Homeಮುಖಪುಟಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಕೇಂದ್ರ ಸರ್ಕಾರ

ಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ವರದಿಗಳು ಬಂದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ್ ಅಠಾವಳೆ ಮಂಗಳವಾರ (ಜುಲೈ 22) ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಠಾವಳೆ, ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ, 2013, ಡಿಸೆಂಬರ್ 6, 2013 ರಿಂದ ಜಾರಿಗೆ ಬಂದಿದ್ದು, ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಶೌಚಗುಂಡಿಗಳು ಅಥವಾ ಮ್ಯಾನ್‌ ಹೋಲ್‌ಗಳಿಗೆ ಇಳಿದ ಕಾರ್ಮಿಕರು ಉಸಿರುಗಟ್ಟಿ ಸಾಯುತ್ತಿರುವ ಬಗ್ಗೆ ಪದೇ ಪದೇ ವರದಿಯಾಗುತ್ತಿರುತ್ತವೆ. ವಿವಿಧ ಕಾರ್ಮಿಕ ಮತ್ತು ಸಾಮಾಜಿಕ ಸಂಘ, ಸಂಸ್ಥೆಗಳು, ಹೋರಾಟಗಾರರು ಈ ಪದ್ದತಿ ವಿರುದ್ದ ಧ್ವನಿ ಎತ್ತುತ್ತಿದ್ದಾರೆ. ಆದರೂ, ಈ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ ಎಂದು ಸಚಿವರು ಕೈ ತೊಳೆದುಕೊಂಡಿದ್ದಾರೆ.

ಈ ನಡುವೆ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನೈರ್ಮಲ್ಯ ಕಾರ್ಮಿಕರ ಸಾವುಗಳನ್ನು ಅಧ್ಯಯನ ಮಾಡಲು ಸಚಿವಾಲಯವು ಸೆಪ್ಟೆಂಬರ್ 2023ರಲ್ಲಿ ಸೋಶಿಯಲ್ ಆಡಿಟ್ ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಾದ ಮುಂಬೈ, ಪುಣೆ, ಪರ್ಭಾನಿ ಮತ್ತು ಸತಾರ ಸೇರಿದಂತೆ ಒಟ್ಟು ಎಂಟು ರಾಜ್ಯಗಳ 17 ಜಿಲ್ಲೆಗಳಲ್ಲಿ 2022 ಮತ್ತು 2023 ರಲ್ಲಿ ಸಂಭವಿಸಿದ 54 ಸಾವುಗಳ ಕುರಿತು ಆಡಿಟ್ ಪರಿಶೀಲಿಸಿದೆ.

ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವುದರಿಂದ ಮತ್ತು 2013ರ ಕಾಯ್ದೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ರೂಪಿಸಲಾದ ಸುರಕ್ಷತಾ ಕಾರ್ಯವಿಧಾನಗಳನ್ನು ಪಾಲಿಸದ ಕಾರಣ ಈ ಸಾವುಗಳು ಸಂಭವಿಸಿವೆ ಎಂದು ಆಡಿಟ್ ಬಹಿರಂಗಪಡಿಸಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಅಂತಹ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಮತ್ತು ನಿಷೇಧಿತ ಚಟುವಟಿಕೆಗಳಲ್ಲಿ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ಕಾರಣರಾದವರ ವಿರುದ್ಧ ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಇನ್ನು ಮಲ ಹೊರುವ ಪದ್ದತಿಗೆ ಇತಿಶ್ರಿ ಹಾಡಲು ಸರ್ಕಾರವು 2023–24ರಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ರಾಷ್ಟ್ರೀಯ ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗಾಗಿ ಕಾರ್ಯ ಯೋಜನೆ ರೂಪಿಸಿದೆ.

ಈ ಉಪಕ್ರಮವು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಯುಎಲ್‌ಬಿ) ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸುವುದು ಮತ್ತು ಅವರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಯು ಪಿಪಿಇ ಕಿಟ್‌ಗಳು, ಆಯುಷ್ಮಾನ್ ಭಾರತ್-ಪಿಎಂಜೆಎವೈ ಆರೋಗ್ಯ ಕಾರ್ಡ್‌ಗಳು, ಔದ್ಯೋಗಿಕ ಸುರಕ್ಷತಾ ತರಬೇತಿ, ತುರ್ತು ಪ್ರತಿಕ್ರಿಯೆ ನೈರ್ಮಲ್ಯ ಘಟಕಗಳಿಗೆ (ಇಆರ್‌ಎಸ್‌ಯು) ಸುರಕ್ಷತಾ ಸಾಧನಗಳು, ನೈರ್ಮಲ್ಯ ಯಂತ್ರೋಪಕರಣಗಳಿಗೆ ಬಂಡವಾಳ ಸಬ್ಸಿಡಿಗಳು ಮತ್ತು ಅಪಾಯಕಾರಿ ಶುಚಿಗೊಳಿಸುವ ಪದ್ಧತಿಗಳನ್ನು ತಡೆಗಟ್ಟಲು ಕಾರ್ಯಾಗಾರಗಳನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....