದ್ದರಾಮಯ್ಯ ಸರ್ಕಾರ ಇದೆ. 15ದಿನಗಳು ಕಾಯ್ದರೆ ನಿಮಗೆ ಒಳ್ಳೆ ದಿನಗಳು ಬರುತ್ತವೆ ಎಂದು ಹೇಳಿದರು.  

ಈ ವೇಳೆ ಸಚಿವರಾದ ಕೆ.ಎಚ್. ಮುನಿಯಪ್ಪ, ಈಶ್ವರ ಖಂಡ್ರೆ, ದಿನೇಶ್‌ ಗುಂಡೂರಾವ್, ಸತೀಶ್‌ ಜಾರಕಿಹೊಳಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರು ಸರ್ಕಾರದ ನಿರ್ಧಾರವನ್ನು ಪುನರುಚ್ಛರಿಸಿದರು.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮೂರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮೂರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮೂರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ,  ವೇಣುಗೋಪಾಲ್ ಮೌರ್ಯ,  ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು, ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...