Homeಮುಖಪುಟಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರೇ ಇಲ್ಲ!

ಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರೇ ಇಲ್ಲ!

ಜೂನ್ 12 ರಂದು ಎಫ್‌ಸಿಐ ಕರ್ನಾಟಕಕ್ಕೆ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದೇ ದಿನದಲ್ಲಿ ಕೇಂದ್ರ ಸರ್ಕಾರದ ಸೂಚನೆಯನ್ವಯ ಉಲ್ಟಾ ಹೊಡೆದಿತ್ತು.

- Advertisement -
- Advertisement -

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುಲು ಯಾರು ಮುಂದೆ ಬಂದಿಲ್ಲ ಎಂದು ವರದಿಯಾಗಿದೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಜುಲೈ 5 ರಂದು ನಡೆದ ಇ-ಹರಾಜಿನಲ್ಲಿ, ಎಫ್‌ಸಿಐ 19 ರಾಜ್ಯಗಳು ಮತ್ತು ಎನ್‌ಇಎಫ್ (ನಾರ್ತ್ ಈಸ್ಟ್ ಫ್ರಾಂಟಿಯರ್) ಪ್ರದೇಶದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿತ್ತು. ಆದರೆ ಮಹಾರಾಷ್ಟ್ರ (70 ಮೆಟ್ರಿಕ್ ಟನ್), ಗುಜರಾತ್ (50 ಮೆಟ್ರಿಕ್ ಟನ್) ಮತ್ತು ಕರ್ನಾಟಕ (40 ಮೆಟ್ರಿಕ್ ಟನ್) – ಮತ್ತು NEF ಪ್ರದೇಶ (10 ಮೆಟ್ರಿಕ್ ಟನ್) ಮಾತ್ರ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬಿಡ್ ಮಾಡಿವೆ. ಉಳಿದ 16 ರಾಜ್ಯಗಳು ಬಿಡ್ ಸಹ ಸಲ್ಲಿಸಿಲ್ಲ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಜೂನ್ 13 ರ ಮೊದಲು, ರಾಜ್ಯಗಳು ತಮ್ಮ ಸ್ವಂತ ಯೋಜನೆಗಳಿಗೆ ಕ್ವಿಂಟಾಲ್‌ಗೆ 3,400 ರೂ ದರದಲ್ಲಿ ಎಫ್‌ಸಿಐನಿಂದ ಅಕ್ಕಿ (ಬಲವರ್ಧಿತ ಅಕ್ಕಿ ಸೇರಿದಂತೆ) ಇ-ಹರಾಜಿನಲ್ಲಿ ಭಾಗವಹಿಸದೆ ಖರೀದಿಸುತ್ತಿದ್ದವು. 2023 ರಲ್ಲಿ ಮೇ 25 ರವರೆಗೆ 1.16 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯಗಳು ಖರೀದಿಸಿವೆ ಎಂದು FCI ವೆಬ್‌ಸೈಟ್‌ ಹೇಳುತ್ತದೆ. ಅದರಲ್ಲಿ 97 ಪ್ರತಿಶತ (1.12 ಮೆಟ್ರಿಕ್ ಟನ್) ಕರ್ನಾಟಕ ರಾಜ್ಯವೊಂದೇ ಖರೀದಿಸಿತ್ತು.

ಇದನ್ನೂ ಓದಿ: ಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ ವಿರುದ್ಧ ಡಿಕೆಶಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...