Homeಮುಖಪುಟಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರೇ ಇಲ್ಲ!

ಕರ್ನಾಟಕಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುವವರೇ ಇಲ್ಲ!

ಜೂನ್ 12 ರಂದು ಎಫ್‌ಸಿಐ ಕರ್ನಾಟಕಕ್ಕೆ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದೇ ದಿನದಲ್ಲಿ ಕೇಂದ್ರ ಸರ್ಕಾರದ ಸೂಚನೆಯನ್ವಯ ಉಲ್ಟಾ ಹೊಡೆದಿತ್ತು.

- Advertisement -
- Advertisement -

ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳಲು ಅವಕಾಶ ನಿರಾಕರಿಸಿದ ನಂತರ FCI ಇ-ಹರಾಜಿನಲ್ಲಿ ಅಕ್ಕಿ ಕೊಳ್ಳುಲು ಯಾರು ಮುಂದೆ ಬಂದಿಲ್ಲ ಎಂದು ವರದಿಯಾಗಿದೆ.

ರಾಜ್ಯಗಳಿಗೆ ಅಕ್ಕಿ ಮಾರಬಾರದೆಂದು ಆದೇಶಿಸಿದ್ದ ಕೇಂದ್ರ ಸರ್ಕಾರವು ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಅಕ್ಕಿ ಮತ್ತು ಗೋಧಿ ಧಾನ್ಯಗಳನ್ನು ಇ-ಹರಾಜು ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚಿಸಿತ್ತು. ಆದರೆ ಕಳೆದ ವಾರ ಎಫ್‌ಸಿಐ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹರಾಜಿಗಿಟ್ಟರೂ ಸಹ ಕೇವಲ 170 ಮೆಟ್ರಿಕ್ ಟನ್‌ಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಅಂದರೆ ಹೆಚ್ಚಿನ ಖರೀದಿದಾರರು ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರಗಳು ಈ ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಮತ್ತು ಖಾಸಗಿ ಉದ್ದಿಮೆದಾರರು ಮಾತ್ರ ಭಾಗವಹಿಸಬಹುದಾಗಿದ್ದರಿಂದ ಎಫ್‌ಸಿಐಗೆ ಈ ಸಂಕಷ್ಟ ಎದುರಾಗಿದೆ.

ಜುಲೈ 5 ರಂದು ನಡೆದ ಇ-ಹರಾಜಿನಲ್ಲಿ, ಎಫ್‌ಸಿಐ 19 ರಾಜ್ಯಗಳು ಮತ್ತು ಎನ್‌ಇಎಫ್ (ನಾರ್ತ್ ಈಸ್ಟ್ ಫ್ರಾಂಟಿಯರ್) ಪ್ರದೇಶದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿತ್ತು. ಆದರೆ ಮಹಾರಾಷ್ಟ್ರ (70 ಮೆಟ್ರಿಕ್ ಟನ್), ಗುಜರಾತ್ (50 ಮೆಟ್ರಿಕ್ ಟನ್) ಮತ್ತು ಕರ್ನಾಟಕ (40 ಮೆಟ್ರಿಕ್ ಟನ್) – ಮತ್ತು NEF ಪ್ರದೇಶ (10 ಮೆಟ್ರಿಕ್ ಟನ್) ಮಾತ್ರ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬಿಡ್ ಮಾಡಿವೆ. ಉಳಿದ 16 ರಾಜ್ಯಗಳು ಬಿಡ್ ಸಹ ಸಲ್ಲಿಸಿಲ್ಲ.

ಒಂದು ತಿಂಗಳ ಹಿಂದೆಯಷ್ಟೆ ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಎಫ್‌ಸಿಐನಿಂದ 2.28 ಲಕ್ಷ ಮೆಟ್ರಿಕ್ ಟನ್‌ಗಳನ್ನು ಕೋರಿತ್ತು. ಜೂನ್ 12 ರಂದು ಎರಡು ಪತ್ರಗಳಲ್ಲಿ ಎಫ್‌ಸಿಐ ಸುಮಾರು 2.22 ಲಕ್ಷ ಮೆಟ್ರಿಕ್ ಟನ್ ಪೂರೈಸಲು ಒಪ್ಪಿಕೊಂಡಿತ್ತು. ಆದರೆ ಒಂದು ದಿನದ ನಂತರ, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡುವುದರ ವಿರುದ್ಧ FCI ಗೆ ನಿರ್ದೇಶನ ನೀಡಿತು. ಜೂನ್ 14 ರಂದು, ಎಫ್‌ಸಿಐ ಕರ್ನಾಟಕಕ್ಕೆ ಅಕ್ಕಿ ಹಂಚಿಕೆ ಆದೇಶವನ್ನು ರದ್ದುಗೊಳಿಸಿತು.

ಅಲ್ಲದೇ ಕೇಂದ್ರ ಸರ್ಕಾರದ ಸೂಚನೆಗೆ ಅನುಗುಣವಾಗಿ FCI ಇ-ಹರಾಜಿನಲ್ಲಿ ಅಕ್ಕಿ ಮಾರಲು ನಿರ್ಧರಿಸಿತ್ತು. ಆದರೆ 3 ಲಕ್ಷದ 86 ಸಾವಿರ ಟನ್ ಅಕ್ಕಿ ಇದ್ದರೆ ಕೇವಲ 170 ಟನ್‌ಗೆ ಮಾತ್ರ ಬಿಡ್ ಸಲ್ಲಿಸಲಾಗಿದೆ. ಹಾಗಾಗಿ ಈ ಸಮಸ್ಯೆಗೆ ಪರಿಹಾರವೆಂದರೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಅಕ್ಕಿ ಕೊಳ್ಳದಂತೆ ತಂದಿರುವ ಆದೇಶವನ್ನು ವಾಪಸ್ ಪಡೆದು ಅವಕಾಶ ನೀಡಬೇಕಿದೆ.

ಜೂನ್ 13 ರ ಮೊದಲು, ರಾಜ್ಯಗಳು ತಮ್ಮ ಸ್ವಂತ ಯೋಜನೆಗಳಿಗೆ ಕ್ವಿಂಟಾಲ್‌ಗೆ 3,400 ರೂ ದರದಲ್ಲಿ ಎಫ್‌ಸಿಐನಿಂದ ಅಕ್ಕಿ (ಬಲವರ್ಧಿತ ಅಕ್ಕಿ ಸೇರಿದಂತೆ) ಇ-ಹರಾಜಿನಲ್ಲಿ ಭಾಗವಹಿಸದೆ ಖರೀದಿಸುತ್ತಿದ್ದವು. 2023 ರಲ್ಲಿ ಮೇ 25 ರವರೆಗೆ 1.16 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯಗಳು ಖರೀದಿಸಿವೆ ಎಂದು FCI ವೆಬ್‌ಸೈಟ್‌ ಹೇಳುತ್ತದೆ. ಅದರಲ್ಲಿ 97 ಪ್ರತಿಶತ (1.12 ಮೆಟ್ರಿಕ್ ಟನ್) ಕರ್ನಾಟಕ ರಾಜ್ಯವೊಂದೇ ಖರೀದಿಸಿತ್ತು.

ಇದನ್ನೂ ಓದಿ: ಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ ವಿರುದ್ಧ ಡಿಕೆಶಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...