Homeಕರ್ನಾಟಕಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್ಐಟಿ ಕೂಡ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌” ಎಂದರು.

“ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರೆಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರೆಂಟ್ ಜಾರಿಯಾದ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದು ಪರಮೇಶ್ವರ್ ಹೇಳಿದರು.

ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ” ಎಂದು ಕುಟುಕಿದರು.

ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುವುದರ ಬಗ್ಗೆ ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ-ಅಂಶವನ್ನು ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುವುದಕ್ಕೆ ಅಂಕಿ-ಅಂಶಗಳಿವೆ. ಅದಕ್ಕೆ, ಬಿಜೆಪಿಯವರು ಮೊದಲು ಉತ್ತರ ನೀಡಲಿ” ಎಂದು ಸವಾಲು ಹಾಕಿದರು.

“ಖಾಸಗಿ ವಲಯದಲ್ಲಿ ಮೀಸಲಾತಿ‌ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು. ಹೀಗಾಗಿ, ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ನೇಮಕ ಮಾಡಿಕೊಳ್ಳುವಾಗ ಮೆರಿಟ್‌ನಲ್ಲಿ ಹೊಂದಾಣಿಕೆಯಾಗುವುದು ಬೇಡ. ದಲಿತ ಸಮುದಾಯದ ಪದವೀದರರು ಮೆರಿಟ್‌ನಲ್ಲಿ ಬರುತ್ತಿದ್ದಾರೆ” ಎಂದರು.

“ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್‌ನ ಆದೇಶ ಯಾವಾಗ ಬೇಕಾದರು ಬರಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ” ತಿಳಿಸಿದರು.

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...