Homeಮುಖಪುಟಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರೇ ಇಲ್ಲ!

ಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರೇ ಇಲ್ಲ!

ಜೂನ್ 12 ರಂದು ಎಫ್‌ಸಿಐ ಕರ್ನಾಟಕಕ್ಕೆ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದೇ ದಿನದಲ್ಲಿ ಕೇಂದ್ರ ಸರ್ಕಾರದ ಸೂಚನೆಯನ್ವಯ ಉಲ್ಟಾ ಹೊಡೆದಿತ್ತು.

- Advertisement -
- Advertisement -

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುಲು ಯಾರು ಮುಂದೆ ಬಂದಿಲ್ಲ ಎಂದು ವರದಿಯಾಗಿದೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಜುಲೈ 5 ರಂದು ನಡೆದ ಇ-ಹರಾಜಿನಲ್ಲಿ, ಎಫ್‌ಸಿಐ 19 ರಾಜ್ಯಗಳು ಮತ್ತು ಎನ್‌ಇಎಫ್ (ನಾರ್ತ್ ಈಸ್ಟ್ ಫ್ರಾಂಟಿಯರ್) ಪ್ರದೇಶದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿತ್ತು. ಆದರೆ ಮಹಾರಾಷ್ಟ್ರ (70 ಮೆಟ್ರಿಕ್ ಟನ್), ಗುಜರಾತ್ (50 ಮೆಟ್ರಿಕ್ ಟನ್) ಮತ್ತು ಕರ್ನಾಟಕ (40 ಮೆಟ್ರಿಕ್ ಟನ್) – ಮತ್ತು NEF ಪ್ರದೇಶ (10 ಮೆಟ್ರಿಕ್ ಟನ್) ಮಾತ್ರ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬಿಡ್ ಮಾಡಿವೆ. ಉಳಿದ 16 ರಾಜ್ಯಗಳು ಬಿಡ್ ಸಹ ಸಲ್ಲಿಸಿಲ್ಲ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಜೂನ್ 13 ರ ಮೊದಲು, ರಾಜ್ಯಗಳು ತಮ್ಮ ಸ್ವಂತ ಯೋಜನೆಗಳಿಗೆ ಕ್ವಿಂಟಾಲ್‌ಗೆ 3,400 ರೂ ದರದಲ್ಲಿ ಎಫ್‌ಸಿಐನಿಂದ ಅಕ್ಕಿ (ಬಲವರ್ಧಿತ ಅಕ್ಕಿ ಸೇರಿದಂತೆ) ಇ-ಹರಾಜಿನಲ್ಲಿ ಭಾಗವಹಿಸದೆ ಖರೀದಿಸುತ್ತಿದ್ದವು. 2023 ರಲ್ಲಿ ಮೇ 25 ರವರೆಗೆ 1.16 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯಗಳು ಖರೀದಿಸಿವೆ ಎಂದು FCI ವೆಬ್‌ಸೈಟ್‌ ಹೇಳುತ್ತದೆ. ಅದರಲ್ಲಿ 97 ಪ್ರತಿಶತ (1.12 ಮೆಟ್ರಿಕ್ ಟನ್) ಕರ್ನಾಟಕ ರಾಜ್ಯವೊಂದೇ ಖರೀದಿಸಿತ್ತು.

ಇದನ್ನೂ ಓದಿ: ಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ ವಿರುದ್ಧ ಡಿಕೆಶಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...