Homeಕರ್ನಾಟಕಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್ಐಟಿ ಕೂಡ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌” ಎಂದರು.

“ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರೆಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರೆಂಟ್ ಜಾರಿಯಾದ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದು ಪರಮೇಶ್ವರ್ ಹೇಳಿದರು.

ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ” ಎಂದು ಕುಟುಕಿದರು.

ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುವುದರ ಬಗ್ಗೆ ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ-ಅಂಶವನ್ನು ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುವುದಕ್ಕೆ ಅಂಕಿ-ಅಂಶಗಳಿವೆ. ಅದಕ್ಕೆ, ಬಿಜೆಪಿಯವರು ಮೊದಲು ಉತ್ತರ ನೀಡಲಿ” ಎಂದು ಸವಾಲು ಹಾಕಿದರು.

“ಖಾಸಗಿ ವಲಯದಲ್ಲಿ ಮೀಸಲಾತಿ‌ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು. ಹೀಗಾಗಿ, ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ನೇಮಕ ಮಾಡಿಕೊಳ್ಳುವಾಗ ಮೆರಿಟ್‌ನಲ್ಲಿ ಹೊಂದಾಣಿಕೆಯಾಗುವುದು ಬೇಡ. ದಲಿತ ಸಮುದಾಯದ ಪದವೀದರರು ಮೆರಿಟ್‌ನಲ್ಲಿ ಬರುತ್ತಿದ್ದಾರೆ” ಎಂದರು.

“ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್‌ನ ಆದೇಶ ಯಾವಾಗ ಬೇಕಾದರು ಬರಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ” ತಿಳಿಸಿದರು.

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...