Homeಮುಖಪುಟಸಿಂಘು ಗಡಿಯಲ್ಲಿ ಕೊಲೆ: ಪಶ್ಚಾತಾಪವಿಲ್ಲವೆಂದ ಆರೋಪಿ ನಿಹಾಂಗ್

ಸಿಂಘು ಗಡಿಯಲ್ಲಿ ಕೊಲೆ: ಪಶ್ಚಾತಾಪವಿಲ್ಲವೆಂದ ಆರೋಪಿ ನಿಹಾಂಗ್

- Advertisement -
- Advertisement -

ಸಿಂಘು ಗಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ್ದ ಬರ್ಬರ ಹತ್ಯೆಯ ಹೊಣೆ ಹೊತ್ತಿರುವ ನಿಹಾಂಗ್ ಗುಂಪಿನ ಸರವ್ ಜಿತ್ ಸಿಂಗ್ ತನ್ನ ಕೃತ್ಯಕ್ಕೆ ಯಾವುದೇ ಪಶ್ಚಾತಾಪವಿಲ್ಲ ಎಂದಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಬರ್ಬರ ಕೊಲೆಗೆ ಸಂಬಂಧಿಸಿದಂತೆ ಮೂರು ವಿಡಿಯೋಗಳು ವೈರಲ್ ಆಗಿವೆ. ಶರಣಾಗುವ ಮುನ್ನ ದಾಖಲಾಗಿರುವ ವಿಡಿಯೋವೊಂದರಲ್ಲಿ ಪತ್ರಕರ್ತನೊಬ್ಬ ನಿಮಗೆ ಪಶ್ಚಾತಾಪವಿದೆಯೇ ಎಂಬ ಪ್ರಶ್ನೆಗೆ ಸರವ್ ಜಿತ್ ಸಿಂಗ್ ಎಂದು ತಲೆಯಾಡಿಸಿದ್ದಾನೆ.

ನ್ಯಾಯಾಲಯವು ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನು ನಾಲ್ವರು ಶಂಕಿತರಿಂದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಮೃತರನ್ನು ಪಂಜಾಬ್‌ನ ತರ್ನ್‌ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ (35) ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ. ದಲಿತರಾಗಿರುವ ಅವರು ಕಾರ್ಮಿಕರಾಗಿದ್ದು, ದತ್ತು ಪುತ್ರ, ಒಬ್ಬ ಸಹೋದರಿ, ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಲಖ್ಬೀರ್ ಸಿಂಗ್ ಅವರನ್ನು ಹೊಡೆದು ಸಾಯಿಸಲಾಗಿದೆ. ಆತನ ಎಡಗೈ ಮತ್ತು ಬಲಗಾಲನ್ನು ಕತ್ತರಿಸಲಾಗಿದೆ ಎಂದು ವರದಿಗಳು ಹೇಳುತ್ತವೆ. ನಂತರ ಆತನ ಕೊಲೆಗಾರರು ಶವವನ್ನು ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿದ್ದರು ಎಂದು ತಿಳಿದುಬಂದಿದೆ.

ಆದರೆ ಲಖ್ಬೀರ್ ಸಿಂಗ್ ಸ್ವಗ್ರಾಮದಲ್ಲಿನ ಜನರು ಬೇರೆಯದೆ ಹೇಳಿಕೆ ನೀಡುತ್ತಿದ್ದಾರೆ. “ಅವನು ಇದನ್ನು ಮಾಡಲು ಸಾಧ್ಯವಿಲ್ಲ; ಅವನು ಆ ರೀತಿಯ ವ್ಯಕ್ತಿಯಲ್ಲ. ಅವನಿಂದ ಇದನ್ನು ಮಾಡಿಸಲಾಗಿದೆ” ಎಂದು ಮಾಸಾ ಸಿಂಗ್ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ. “ಲಖ್ಬೀರ್ ಸಿಖ್ ಧರ್ಮಗ್ರಂಥವನ್ನು ಅಪವಿತ್ರಗೊಳಿಸುವುದರಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ. ಆತನನ್ನು ಆ ಕೃತ್ಯ ಎಸಗುವಂತೆ ಪ್ರೇರೆಪಿಸಲಾಗಿದೆ” ಎಂದು ನಿವೃತ್ತ ಸೈನಿಕ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

ಇದೇ ರೀತಿಯ ಆರೋಪವನ್ನು ಸಂಯುಕ್ತ ಕಿಸಾನ್ ಮೋರ್ಚಾದ ಜಗ್ಜಿತ್ ಸಿಂಗ್ ದಲ್ಲೆವಾಲ್ ಮಾಡಿದ್ದರು. ಮೃತ ವ್ಯಕ್ತಿಗೆ 30,000 ಹಣದ ಆಮಿಷವೊಡ್ಡಿ ಈ ಕೃತ್ಯ ಮಾಡುವಂತೆ ಒತ್ತಾಯಿಸಲಾಗಿದೆ ಎಂದಿದ್ದರು.

ಸಂಯುಕ್ತ ಕಿಸಾನ್‌ ಮೋರ್ಚಾ ಖಂಡನೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಕಾನೂನುಬದ್ಧ ತನಿಖೆಗೆ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...