Homeಮುಖಪುಟತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿ ಇಂದಿನ ಸಮಸ್ಯೆಗಳಿಗೆ ಮೊಘಲರನ್ನು ದೂಷಿಸಲಾಗುತ್ತಿದೆ.

- Advertisement -
- Advertisement -

ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದು ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಮಾರ್ಚ್ 3 ರಂದು ZEE5 ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವ ‘ತಾಜ್ – ಡಿವೈಡೆಡ್ ಬೈ ಬ್ಲಡ್’ ವೆಬ್ ಸೀರಿಸ್ ನಲ್ಲಿ ಅವರು ರಾಜ ಅಕ್ಬರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಅವರನ್ನು ಮಾತಿಗೆಳೆದಿದೆ.

ಇಂದು ಏನೇ ತಪ್ಪುಗಳು ನಡೆದರೂ ಆ ಎಲ್ಲಾ ತಪ್ಪುಗಳಿಗೆ ಮೊಘಲರ ಆಡಳಿತವೇ ಕಾರಣ ಎಂದು ನಂಬುವ ಜನರಿರುವ ದೇಶವನ್ನು ನೀವು ಹೇಗೆ ನೋಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಜನರು ಅಕ್ಬರ್ ಮತ್ತು ನಾದರ್ ಶಾ ಅಥವಾ ಬಾಬರ್‌ನ ಮುತ್ತಜ್ಜ ತೈಮೂರ್‌ನಂತಹ ಆಕ್ರಮಣಕಾರರ ನಡುವಿನ ವ್ಯತ್ಯಾಸವನ್ನು ಹೇಳಲು ಸಾಧ್ಯವಿಲ್ಲ. ಇದೆಲ್ಲ ನೋಡಿದರೆ ನಗು ಬರುತ್ತದೆ, ಏಕೆಂದರೆ ಈ ಪ್ರಶ್ನೆಗಳೇ ಹಾಸ್ಯಾಸ್ಪದವಾಗಿವೆ” ಎಂದಿದ್ದಾರೆ.

”ಈ ದೇಶಕ್ಕೆ ಎಲ್ಲರೂ ಲೂಟಿ ಮಾಡಲು ಬಂದರು. ಆದರೆ ಮೊಘಲರು ಲೂಟಿ ಮಾಡಲು ಇಲ್ಲಿಗೆ ಬಂದಿಲ್ಲ. ಅವರು ಇದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಬಂದರು ಮತ್ತು ಅದನ್ನೇ ಅವರು ಮಾಡಿದರು. ಅವರ ಕೊಡುಗೆಯನ್ನು ಯಾರಾದರೂ ನಿರಾಕರಿಸಬಹುದೆ?” ಎಂದು ಶಾ ಪ್ರಶ್ನಿಸಿದ್ದಾರೆ.

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿಯೆ ಬಹುಶಃ ಭಾರತದ ಒಂದಷ್ಟು ಜನರ ಗುಂಪು ಭೂತಕಾಲದ ಮೇಲೆ ಅದರಲ್ಲೂ ಮೊಘಲ್ ಸಾಮ್ರಾಜ್ಯವನ್ನು ದೂಷಿಸುತ್ತಿದೆ. ಇದು ನನಗೆ ಕೋಪಕ್ಕಿಂತ ಹೆಚ್ಚಾಗಿ ನಗು ತರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮೊಘಲರು ಕೇವಲ ದುಷ್ಕೃತ್ಯಗಳನ್ನೇ ನಡೆಸಿದ್ದಾರೆ ಎಂಬ ಕಲ್ಪನೆಯು ದೇಶದ ಇತಿಹಾಸದ ಬಗ್ಗೆ ತಿಳುವಳಿಕೆಯ ಕೊರತೆಯನ್ನು ತೋರಿಸುತ್ತದೆ. ಇತಿಹಾಸದ ಪುಸ್ತಕಗಳಲ್ಲಿ ಭಾರತದ ಸ್ಥಳೀಯ ಸಂಸ್ಕೃತಿಗಿಂತ ಮೊಘಲರ ವೈಭವೀಕರಣ ಮಾಡಿರುವುದು ನಿಜ. ಆದರೆ ಇತಿಹಾಸದಲ್ಲಿ ಮೊಘಲ್ ಕಾಲವನ್ನು ದುರಂತವೆಂದು ನಾವು ತಿರಸ್ಕರಿಸಬಾರದು ಎಂದು ಅವರು ಹೇಳಿದ್ದಾರೆ.

”ದುರದೃಷ್ಟವಶಾತ್ ಶಾಲೆಯ ಇತಿಹಾಸದ ಪುಸ್ತಕಗಳಲ್ಲಿ ಮುಖ್ಯವಾಗಿ ಮೊಘಲರು ಅಥವಾ ಬ್ರಿಟಿಷರ ಬಗ್ಗೆ ಹೆಚ್ಚು ತಿಳಿಸಿಕೊಡಲಾಗುತ್ತದೆ. ನಮಗೆ ಲಾರ್ಡ್ ಹಾರ್ಡಿ, ಲಾರ್ಡ್ ಕಾರ್ನ್‌ವಾಲಿಸ್ ಮತ್ತು ಮೊಘಲ್ ಚಕ್ರವರ್ತಿಗಳ ಬಗ್ಗೆ ತಿಳಿದಿದೆ. ಆದರೆ ನಮಗೆ ಗುಪ್ತ ರಾಜವಂಶದ ಬಗ್ಗೆ ಅಥವಾ ಮೌರ್ಯ ಸಾಮ್ರಾಜ್ಯದ ಬಗ್ಗೆ ಅಥವಾ ವಿಜಯನಗರ ಸಾಮ್ರಾಜ್ಯದ ಬಗ್ಗೆ, ಅಜಂತಾ ಗುಹೆಗಳ ಇತಿಹಾಸ ಅಥವಾ ಈಶಾನ್ಯದ ಬಗ್ಗೆ ಹೆಚ್ಚು ತಿಳಿದಿಲ್ಲ. ನಾವು ಈ ಯಾವುದೇ ವಿಷಯಗಳನ್ನು ಓದಲಿಲ್ಲ ಏಕೆಂದರೆ ಇತಿಹಾಸವನ್ನು ಇಂಗ್ಲಿಷ್ ಅಥವಾ ಆಂಗ್ಲರು ಬರೆದಿದ್ದಾರೆ ಮತ್ತು ಇದು ನಿಜವಾಗಿಯೂ ಅನ್ಯಾಯವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಆದ್ದರಿಂದ ಜನರು ಹೇಳುತ್ತಿರುವುದು ಸ್ವಲ್ಪ ಮಟ್ಟಿಗೆ ನಿಜ. ಇತಿಹಾಸ ಪಠ್ಯದಲ್ಲಿ ಮೊಘಲರನ್ನು ವೈಭವೀಕರಿಸಲಾಗಿದೆ. ಆದರೆ ಅವರನ್ನು ವಿಲನ್ ಮಾಡುವ ಅಗತ್ಯವಿಲ್ಲ. ಮೊಘಲ್ ಸಾಮ್ರಾಜ್ಯವು ತುಂಬಾ ರಾಕ್ಷಸತನದಿಂದ ಕೂಡಿತ್ತು ಎಂದು ಅದನ್ನು ವಿರೋಧಿಸುವವರು, ಮೊಘಲರು ನಿರ್ಮಿಸಿದ ಸ್ಮಾರಕಗಳನ್ನು ಏಕೆ ಕೆಡವುವುದಿಲ್ಲ? ಅವರು ಮಾಡಿದ್ದೆಲ್ಲವೂ ಭಯಾನಕವಾಗಿದ್ದರೆ, ತಾಜ್ ಮಹಲ್ ಕೆಡವಿ, ಕೆಂಪು ಕೋಟೆಯನ್ನು ಕೆಡವಿ, ಕುತುಬ್ ಮಿನಾರ್‌ನ್ನು ಕೆಡವಿ. ಬದಲಿಗೆ ನಾವು ಕೆಂಪು ಕೋಟೆಯನ್ನು ಏಕೆ ಪವಿತ್ರವೆಂದು ಪರಿಗಣಿಸುತ್ತೇವೆ? ಇದನ್ನು ಮೊಘಲರು ನಿರ್ಮಿಸಿದರು. ನಾವು ಅವರನ್ನು ವೈಭವೀಕರಿಸುವ ಅಗತ್ಯವಿಲ್ಲ, ಆದರೆ ಅವರನ್ನು ನಿಂದಿಸುವ ಅಗತ್ಯವೂ ಇಲ್ಲ ಎಂದು ನಾಸಿರುದ್ದೀನ್ ಶಾ ಹೇಳಿದ್ದಾರೆ.

ಈ ಕುರಿತು ಬೌದ್ಧಿಕ ಚರ್ಚೆಗೆ ಅವಕಾಶ ಇದೆಯೇ ಎಂಬ ಪ್ರಶ್ನೆಗೆ ನಾಸಿರುದ್ದೀನ್ ಶಾ ಖಂಡಿತ ಅಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದಿದ್ದಾರೆ. ಮುಂದುವರಿದು “ಟಿಪ್ಪು ಸುಲ್ತಾನ್‌ ಆಂಗ್ಲರನ್ನು ಭಾರತದಿಂದ ಓಡಿಸಲು ತನ್ನ ಪ್ರಾಣವನ್ನೇ ಕೊಟ್ಟ ವ್ಯಕ್ತಿ. ಆದರೆ ಅಂತಹ ವ್ಯಕ್ತಿಯನ್ನೇ ಇಂದು ತುಚ್ಚೀಕರಿಸಲಾಗುತ್ತಿದೆ. ‘ನಿಮಗೆ ಟಿಪ್ಪು ಸುಲ್ತಾನ್ ಬೇಕಾ ಅಥವಾ ರಾಮ ಮಂದಿರ ಬೇಕೇ?’ ಎಂದು ಪ್ರಶ್ನಿಸುತ್ತಿದ್ದಾರೆ. ಇದು ಯಾವ ರೀತಿಯ ತರ್ಕ? ಈ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ನಾನು ಭಾವಿಸಿದ್ದೇನೆ, ಏಕೆಂದರೆ ಅವರು ಎಂದಿಗೂ ನನ್ನ ದೃಷ್ಟಿಕೋನದಲ್ಲಿ ಯೋಚಿಸಲು ಮತ್ತು ನಾನು ಅವರ ದೃಷ್ಟಿಕೋನದಲ್ಲಿ ಯೋಚಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಆಳುವ ಸರ್ಕಾರದ ಮಂತ್ರಿಗಳು ನಿರಂತರವಾಗಿ ಮೊಘಲ್ ಯುಗವನ್ನು ನಿಂದಿಸುತ್ತಿದ್ದಾರೆ. ಮೊಘಲರ ಕಾಲದ ಹೆಸರುಗಳಿರುವ 40 ಹಳ್ಳಿಗಳ ಹೆಸರು ಬದಲಾಯಿಸಲು ಪ್ರಯತ್ನಿಸುವುದರಿಂದ ಹಿಡಿದು ಇತ್ತಿಚೇಗೆ ರಾಷ್ಟ್ರಪತಿ ಭವನದಲ್ಲಿರುವ ಐತಿಹಾಸಿಕ ಮೊಘಲ್ ಉದ್ಯಾನವನ್ನು ‘ಅಮೃತ್ ಉದ್ಯಾನ್’ ಎಂದು ಮರುನಾಮಕರಣ ಮಾಡುವವರೆಗೆ ಇತಿಹಾಸವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ, ಕಾಶಿ, ಕೇದಾರನಾಥ ಮತ್ತು ಬದರಿನಾಥ್ ಅಭಿವೃದ್ಧಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವವರು ಚುನಾವಣೆ ಎದುರಿಸುತ್ತಿದ್ದಾರೆ. ಇಬ್ಬರಲ್ಲಿ ಯಾರನ್ನು ಆರಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ನಾಸಿರುದ್ದೀನ್ ಶಾರವರ ಮೇಲಿನ ಮಾತುಗಳು ಬಹಳ ಮಹತ್ವ ಪಡೆಯುತ್ತವೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌

ಇದನ್ನೂ ಓದಿ: ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...