Homeಮುಖಪುಟಸಿಂಘು ಗಡಿಯಲ್ಲಿ ಕೊಲೆ: ಪಶ್ಚಾತಾಪವಿಲ್ಲವೆಂದ ಆರೋಪಿ ನಿಹಾಂಗ್

ಸಿಂಘು ಗಡಿಯಲ್ಲಿ ಕೊಲೆ: ಪಶ್ಚಾತಾಪವಿಲ್ಲವೆಂದ ಆರೋಪಿ ನಿಹಾಂಗ್

- Advertisement -
- Advertisement -

ಸಿಂಘು ಗಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ್ದ ಬರ್ಬರ ಹತ್ಯೆಯ ಹೊಣೆ ಹೊತ್ತಿರುವ ನಿಹಾಂಗ್ ಗುಂಪಿನ ಸರವ್ ಜಿತ್ ಸಿಂಗ್ ತನ್ನ ಕೃತ್ಯಕ್ಕೆ ಯಾವುದೇ ಪಶ್ಚಾತಾಪವಿಲ್ಲ ಎಂದಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಬರ್ಬರ ಕೊಲೆಗೆ ಸಂಬಂಧಿಸಿದಂತೆ ಮೂರು ವಿಡಿಯೋಗಳು ವೈರಲ್ ಆಗಿವೆ. ಶರಣಾಗುವ ಮುನ್ನ ದಾಖಲಾಗಿರುವ ವಿಡಿಯೋವೊಂದರಲ್ಲಿ ಪತ್ರಕರ್ತನೊಬ್ಬ ನಿಮಗೆ ಪಶ್ಚಾತಾಪವಿದೆಯೇ ಎಂಬ ಪ್ರಶ್ನೆಗೆ ಸರವ್ ಜಿತ್ ಸಿಂಗ್ ಎಂದು ತಲೆಯಾಡಿಸಿದ್ದಾನೆ.

ನ್ಯಾಯಾಲಯವು ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನು ನಾಲ್ವರು ಶಂಕಿತರಿಂದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಮೃತರನ್ನು ಪಂಜಾಬ್‌ನ ತರ್ನ್‌ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ (35) ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ. ದಲಿತರಾಗಿರುವ ಅವರು ಕಾರ್ಮಿಕರಾಗಿದ್ದು, ದತ್ತು ಪುತ್ರ, ಒಬ್ಬ ಸಹೋದರಿ, ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಲಖ್ಬೀರ್ ಸಿಂಗ್ ಅವರನ್ನು ಹೊಡೆದು ಸಾಯಿಸಲಾಗಿದೆ. ಆತನ ಎಡಗೈ ಮತ್ತು ಬಲಗಾಲನ್ನು ಕತ್ತರಿಸಲಾಗಿದೆ ಎಂದು ವರದಿಗಳು ಹೇಳುತ್ತವೆ. ನಂತರ ಆತನ ಕೊಲೆಗಾರರು ಶವವನ್ನು ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿದ್ದರು ಎಂದು ತಿಳಿದುಬಂದಿದೆ.

ಆದರೆ ಲಖ್ಬೀರ್ ಸಿಂಗ್ ಸ್ವಗ್ರಾಮದಲ್ಲಿನ ಜನರು ಬೇರೆಯದೆ ಹೇಳಿಕೆ ನೀಡುತ್ತಿದ್ದಾರೆ. “ಅವನು ಇದನ್ನು ಮಾಡಲು ಸಾಧ್ಯವಿಲ್ಲ; ಅವನು ಆ ರೀತಿಯ ವ್ಯಕ್ತಿಯಲ್ಲ. ಅವನಿಂದ ಇದನ್ನು ಮಾಡಿಸಲಾಗಿದೆ” ಎಂದು ಮಾಸಾ ಸಿಂಗ್ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ. “ಲಖ್ಬೀರ್ ಸಿಖ್ ಧರ್ಮಗ್ರಂಥವನ್ನು ಅಪವಿತ್ರಗೊಳಿಸುವುದರಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ. ಆತನನ್ನು ಆ ಕೃತ್ಯ ಎಸಗುವಂತೆ ಪ್ರೇರೆಪಿಸಲಾಗಿದೆ” ಎಂದು ನಿವೃತ್ತ ಸೈನಿಕ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

ಇದೇ ರೀತಿಯ ಆರೋಪವನ್ನು ಸಂಯುಕ್ತ ಕಿಸಾನ್ ಮೋರ್ಚಾದ ಜಗ್ಜಿತ್ ಸಿಂಗ್ ದಲ್ಲೆವಾಲ್ ಮಾಡಿದ್ದರು. ಮೃತ ವ್ಯಕ್ತಿಗೆ 30,000 ಹಣದ ಆಮಿಷವೊಡ್ಡಿ ಈ ಕೃತ್ಯ ಮಾಡುವಂತೆ ಒತ್ತಾಯಿಸಲಾಗಿದೆ ಎಂದಿದ್ದರು.

ಸಂಯುಕ್ತ ಕಿಸಾನ್‌ ಮೋರ್ಚಾ ಖಂಡನೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಕಾನೂನುಬದ್ಧ ತನಿಖೆಗೆ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...